ಬ್ರೇಕಿಂಗ್ ನ್ಯೂಸ್
06-09-20 02:17 pm Bangalore Correspondant ಕ್ರೈಂ
ಬೆಂಗಳೂರು, ಸೆಪ್ಟೆಂಬರ್ 6: ಬಿಬಿಎಂಪಿ ಕಾರ್ಪೋರೇಟರ್ ಒಬ್ಬರ ಮಗನಿಗೆ ಡ್ರಗ್ ನಂಟಿನ ಬಗ್ಗೆ ತನಿಖೆ ನಡೆಸುತ್ತಿರುವ ಎನ್ ಸಿಬಿ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ.
ರಾಜಾಜಿನಗರದ ಕಾರ್ಪೋರೇಟರ್ ಕೇಶವ ಮೂರ್ತಿ ಮಗ ಯಶಸ್ ಮತ್ತು ಮುಂಬೈನಲ್ಲಿ ಬಂಧಿಯಾಗಿರುವ ಡ್ರಗ್ ಪೆಡ್ಲರ್ ಮಹಮ್ಮದ್ ರೆಹಮಾನ್ ನಡುವೆ ಸಂಪರ್ಕ ಇದ್ದುದು ಪತ್ತೆಯಾಗಿತ್ತು. ಹೀಗಾಗಿ ಬೆಂಗಳೂರಿಗೆ ಆಗಮಿಸಿದ್ದ ಎನ್ಸಿಬಿ ಅಧಿಕಾರಿಗಳು ಕಾರ್ಪೋರೇಟರ್ ಮನೆಯಲ್ಲಿ ಪರಿಶೀಲನೆ ನಡೆಸಿದ್ದಾರೆ. ಆದರೆ ಈ ವೇಳೆ ಯಾವುದೇ ಮಾದಕ ವಸ್ತುಗಳು ಪತ್ತೆಯಾಗಿಲ್ಲ. ಸದ್ಯ ವಿಚಾರಣೆಗೆ ಹಾಜರಾಗಲು ಕಾರ್ಪೋರೇಟರ್ ಮಗನಿಗೆ ಎನ್ಸಿಬಿ ನೋಟಿಸ್ ನೀಡಿದೆ. ಮುಂಬೈ ಡ್ರಗ್ಸ್ ಪೆಡ್ಲರ್ ಮಹಮದ್ ರೆಹಮಾನ್ ಜತೆ ಸೇರಿ ಡ್ರಗ್ಸ್ ಖರೀದಿ ಮತ್ತು ಡ್ರಗ್ಸ್ ಮಾರಾಟ ಮಾಡಿರುವ ಅನುಮಾನದ ಮೇಲೆ ನೋಟಿಸ್ ನೀಡಿ, ವಿಚಾರಣೆಗೆ ಕರೆದಿದ್ದಾರೆ. ಮುಂಬೈನ ಎನ್ಸಿಬಿ ಕಚೇರಿಗೆ ಆಗಮಿಸಿ ವಿವರಣೆ ನೀಡುವಂತೆ ನೋಟಿಸ್ನಲ್ಲಿ ಉಲ್ಲೇಖಿಸಲಾಗಿದೆ.
ಡ್ರಗ್ಸ್ ಪೆಡ್ಲಿಂಗ್ ಜೊತೆಗೆ ಈ ನಿಕಟವರ್ತಿಗಳಿಗೆ ಯಶಸ್ ಹಲವು ಬಾರಿ ಹಣ ವರ್ಗಾವಣೆ ಮಾಡಿರುವುದೂ ಪತ್ತೆಯಾಗಿದೆ. ಸದ್ಯ ಕೇಶವ ಮೂರ್ತಿ ಮಗ ಯಶಸ್ ನಾಪತ್ತೆಯಾಗಿದ್ದು, ಆತನಿಗಾಗಿ ಎನ್ಸಿಬಿ ಹುಡುಕಾಟ ನಡೆಸುತ್ತಿದೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಕಾರ್ಪೊರೇಟರ್ ಕೇಶವಮೂರ್ತಿ, ಮಗನಿಗೆ ಧೈರ್ಯವಾಗಿರಲು ಹೇಳಿದ್ದೇನೆ. ಮಗ ತಪ್ಪು ಮಾಡಿಲ್ಲ. ಎರಡು ಬಾರಿ ಗೋವಾಗೆ ಹೋಗಿ ಬಂದಿದ್ದ. ಬಂಧಿತರ ಮೊಬೈಲ್ ನಲ್ಲಿ ಮಗನ ನಂಬರ್ ಇದ್ದ ಕಾರಣಕ್ಕೆ ವಿಚಾರಣೆಗೆ ಕರೆದಿದ್ದಾರೆ ಅಷ್ಟೇ ಎಂದು ಹೇಳಿದ್ದಾರೆ.
09-01-26 04:42 pm
Bangalore Correspondent
ಹುಬ್ಬಳ್ಳಿ ಮಹಿಳೆ ವಿವಸ್ತ್ರ ಪ್ರಕರಣ ಸಿಐಡಿ ತನಿಖೆಗೆ...
09-01-26 02:05 pm
ಕನಕಪುರ ತಾಲೂಕಿನಲ್ಲಿ 63 ಅಕ್ರಮ ಲೇಔಟ್, 28 ಪಿಜಿಗಳ...
08-01-26 11:06 pm
ಪೊಲೀಸರ ಸಭೆ ನಡೆಸಲು ಡಿ.ಕೆ.ಶಿ. ಯಾರು? ರಾಜ್ಯದಲ್ಲಿ...
08-01-26 10:45 pm
ಸಿಎಂ ಕುರ್ಚಿ ಕದನಕ್ಕೆ ದಿಢೀರ್ ಬ್ರೇಕ್ ; ಡಿಕೆಶಿಗೆ...
08-01-26 09:36 pm
09-01-26 11:00 pm
HK News Desk
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
ರಷ್ಯಾ ತೈಲ ಖರೀದಿ ನಿಲ್ಲಿಸಲು ಅಮೆರಿಕ ಹೊಸ ಮಸೂದೆ ;...
08-01-26 05:11 pm
ಮಹಾರಾಷ್ಟ್ರ ನಗರಸಭೆಯಲ್ಲಿ ಬಿಜೆಪಿ ಜೊತೆಗೆ ಮೈತ್ರಿ ;...
08-01-26 03:12 pm
09-01-26 09:18 pm
Mangalore Correspondent
ಉದ್ಯೋಗ ಖಾತ್ರಿ ಯೋಜನೆಯನ್ನೇ ಮೋದಿ ಕೊಂದಾಕಿದ್ದಾರೆ,...
09-01-26 05:47 pm
ಪಿಎಂ ಕೇರ್ ಫಂಡ್ ಹೆಸರಲ್ಲಿ ಖಾಸಗಿ ಟ್ರಸ್ಟಿಗೆ ಸಾವಿರ...
09-01-26 03:21 pm
ಮಾನವ –ಪ್ರಾಣಿ ಸಂಘರ್ಷ ತಡೆಗೆ ಕಮಾಂಡ್ ಸೆಂಟರ್, 1926...
09-01-26 01:15 pm
ಜ.11 ರಂದು ಕೊಡಿಯಾಲದಲ್ಲಿ ಸುಧೀಂದ್ರ ತೀರ್ಥ ಜನ್ಮಶತಮ...
08-01-26 08:48 pm
07-01-26 10:45 pm
Bangalore Correspondent
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm