ಬ್ರೇಕಿಂಗ್ ನ್ಯೂಸ್
21-08-21 06:39 pm Mangaluru Correspondent ಕ್ರೈಂ
ಮಂಗಳೂರು, ಆಗಸ್ಟ್ 21: ದೆಹಲಿ ಏಮ್ಸ್ ಆಸ್ಪತ್ರೆಯ ಡಾಕ್ಟರ್ ಅಂತ ಹೇಳಿಕೊಂಡು ವ್ಯಕ್ತಿಯೊಬ್ಬ ನಗರದ ವಿವಿಧ ಹೊಟೇಲ್ ಗಳಲ್ಲಿ ಉಳಿದುಕೊಂಡು ಮೋಸ ಎಸಗಿರುವ ಪ್ರಸಂಗ ನಡೆದಿದ್ದು, ಆರೋಪಿಯನ್ನು ಬಂದರು ಪೊಲೀಸರು ಬಂಧಿಸಿದ್ದಾರೆ.
ತನ್ನನ್ನು ಶ್ರೀನಿವಾಸ ಕೆ. ಎಂದು ಪರಿಚಯಿಸಿದ್ದ ವ್ಯಕ್ತಿ ಅದಕ್ಕಾಗಿ ಏಮ್ಸ್ ಆಸ್ಪತ್ರೆಯಲ್ಲಿ ಪ್ರೊಫೆಸರ್ ಮತ್ತು ಸರ್ಜನ್ ಆಗಿರುವ ಐಡಿ ಒಂದನ್ನು ತೋರಿಸಿದ್ದ. ಸ್ಟೇಟ್ ಬ್ಯಾಂಕ್ ಬಳಿಯ ನೆಲ್ಲಿಕಾಯಿ ರಸ್ತೆಯಲ್ಲಿರುವ ಹೊಟೇಲ್ ಸಿಟಿ ವಾಕ್ ರೆಸಿಡೆನ್ಸಿಯಲ್ಲಿ ರೂಮ್ ಪಡೆದು ಕೊನೆಗೆ ಚೆಕ್ ಔಟ್ ವೇಳೆ, ಹಣ ಕೊಡದೆ ಪರಾರಿಯಾಗಿದ್ದ. ಹೊಟೇಲ್ ರೂಮ್ ಬಾಡಿಗೆ ನಾಲ್ಕು ಸಾವಿರ ರೂಪಾಯಿ ಆಗಬೇಕಿತ್ತು. ಈ ಬಗ್ಗೆ ಹೊಟೇಲಿನ ಮಾಲಕರೂ, ಮಂಗಳೂರು ಹೊಟೇಲ್ ಅಸೋಸಿಯೇಶನಲ್ಲಿ ಖಜಾಂಚಿಯೂ ಆಗಿರುವ ಅಬ್ರಾರ್ ಬಂದರು ಪೊಲೀಸರಿಗೆ ದೂರು ನೀಡಿದ್ದರು. ಆನಂತರ ಆತ ನೀಡಿದ್ದ ಐಡಿ ಕಾರ್ಡನ್ನು ಹೊಟೇಲ್ ಅಸೋಸಿಯೇಶನ್ ಗ್ರೂಪಲ್ಲಿ ಷೇರ್ ಮಾಡಿದ್ದರು.


ಈ ವೇಳೆ, ಅದೇ ವ್ಯಕ್ತಿ ನವಭಾರತ ವೃತ್ತದಲ್ಲಿರುವ ಪ್ಯಾಪಿಲಾನ್ ಪ್ಯಾಲೇಸ್ ಎನ್ನುವ ಹೊಟೇಲಿನಲ್ಲಿಯೂ ಇದೇ ರೀತಿ ಮೋಸ ಮಾಡಿದ್ದು ತಿಳಿದುಬಂದಿದೆ. ಸಿಟಿ ವಾಕ್ ಹೊಟೇಲಿಗೆ ಬರುವುದಕ್ಕೂ ಮುನ್ನ ಪ್ಯಾಪಿಲಾನ್ ಹೊಟೇಲಿಗೆ ತೆರಳಿದ್ದ. ಅಲ್ಲಿ ಒಂದಷ್ಟು ದಿನ ಇದ್ದುಕೊಂಡು ಬಳಿಕ ಅಲ್ಲಿಂದ ಹಣ ಕೊಡದೆ ತೆರಳಿದ್ದ. ಈ ವಿಚಾರ ತಿಳಿಯುತ್ತಲೇ ಹೊಟೇಲ್ ಅಸೋಸಿಯೇಶನ್ ಅಧ್ಯಕ್ಷ ಚಂದ್ರಹಾಸ ಶೆಟ್ಟಿ ಮತ್ತು ಜನರಲ್ ಸೆಕ್ರೆಟರಿ ನಿಶಾಂಕ್ ಸುವರ್ಣ, ಪ್ಯಾಪಿಲಾನ್ ಹೊಟೇಲಿಗೆ ಭೇಟಿ ನೀಡಿದ್ದು, ಬಂದರು ಪೊಲೀಸರಿಗೆ ಕರೆ ಮಾಡಿ ದೂರು ನೀಡಿದ್ದಾರೆ.
ಎಸಿಪಿ ಪಿಎ ಹೆಗಡೆ ಮತ್ತು ಬಂದರು ಇನ್ ಸ್ಪೆಕ್ಟರ್ ರಾಘವೇಂದ್ರ ನಕಲಿ ವ್ಯಕ್ತಿಯನ್ನು ಬಂಧಿಸಿದ್ದು, ವಿಚಾರಣೆ ನಡೆಸಿದಾಗ ಆತನಲ್ಲಿರುವುದು ಫೇಕ್ ಐಡಿಯೆಂದು ಗೊತ್ತಾಗಿದೆ. ಅಲ್ಲದೆ, ಈ ಹಿಂದೆ ಇದೇ ವ್ಯಕ್ತಿ ತಮಿಳುನಾಡಿನ ಸೇಲಂನಲ್ಲಿ ನಲಂದಾ ಎನ್ನುವ ಹೊಟೇಲ್ ನಲ್ಲಿ ಉಳಿದುಕೊಂಡು 15 ಸಾವಿರ ರೂ. ಮೋಸ ಮಾಡಿದ್ದ ಎನ್ನುವುದು ವಿಚಾರಣೆಯಲ್ಲಿ ಬೆಳಕಿಗೆ ಬಂದಿದೆ.
Fake Doctor with Fake AIMS Medical ID held in Mangalore. The incident came to light after he escaped from a lodge in the city without making payment. The Bunder police have arrested the accused and have stated that he has done the same pattern with many lodges in India showing fake medical ID.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
26-05-26 11:56 am
HK News Staffer
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm