ಬ್ರೇಕಿಂಗ್ ನ್ಯೂಸ್
06-09-20 02:17 pm Bangalore Correspondant ಕ್ರೈಂ
ಬೆಂಗಳೂರು, ಸೆಪ್ಟೆಂಬರ್ 6: ಬಿಬಿಎಂಪಿ ಕಾರ್ಪೋರೇಟರ್ ಒಬ್ಬರ ಮಗನಿಗೆ ಡ್ರಗ್ ನಂಟಿನ ಬಗ್ಗೆ ತನಿಖೆ ನಡೆಸುತ್ತಿರುವ ಎನ್ ಸಿಬಿ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ.
ರಾಜಾಜಿನಗರದ ಕಾರ್ಪೋರೇಟರ್ ಕೇಶವ ಮೂರ್ತಿ ಮಗ ಯಶಸ್ ಮತ್ತು ಮುಂಬೈನಲ್ಲಿ ಬಂಧಿಯಾಗಿರುವ ಡ್ರಗ್ ಪೆಡ್ಲರ್ ಮಹಮ್ಮದ್ ರೆಹಮಾನ್ ನಡುವೆ ಸಂಪರ್ಕ ಇದ್ದುದು ಪತ್ತೆಯಾಗಿತ್ತು. ಹೀಗಾಗಿ ಬೆಂಗಳೂರಿಗೆ ಆಗಮಿಸಿದ್ದ ಎನ್ಸಿಬಿ ಅಧಿಕಾರಿಗಳು ಕಾರ್ಪೋರೇಟರ್ ಮನೆಯಲ್ಲಿ ಪರಿಶೀಲನೆ ನಡೆಸಿದ್ದಾರೆ. ಆದರೆ ಈ ವೇಳೆ ಯಾವುದೇ ಮಾದಕ ವಸ್ತುಗಳು ಪತ್ತೆಯಾಗಿಲ್ಲ. ಸದ್ಯ ವಿಚಾರಣೆಗೆ ಹಾಜರಾಗಲು ಕಾರ್ಪೋರೇಟರ್ ಮಗನಿಗೆ ಎನ್ಸಿಬಿ ನೋಟಿಸ್ ನೀಡಿದೆ. ಮುಂಬೈ ಡ್ರಗ್ಸ್ ಪೆಡ್ಲರ್ ಮಹಮದ್ ರೆಹಮಾನ್ ಜತೆ ಸೇರಿ ಡ್ರಗ್ಸ್ ಖರೀದಿ ಮತ್ತು ಡ್ರಗ್ಸ್ ಮಾರಾಟ ಮಾಡಿರುವ ಅನುಮಾನದ ಮೇಲೆ ನೋಟಿಸ್ ನೀಡಿ, ವಿಚಾರಣೆಗೆ ಕರೆದಿದ್ದಾರೆ. ಮುಂಬೈನ ಎನ್ಸಿಬಿ ಕಚೇರಿಗೆ ಆಗಮಿಸಿ ವಿವರಣೆ ನೀಡುವಂತೆ ನೋಟಿಸ್ನಲ್ಲಿ ಉಲ್ಲೇಖಿಸಲಾಗಿದೆ.
ಡ್ರಗ್ಸ್ ಪೆಡ್ಲಿಂಗ್ ಜೊತೆಗೆ ಈ ನಿಕಟವರ್ತಿಗಳಿಗೆ ಯಶಸ್ ಹಲವು ಬಾರಿ ಹಣ ವರ್ಗಾವಣೆ ಮಾಡಿರುವುದೂ ಪತ್ತೆಯಾಗಿದೆ. ಸದ್ಯ ಕೇಶವ ಮೂರ್ತಿ ಮಗ ಯಶಸ್ ನಾಪತ್ತೆಯಾಗಿದ್ದು, ಆತನಿಗಾಗಿ ಎನ್ಸಿಬಿ ಹುಡುಕಾಟ ನಡೆಸುತ್ತಿದೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಕಾರ್ಪೊರೇಟರ್ ಕೇಶವಮೂರ್ತಿ, ಮಗನಿಗೆ ಧೈರ್ಯವಾಗಿರಲು ಹೇಳಿದ್ದೇನೆ. ಮಗ ತಪ್ಪು ಮಾಡಿಲ್ಲ. ಎರಡು ಬಾರಿ ಗೋವಾಗೆ ಹೋಗಿ ಬಂದಿದ್ದ. ಬಂಧಿತರ ಮೊಬೈಲ್ ನಲ್ಲಿ ಮಗನ ನಂಬರ್ ಇದ್ದ ಕಾರಣಕ್ಕೆ ವಿಚಾರಣೆಗೆ ಕರೆದಿದ್ದಾರೆ ಅಷ್ಟೇ ಎಂದು ಹೇಳಿದ್ದಾರೆ.
01-06-25 10:08 pm
HK News Desk
Tobacco Ban, Karnataka: ಸಾರ್ವಜನಿಕ ಸ್ಥಳಗಳಲ್ಲಿ...
01-06-25 09:37 pm
ಎಚ್ಎಂಟಿ ಅರಣ್ಯ ಭೂಮಿಯಲ್ಲಿ ರಿಯಲ್ ಎಸ್ಟೇಟ್ ದಂಧೆ ;...
01-06-25 08:33 pm
Karnataka Traffic Police New Rules: ಸಕಾರಣವಿಲ್...
01-06-25 11:50 am
Siddaramaiah, HD Kumaraswamy: ಸಿದ್ದರಾಮಯ್ಯನವರೇ...
31-05-25 09:41 pm
01-06-25 12:35 pm
HK News Desk
ಮಲಪ್ಪುರಂನಲ್ಲಿ ಕುಸಿದು ಹೋದ ರಾಷ್ಟ್ರೀಯ ಹೆದ್ದಾರಿ,...
26-05-25 11:34 pm
ಭಯೋತ್ಪಾದನೆ ವಿರುದ್ಧ ಭಾರತದ ರಾಜತಾಂತ್ರಿಕ ಬಲವರ್ಧನೆ...
26-05-25 10:13 pm
Gujrath, ATS: ಪಾಕ್ ಐಎಸ್ಐಗೆ ದೇಶದ ಭದ್ರತೆ ಬಗ್ಗೆ...
26-05-25 09:50 pm
ಪಾಕ್ ಐಎಸ್ಐಗೆ ದೇಶದ ಭದ್ರತೆ ಬಗ್ಗೆ ಸೂಕ್ಷ್ಮ ಮಾಹಿತಿ...
26-05-25 08:33 pm
01-06-25 12:32 pm
Mangalore Correspondent
Mangalore Congress, Notice: ಪಕ್ಷದ ಸೂಚನೆ ಮೀರಿ...
01-06-25 11:59 am
ಕೋಮು ಪ್ರಚೋದಕ ಭಾಷಣಕ್ಕೆ ಕಠಿಣ ಕ್ರಮಕ್ಕೆ ಮುಸ್ಲಿಂ ನ...
31-05-25 11:14 pm
Mangalore Police Chief Sudheer Kumar Reddy, V...
31-05-25 10:57 pm
Mangalore Rain, Ullal, Flood, Death: ಗುಡ್ಡ ಕು...
31-05-25 07:18 pm
01-06-25 07:56 pm
HK News Desk
Bantwal Crime, Mangalore, Stone Petling: ಮುಸ್...
31-05-25 10:47 pm
Mangalore crime, Threat: ಲಿಸ್ಟ್ ರೆಡಿ ಮಾಡಿದ್ದೇ...
29-05-25 11:04 pm
Mangalore Crime, Konaje: ಮೊಂಟೆಪದವು ಕೆರೆಯಲ್ಲಿ...
29-05-25 07:59 pm
Mangalore Bantwal Abdul Rehman Murder, Arrest...
29-05-25 06:38 pm