ಬ್ರೇಕಿಂಗ್ ನ್ಯೂಸ್
24-08-21 02:49 pm Headline Karnataka News Network ಕ್ರೈಂ
ಬೆಂಗಳೂರು, ಆಗಸ್ಟ್ 24: ಹೆಂಡ್ತಿ ರುಚಿಕಟ್ಟಾದ ಚಿಕನ್ ಫ್ರೈ ಮಾಡಿಕೊಡುತ್ತಿಲ್ಲ ಎಂದು ಜಗಳ ತೆಗೆದು ಗಂಡನೇ ಪತ್ನಿಯನ್ನು ಕೊಂದು ಹಾಕಿದ ಘಟನೆ ಹೆಸರಘಟ್ಟ ರಸ್ತೆಯ ತರಬನಹಳ್ಳಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ.
ಕ್ಷುಲ್ಲಕ ಕಾರಣಕ್ಕೆ ಪ್ರಾಣ ಕಳಕೊಂಡ ನತದೃಷ್ಟ ಯುವತಿಯನ್ನು ಶಿರಿನ್ ಬಾನು (25) ಎಂದು ಗುರುತಿಸಲಾಗಿದ್ದರೆ, ಕ್ರೌರ್ಯ ಮೆರೆದ ಪತಿಯನ್ನು ಮುಬಾರಕ್ (32) ಎಂದು ಗುರುತಿಸಲಾಗಿದೆ. ಹೆಂಡ್ತಿಯನ್ನು ಹೊಡೆದು ಕೊಂದ ಬಳಿಕ ಆಕೆಯ ಶವವನ್ನು ರಸ್ತೆ ಬದಿಯ ಚರಂಡಿಗೆ ಎಸೆದು ಪ್ರಕರಣ ಮುಚ್ಚಿ ಹಾಕಲು ಯತ್ನಿಸಿದ್ದ ಪ್ರಕರಣ ಮೂರು ವಾರಗಳ ಬಳಿಕ ಬಯಲಾಗಿದೆ.
ಶಿರಿನ್ ಮತ್ತು ಮುಬಾರಕ್ ಇಬ್ಬರೂ ದಾವಣಗೆರೆ ಜಿಲ್ಲೆಯವರಾಗಿದ್ದು, ಪರಸ್ಪರ ಪ್ರೀತಿಸಿ ಮದುವೆಯಾಗಿದ್ದರು. ಎರಡು ವರ್ಷಗಳ ಹಿಂದೆ ಬೆಂಗಳೂರಿಗೆ ಬಂದು ತರಬನಹಳ್ಳಿ ಗ್ರಾಮದಲ್ಲಿ ನೆಲೆಸಿದ್ದರು. ಮುಬಾರಕ್ ಬೆಡ್ ಗಳನ್ನು ಮಾರುವ ವ್ಯಾಪಾರ ಮಾಡುತ್ತಿದ್ದರೆ, ಶಿರಿನ್ ಮನೆಯಲ್ಲಿ ಇರುತ್ತಿದ್ದಳು. ಚೆನ್ನಾಗಿಯೇ ಇದ್ದ ಇವರ ನಡುವೆ, ತಿಕ್ಕಾಟಕ್ಕೆ ಕಾರಣವಾಗಿದ್ದು ಚಿಕನ್ ಫ್ರೈ ವಿಷಯ. ಪತ್ನಿ ಸರಿಯಾಗಿ ಚಿಕನ್ ಫ್ರೈ ಮಾಡುತ್ತಿಲ್ಲ. ಟೇಸ್ಟಿಯಾಗಿಲ್ಲವೆಂದು ಗಂಡ ತಕರಾರು ಮಾಡುತ್ತಿದ್ದ ಎನ್ನಲಾಗಿದೆ.

ಮೂರು ವಾರಗಳ ಹಿಂದೆ ಪತ್ನಿ ಶಿರಿನ್ ತಂಗಿ ಮನೆಗೆ ಬಂದಿದ್ದು, ಈ ವೇಳೆ ಚಿಕನ್ ಫ್ರೈ ಮಾಡಿದ್ದರು. ಆದರೆ, ತಂಗಿಯ ಎದುರಲ್ಲೇ ಗಂಡ ತನ್ನ ಪತ್ನಿಯನ್ನು ಚಿಕನ್ ವಿಚಾರದಲ್ಲಿ ಹೀನಾಯವಾಗಿ ಬೈದಿದ್ದ. ಆನಂತರ ತಂಗಿ ಮನೆಗೆ ಹಿಂತಿರುಗಿದ್ದಳು. ಇದೇ ವಿಚಾರ ಆಬಳಿಕ ಪತಿ- ಪತ್ನಿಯ ನಡುವೆ ತೀವ್ರ ವಾಗ್ಯುದ್ಧಕ್ಕೆ ಕಾರಣವಾಗಿತ್ತು. ಇಬ್ಬರೂ ಹೊಡದಾಡಿಕೊಂಡಿದ್ದು, ಮುಬಾರಕ್ ಸಿಟ್ಟಿನ ಭರದಲ್ಲಿ ಪತ್ನಿಯ ಮೇಲೆ ಮರದ ಕಟ್ಟಿಗೆಯಲ್ಲಿ ಹೊಡೆದಿದ್ದರಿಂದ ತಲೆಗೆ ಏಟಾಗಿದ್ದ ಶಿರಿನ್ ನೆಲಕ್ಕೆ ಬಿದ್ದು ಸಾವಿಗೀಡಾಗಿದ್ದಳು. ಬಳಿಕ, ಪತ್ನಿ ಸಾವಿನಿಂದ ಭಯಗೊಂಡ ಮುಬಾರಕ್, ಶವವನ್ನು ಬೆಡ್ಡಿನಲ್ಲಿ ಕಟ್ಟಿ ಮನೆ ಸಮೀಪದ ಚರಂಡಿಗೆ ಎಸೆದು ಬಂದಿದ್ದ.
ಆನಂತರ ಶಿರಿನ್ ನಾಪತ್ತೆಯಾಗಿರುವ ವಿಚಾರದಲ್ಲಿ ಆಕೆಯ ಮನೆಯವರು ಕೇಳಲು ಶುರು ಮಾಡಿದ್ದರು. ಅದಕ್ಕೆ ಹಾರಿಕೆಯ ಉತ್ತರ ನೀಡುತ್ತಿದ್ದ ಮುಬಾರಕ್ ಬಗ್ಗೆ ಸಂಶಯಗೊಂಡ ಪತ್ನಿಯ ಕಡೆಯವರು ಜೋರು ಮಾಡಿದ್ದಾರೆ. ಮುಬಾರಕ್ ವಿರುದ್ಧ ಪೊಲೀಸ್ ದೂರು ನೀಡುವುದಾಗಿ ಬೆದರಿಸಿದ್ದಾರೆ. ಇಷ್ಟಾಗುತ್ತಿದ್ದಂತೆ ಭಯಗೊಂಡ ಮುಬಾರಕ್, ವಕೀಲನ ಜೊತೆ ಸೇರಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದು ಆಗಿರುವ ಘಟನೆಯನ್ನು ವಿವರಿಸಿದ್ದಾನೆ. ಪತ್ನಿಯನ್ನು ಕೊಂದು ಚರಂಡಿಗೆ ಎಸೆದಿರುವುದಾಗಿ ಹೇಳಿಕೆ ನೀಡಿದ್ದಾನೆ. ಆದರೆ, ಶವ ಎಸೆದಿದ್ದ ಜಾಗದಲ್ಲಿ ಪೊಲೀಸರು ಹುಡುಕಾಡಿದ್ದು ಶವ ಮಾತ್ರ ಸಿಕ್ಕಿಲ್ಲ. ಘಟನೆ ನಡೆದು ಎರಡು ವಾರ ಕಳೆದಿರುವುದರಿಂದ ಶವ ಕೊಳೆತು ಹೋಗಿರುವ ಸಾಧ್ಯತೆ ಇದ್ದು, ಅಸ್ಥಿಪಂಜರ ಆದ್ರೂ ಸಿಗಬೇಕು ಎನ್ನುವ ನೆಲೆಯಲ್ಲಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಆರೋಪಿಯನ್ನು ಬಂಧಿಸಿದ್ದಾರೆ.
Bangalore Husband murders wife for failing to prepare tasty chicken fry kabab dumps her body in pond
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
06-02-26 10:56 pm
Mangalore Correspondent
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm