ಬ್ರೇಕಿಂಗ್ ನ್ಯೂಸ್
06-09-20 02:39 pm Headline Karnataka News Network ಕ್ರೈಂ
ತಿರುವನಂತಪುರಂ, ಸೆಪ್ಟೆಂಬರ್ 6: ಕೊರೊನಾ ಸೋಂಕಿಗೆ ಒಳಗಾದ ಯುವತಿಯನ್ನು ಆಂಬುಲೆನ್ಸ್ ನಲ್ಲಿ ಒಯ್ಯುತ್ತಿದ್ದಾಗ ಅದರ ಚಾಲಕನೇ ಯುವತಿಯ ಅತ್ಯಾಚಾರಗೈದ ಘಟನೆ ಕೇರಳದ ಪತ್ತನಂತಿಟ್ಟ ಜಿಲ್ಲೆಯಲ್ಲಿ ನಡೆದಿದೆ.
ಇಬ್ಬರು ಯುವತಿಯರಿಗೆ ನಿನ್ನೆ ಸಂಜೆ ಕೊರೊನಾ ಪಾಸಿಟಿವ್ ಆಗಿತ್ತು. ಅದರಂತೆ, ರಾತ್ರಿ ಹೊತ್ತಿಗೆ ಆಂಬುಲೆನ್ಸ್ ಬಂದಿದ್ದು ಒಬ್ಬಳನ್ನು ಒಂದು ಆಸ್ಪತ್ರೆಗೆ ದಾಖಲು ಮಾಡಿದ ಆರೋಗ್ಯ ಅಧಿಕಾರಿಗಳು ಇನ್ನೊಬ್ಬ ಯುವತಿಯನ್ನು ಬೇರೊಂದು ಆಸ್ಪತ್ರೆಗೆ ಒಯ್ಯಲು ಚಾಲಕನಲ್ಲಿ ಸೂಚಿಸಿದ್ದರು. ಆದರೆ, ಮಧ್ಯರಾತ್ರಿಯಲ್ಲಿ ಚಾಲಕ ಯುವತಿಯನ್ನು ಒಯ್ಯುತ್ತಿದ್ದಂತೆ ನಡುದಾರಿಯಲ್ಲಿ ಆಂಬುಲೆನ್ಸ್ ನಿಲ್ಲಿಸಿದ್ದು ವಾಹನದಲ್ಲಿಯೇ ರೇಪ್ ಮಾಡಿದ್ದಾನೆ. ಬಳಿಕ ಆಸ್ಪತ್ರೆಗೆ ಒಯ್ದಿದ್ದು 22 ವರ್ಷದ ಯುವತಿ ತನಗಾದ ಕೃತ್ಯವನ್ನು ಅಲ್ಲಿನ ಸಿಬಂದಿಗೆ ತಿಳಿಸಿದ್ದಾಳೆ. ವೈದ್ಯರು ಲೈಂಗಿಕ ಕಿರುಕುಳ ಆಗಿರುವುದನ್ನು ದೃಢಪಡಿಸಿದ್ದಾರೆ.

ಆನಂತ್ರ, ಪೊಲೀಸರು ಕೆಲವೇ ಹೊತ್ತಲ್ಲಿ ಆಂಬುಲೆನ್ಸ್ ಚಾಲಕನನ್ನು ಬಂಧಿಸಿದ್ದಾರೆ. ಆರೋಪಿ ಯುವಕ ಇತರೇ ಅಪರಾಧ ಕೃತ್ಯಗಳ ಹಿನ್ನೆಲೆ ಹೊಂದಿದ್ದಾನೆ ಎನ್ನುವುದು ತಿಳಿದುಬಂದಿದ್ದು ಇಂಥ ವ್ಯಕ್ತಿಗೆ ಆಂಬುಲೆನ್ಸ್ ಚಾಲಕ ವೃತ್ತಿಗೆ ನೇಮಿಸಿಕೊಂಡಿದ್ದು ಯಾಕೆಂದು ಆರೋಗ್ಯ ಕಾರ್ಯಕರ್ತರು ಪ್ರಶ್ನೆ ಮಾಡಿದ್ದಾರೆ. ಅಲ್ಲದೆ, ಪ್ರತಿ ಆಂಬುಲೆನ್ಸ್ ವಾಹನದಲ್ಲಿ ಇಬ್ಬರು ಇರಬೇಕು. ಮಹಿಳೆಯರು ಮಾತ್ರ ಪೇಶಂಟ್ ಆಗಿರುವಾಗ ಜಾಗ್ರತೆ ವಹಿಸಬೇಕು ಎಂದು ಆಗ್ರಹಿಸಿದ್ದಾರೆ. ಘಟನೆ ಬಗ್ಗೆ ರಾಜ್ಯ ಆರೋಗ್ಯ ಇಲಾಖೆ ತನಿಖೆಗೆ ಆದೇಶ ಮಾಡಿದೆ.
29-05-26 10:41 pm
HK News Staffer
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am