ಬ್ರೇಕಿಂಗ್ ನ್ಯೂಸ್
25-08-21 10:37 pm Headline Karnataka News Network ಕ್ರೈಂ
ಗಯಾ, ಆಗಸ್ಟ್ 25: ಭಾರತೀಯ ಸೇನೆ ಮತ್ತು ರಾಜ್ಯ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಪಶ್ಚಿಮ ಬಂಗಾಳದ ಪಶ್ಚಿಮ ಬುರ್ದ್ವಾನ್ ಜಿಲ್ಲೆಯ ಮಾರ್ಗವಾಗಿ ಬಸ್ನಲ್ಲಿ ಸಾಗಿಸುತ್ತಿದ್ದ 30 ಬಾಂಬ್ಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ಮೂವರನ್ನು ಬಂಧಿಸಿದ್ದಾರೆ.
ಬಸ್ ಪಶ್ಚಿಮ ಬಂಗಾಳದಿಂದ ಬಿಹಾರದ ಗಯಾಕ್ಕೆ ಸಂಚಾರ ಮಾಡುತ್ತಿತ್ತು ಎನ್ನಲಾಗಿದೆ. ಬಸ್ನಲ್ಲಿ ಬಾಂಬುಗಳ ಸಾಗಾಟದ ಖಚಿತ ಮಾಹಿತಿ ಬಂದ ಮೇರೆಗೆ ಪೊಲೀಸರು ಹಾಗೂ ಸೇನೆ ಜಂಟಿ ಕಾರ್ಯಾಚರಣೆ ನಡೆಸಿದ್ದಾರೆ.
ಪಶ್ಚಿಮ ಬಂಗಾಳ- ಜಾರ್ಖಂಡ್ ಗಡಿಯಲ್ಲಿರುವ ದುಬುರ್ಡಿ ಚೆಕ್ ಪೋಸ್ಟ್ನಲ್ಲಿ ಬಸ್ ಮೇಲೆ ದಾಳಿ ನಡೆಸಿದ ಅಧಿಕಾರಿಗಳು, ಬಾಂಬುಗಳನ್ನು ವಶಪಡಿಸಿಕೊಂಡಿದ್ದಾರೆ. ಅಲ್ಲದೆ, ಇಡೀ ರಾತ್ರಿ ಬಸ್ನಲ್ಲಿದ್ದ ಪ್ರಯಾಣಿಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ.
ಬಸ್ನಲ್ಲಿ ಒಂದು ಪತ್ರ ಪತ್ತೆಯಾಗಿದ್ದು ಜಾರ್ಖಂಡ್ ನಿವಾಸಿ ಶಫಿ ಮೊಹಮ್ಮದ್ ಎಂಬಾತನಿಗೆ ಈ ಬಾಂಬ್ಗಳಿದ್ದ ಬಾಕ್ಸ್ ಅನ್ನು ಕಳಿಸಲಾಗಿದೆ ಎಂದು ಉಲ್ಲೇಖಿಸಲಾಗಿದೆ. ಅಲ್ಲದೆ, 12461 ಎಂಬ ಕೋಡ್ವರ್ಡ್ ಇದ್ದು, ಒಂದು ಬಾಂಬ್ಗೆ 1 ಸಾವಿರ ರೂಪಾಯಿ, ಮುಂಗಡವಾಗಿ 5 ಸಾವಿರ ರೂಪಾಯಿ ನೀಡಿದ್ದೀರಿ, ಉಳಿದ ಹಣವನ್ನು ಶೀಘ್ರವೇ ಕೊಡಿ ಎಂದು ಬರೆಯಲಾಗಿದೆ. ಜತೆಗೆ ಪತ್ರದಲ್ಲಿ ಕೋಲ್ಕತಾದ ಇಬ್ಬರು ನಿವಾಸಿಗಳ ಹೆಸರನ್ನೂ ಬರೆಯಲಾಗಿತ್ತು. ಈ ಮಾಹಿತಿ ಆಧರಿಸಿ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
As many as 30 crude bombs were recovered from a bus going from Kolkata to Gaya in Bihar on Wednesday. On receiving intel inputs, Bengal Police intercepted the bus going from Kolkata to Gaya at the Dibudih checkpost situated on the West Bengal-Jharkhand border. The bus was carrying two black bags loaded with crude bombs, police said, adding that the bags had the names of the recipient written on them. A chit, which had a code number and also mentioned a Rs 5,000 advance payment, was also recovered from the bags.
18-12-25 12:37 pm
HK News Desk
ಸಿಎಂ ಸಿದ್ದರಾಮಯ್ಯ ಆರೋಗ್ಯದಲ್ಲಿ ಏರುಪೇರು ; ಸದನಕ್ಕ...
17-12-25 10:30 pm
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
18-12-25 10:52 am
Mangalore Correspondent
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm