ಬ್ರೇಕಿಂಗ್ ನ್ಯೂಸ್
06-09-20 02:39 pm Headline Karnataka News Network ಕ್ರೈಂ
ತಿರುವನಂತಪುರಂ, ಸೆಪ್ಟೆಂಬರ್ 6: ಕೊರೊನಾ ಸೋಂಕಿಗೆ ಒಳಗಾದ ಯುವತಿಯನ್ನು ಆಂಬುಲೆನ್ಸ್ ನಲ್ಲಿ ಒಯ್ಯುತ್ತಿದ್ದಾಗ ಅದರ ಚಾಲಕನೇ ಯುವತಿಯ ಅತ್ಯಾಚಾರಗೈದ ಘಟನೆ ಕೇರಳದ ಪತ್ತನಂತಿಟ್ಟ ಜಿಲ್ಲೆಯಲ್ಲಿ ನಡೆದಿದೆ.
ಇಬ್ಬರು ಯುವತಿಯರಿಗೆ ನಿನ್ನೆ ಸಂಜೆ ಕೊರೊನಾ ಪಾಸಿಟಿವ್ ಆಗಿತ್ತು. ಅದರಂತೆ, ರಾತ್ರಿ ಹೊತ್ತಿಗೆ ಆಂಬುಲೆನ್ಸ್ ಬಂದಿದ್ದು ಒಬ್ಬಳನ್ನು ಒಂದು ಆಸ್ಪತ್ರೆಗೆ ದಾಖಲು ಮಾಡಿದ ಆರೋಗ್ಯ ಅಧಿಕಾರಿಗಳು ಇನ್ನೊಬ್ಬ ಯುವತಿಯನ್ನು ಬೇರೊಂದು ಆಸ್ಪತ್ರೆಗೆ ಒಯ್ಯಲು ಚಾಲಕನಲ್ಲಿ ಸೂಚಿಸಿದ್ದರು. ಆದರೆ, ಮಧ್ಯರಾತ್ರಿಯಲ್ಲಿ ಚಾಲಕ ಯುವತಿಯನ್ನು ಒಯ್ಯುತ್ತಿದ್ದಂತೆ ನಡುದಾರಿಯಲ್ಲಿ ಆಂಬುಲೆನ್ಸ್ ನಿಲ್ಲಿಸಿದ್ದು ವಾಹನದಲ್ಲಿಯೇ ರೇಪ್ ಮಾಡಿದ್ದಾನೆ. ಬಳಿಕ ಆಸ್ಪತ್ರೆಗೆ ಒಯ್ದಿದ್ದು 22 ವರ್ಷದ ಯುವತಿ ತನಗಾದ ಕೃತ್ಯವನ್ನು ಅಲ್ಲಿನ ಸಿಬಂದಿಗೆ ತಿಳಿಸಿದ್ದಾಳೆ. ವೈದ್ಯರು ಲೈಂಗಿಕ ಕಿರುಕುಳ ಆಗಿರುವುದನ್ನು ದೃಢಪಡಿಸಿದ್ದಾರೆ.

ಆನಂತ್ರ, ಪೊಲೀಸರು ಕೆಲವೇ ಹೊತ್ತಲ್ಲಿ ಆಂಬುಲೆನ್ಸ್ ಚಾಲಕನನ್ನು ಬಂಧಿಸಿದ್ದಾರೆ. ಆರೋಪಿ ಯುವಕ ಇತರೇ ಅಪರಾಧ ಕೃತ್ಯಗಳ ಹಿನ್ನೆಲೆ ಹೊಂದಿದ್ದಾನೆ ಎನ್ನುವುದು ತಿಳಿದುಬಂದಿದ್ದು ಇಂಥ ವ್ಯಕ್ತಿಗೆ ಆಂಬುಲೆನ್ಸ್ ಚಾಲಕ ವೃತ್ತಿಗೆ ನೇಮಿಸಿಕೊಂಡಿದ್ದು ಯಾಕೆಂದು ಆರೋಗ್ಯ ಕಾರ್ಯಕರ್ತರು ಪ್ರಶ್ನೆ ಮಾಡಿದ್ದಾರೆ. ಅಲ್ಲದೆ, ಪ್ರತಿ ಆಂಬುಲೆನ್ಸ್ ವಾಹನದಲ್ಲಿ ಇಬ್ಬರು ಇರಬೇಕು. ಮಹಿಳೆಯರು ಮಾತ್ರ ಪೇಶಂಟ್ ಆಗಿರುವಾಗ ಜಾಗ್ರತೆ ವಹಿಸಬೇಕು ಎಂದು ಆಗ್ರಹಿಸಿದ್ದಾರೆ. ಘಟನೆ ಬಗ್ಗೆ ರಾಜ್ಯ ಆರೋಗ್ಯ ಇಲಾಖೆ ತನಿಖೆಗೆ ಆದೇಶ ಮಾಡಿದೆ.
13-03-26 12:09 pm
HK News Staffer
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
13 ವರ್ಷಗಳಿಂದ ಜೀವನ್ಮರಣ ಹೋರಾಟ ; ಕೋಮಾದಲ್ಲಿದ್ದ ಯು...
11-03-26 07:16 pm
ಪರಿಷತ್ ಚುನಾವಣೆಗೆ ಸಿಗದ ಟಿಕೆಟ್ ; ಬಿಜೆಪಿ ರಾಜ್ಯ ಶ...
11-03-26 06:14 pm
14-03-26 12:51 pm
HK News Staffer
ಅಮೆರಿಕಾ ವೈಮಾನಿಕ ದಾಳಿಯಲ್ಲಿ ಮೊಜ್ತಬಾ ಖಮೇನಿಗೂ ಪೆಟ...
13-03-26 04:18 pm
ಜಮ್ಮು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್...
13-03-26 11:24 am
ಅಮೆರಿಕದ ಪಶ್ಚಿಮ ಕರಾವಳಿಗೆ ಇರಾನ್ ದಾಳಿ ಸಾಧ್ಯತೆ ;...
12-03-26 09:03 pm
ನಷ್ಟ ಪರಿಹಾರ ಕೇಳಿದ ಇರಾನ್ ; ಯುದ್ಧ ನಿಲ್ಲಿಸಲು ಮೂರ...
12-03-26 09:01 pm
13-03-26 10:04 pm
Mangaluru Staffer
ಬಿಲ್ ಕಟ್ಟದ ನೆಪದಲ್ಲಿ ಕೊರಗ ಸಮುದಾಯಕ್ಕೆ ನೀರಿನ ಸಂಪ...
13-03-26 09:58 pm
ರಸ್ತೆ ಬದಿ ಕಸ ಎಸೆಯುವವರ ವಿರುದ್ಧ ಕಠಿಣ ಕ್ರಮ ಜರುಗಿ...
13-03-26 09:38 pm
Excise DC, Srinivas Arrest: ಭ್ರಷ್ಟ ಅಬಕಾರಿ ಡೀಸ...
13-03-26 08:27 pm
Shiradi Ghat Accident, Mangalore: ಶಿರಾಡಿ - ಗು...
13-03-26 05:41 pm
12-03-26 11:20 pm
mangalore
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm