ಬ್ರೇಕಿಂಗ್ ನ್ಯೂಸ್
26-08-21 12:00 pm Headline Karnataka News Network ಕ್ರೈಂ
ಮಲಪ್ಪುರಂ, ಆಗಸ್ಟ್ 26: ತನ್ನ ಇಬ್ಬರು ಅಪ್ರಾಪ್ತ ಹೆಣ್ಣು ಮಕ್ಕಳನ್ನು ಕಾಮತೃಷೆಗೆ ಬಳಸಿಕೊಂಡ ಪಾಪಿ ತಂದೆಯೊಬ್ಬನ ಅಮಾನವೀಯ ಕೃತ್ಯ ಸಾಬೀತಾದ ಹಿನ್ನೆಲೆಯಲ್ಲಿ ಕೇರಳದ ಮಂಜೇರಿ ಪೊಕ್ಸೊ ವಿಶೇಷ ನ್ಯಾಯಾಲಯ ಡಬಲ್ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ಹೊರಡಿಸಿದೆ. ಜೊತೆಗೆ 3 ಲಕ್ಷ ದಂಡ ಕಟ್ಟುವಂತೆ ಸೂಚಿಸಿದೆ.
55 ವರ್ಷದ ವ್ಯಕ್ತಿಯ ವಿರುದ್ಧದ ಎರಡು ಪ್ರಕರಣಗಳಲ್ಲಿ ಮೊದಲನೆಯ ಪ್ರಕರಣದ ತೀರ್ಪನ್ನು ಮಂಜೇರಿಯ ತ್ವರಿತಗತಿ ವಿಶೇಷ ನ್ಯಾಯಾಲಯ ಪ್ರಕಟಿಸಿತು. ಭಾರತೀಯ ದಂಡ ಸಂಹಿತೆ 376, 511 (ಅತ್ಯಾಚಾರ ಯತ್ನ), 254 (ಮಹಿಳೆಯ ಮೇಲೆ ದೌರ್ಜನ್ಯ), 506 (2) (ಕ್ರಿಮಿನಲ್ ಬೆದರಿಕೆ) ಹಾಗೂ ಬಾಲ ನ್ಯಾಯ ಕಾಯ್ದೆಯ ಸೆಕ್ಷನ್ 75ರ ಅಡಿಯಲ್ಲಿ ಮತ್ತೊಂದು ಪ್ರಕರಣದಲ್ಲಿ ಅಪರಾಧಿಗೆ ಹೆಚ್ಚುವರಿ ಜೈಲು ಶಿಕ್ಷೆ ವಿಧಿಸಲಾಗಿದೆ.

2014-2016ರ ನಡುವೆ ಪತ್ನಿಯೊಂದಿಗೆ ಜಗಳವಾಡಿದ ನಂತರ ಅಪರಾಧಿ ತನ್ನಿಬ್ಬರು ಹೆಣ್ಣು ಮಕ್ಕಳೊಂದಿಗೆ ವಾಸವಾಗಿದ್ದಾಗ ಅವರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದ ಆರೋಪ ಕೇಳಿಬಂದಿತ್ತು. ಮಕ್ಕಳು ತಮ್ಮ ತಾಯಿಗೆ ದೂರು ನೀಡಿದ ನಂತರ ಘಟನೆ ಬೆಳಕಿಗೆ ಬಂದಿದೆ. 2016ರ ಮಾರ್ಚ್ನಲ್ಲಿ, 15 ಮತ್ತು 17 ವರ್ಷ ವಯಸ್ಸಿನ ಹೆಣ್ಣುಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ವಿಷಯ ತಿಳಿದ ತಾಯಿ ಪೊಲೀಸರಿಗೆ ದೂರು ನೀಡಿದ್ದರು.
ಸಿಆರ್ಪಿಸಿ ಸೆಕ್ಷನ್ 433-ಎ ಪ್ರಕಾರ, ಆರೋಪಿ ತಪ್ಪು ಮಾಡಿರುವುದು ಎರಡು ಅಥವಾ ಅದಕ್ಕಿಂತ ಹೆಚ್ಚಿನ ಪ್ರಕರಣಗಳಲ್ಲಿ ಸಾಬೀತಾದರೆ ಡಬಲ್ ಜೀವಾವಧಿ ಶಿಕ್ಷೆ ನೀಡಲಾಗುತ್ತದೆ. ಯಾವ ಪ್ರಕರಣದಲ್ಲಿ ಹೆಚ್ಚು ಅವಧಿಯ ಶಿಕ್ಷೆ ವಿಧಿಸಲಾಗುತ್ತದೆಯೋ ಆ ಶಿಕ್ಷೆಯನ್ನು ಆತ ಪೂರೈಸಬೇಕಾಗುತ್ತದೆ. ಕನಿಷ್ಠ 14 ವರ್ಷ ಜೀವಾವಧಿ ಶಿಕ್ಷೆ ಅನುಭವಿಸಬೇಕಾಗುತ್ತದೆ.
In an extremely aggravated sexual assault case involving the Protection of Children from Sexual Offences (POCSO) Act, a court at Manjeri sentenced a man for imprisonment until his death for repeatedly raping two of his minor daughters.
28-10-25 10:03 pm
Bangalore Correspondent
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
28-10-25 08:36 pm
Mangalore Correspondent
ಸ್ಪೀಕರ್ ಕೊಠಡಿ- ಶಾಸಕರ ಭವನ ನವೀಕರಣ ನೆಪದಲ್ಲಿ ಭಾರೀ...
28-10-25 03:36 pm
ಲಾರಿ ಧಾವಂತಕ್ಕೆ ಹೆದ್ದಾರಿ ದಾಟುತ್ತಿದ್ದ ಪಾದಚಾರಿ ಬ...
27-10-25 11:01 pm
ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ...
27-10-25 10:25 pm
ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
28-10-25 10:48 pm
Mangalore Correspondent
ಕೋಟಿ ರೂ. ಚೀಟಿ ವ್ಯವಹಾರ ಇದೆ, ಹಣ ಸಾಲ ಕೊಟ್ಟರೆ ದುಪ...
27-10-25 05:29 pm
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm