ಬ್ರೇಕಿಂಗ್ ನ್ಯೂಸ್
26-08-21 12:00 pm Headline Karnataka News Network ಕ್ರೈಂ
ಮಲಪ್ಪುರಂ, ಆಗಸ್ಟ್ 26: ತನ್ನ ಇಬ್ಬರು ಅಪ್ರಾಪ್ತ ಹೆಣ್ಣು ಮಕ್ಕಳನ್ನು ಕಾಮತೃಷೆಗೆ ಬಳಸಿಕೊಂಡ ಪಾಪಿ ತಂದೆಯೊಬ್ಬನ ಅಮಾನವೀಯ ಕೃತ್ಯ ಸಾಬೀತಾದ ಹಿನ್ನೆಲೆಯಲ್ಲಿ ಕೇರಳದ ಮಂಜೇರಿ ಪೊಕ್ಸೊ ವಿಶೇಷ ನ್ಯಾಯಾಲಯ ಡಬಲ್ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ಹೊರಡಿಸಿದೆ. ಜೊತೆಗೆ 3 ಲಕ್ಷ ದಂಡ ಕಟ್ಟುವಂತೆ ಸೂಚಿಸಿದೆ.
55 ವರ್ಷದ ವ್ಯಕ್ತಿಯ ವಿರುದ್ಧದ ಎರಡು ಪ್ರಕರಣಗಳಲ್ಲಿ ಮೊದಲನೆಯ ಪ್ರಕರಣದ ತೀರ್ಪನ್ನು ಮಂಜೇರಿಯ ತ್ವರಿತಗತಿ ವಿಶೇಷ ನ್ಯಾಯಾಲಯ ಪ್ರಕಟಿಸಿತು. ಭಾರತೀಯ ದಂಡ ಸಂಹಿತೆ 376, 511 (ಅತ್ಯಾಚಾರ ಯತ್ನ), 254 (ಮಹಿಳೆಯ ಮೇಲೆ ದೌರ್ಜನ್ಯ), 506 (2) (ಕ್ರಿಮಿನಲ್ ಬೆದರಿಕೆ) ಹಾಗೂ ಬಾಲ ನ್ಯಾಯ ಕಾಯ್ದೆಯ ಸೆಕ್ಷನ್ 75ರ ಅಡಿಯಲ್ಲಿ ಮತ್ತೊಂದು ಪ್ರಕರಣದಲ್ಲಿ ಅಪರಾಧಿಗೆ ಹೆಚ್ಚುವರಿ ಜೈಲು ಶಿಕ್ಷೆ ವಿಧಿಸಲಾಗಿದೆ.

2014-2016ರ ನಡುವೆ ಪತ್ನಿಯೊಂದಿಗೆ ಜಗಳವಾಡಿದ ನಂತರ ಅಪರಾಧಿ ತನ್ನಿಬ್ಬರು ಹೆಣ್ಣು ಮಕ್ಕಳೊಂದಿಗೆ ವಾಸವಾಗಿದ್ದಾಗ ಅವರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದ ಆರೋಪ ಕೇಳಿಬಂದಿತ್ತು. ಮಕ್ಕಳು ತಮ್ಮ ತಾಯಿಗೆ ದೂರು ನೀಡಿದ ನಂತರ ಘಟನೆ ಬೆಳಕಿಗೆ ಬಂದಿದೆ. 2016ರ ಮಾರ್ಚ್ನಲ್ಲಿ, 15 ಮತ್ತು 17 ವರ್ಷ ವಯಸ್ಸಿನ ಹೆಣ್ಣುಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ವಿಷಯ ತಿಳಿದ ತಾಯಿ ಪೊಲೀಸರಿಗೆ ದೂರು ನೀಡಿದ್ದರು.
ಸಿಆರ್ಪಿಸಿ ಸೆಕ್ಷನ್ 433-ಎ ಪ್ರಕಾರ, ಆರೋಪಿ ತಪ್ಪು ಮಾಡಿರುವುದು ಎರಡು ಅಥವಾ ಅದಕ್ಕಿಂತ ಹೆಚ್ಚಿನ ಪ್ರಕರಣಗಳಲ್ಲಿ ಸಾಬೀತಾದರೆ ಡಬಲ್ ಜೀವಾವಧಿ ಶಿಕ್ಷೆ ನೀಡಲಾಗುತ್ತದೆ. ಯಾವ ಪ್ರಕರಣದಲ್ಲಿ ಹೆಚ್ಚು ಅವಧಿಯ ಶಿಕ್ಷೆ ವಿಧಿಸಲಾಗುತ್ತದೆಯೋ ಆ ಶಿಕ್ಷೆಯನ್ನು ಆತ ಪೂರೈಸಬೇಕಾಗುತ್ತದೆ. ಕನಿಷ್ಠ 14 ವರ್ಷ ಜೀವಾವಧಿ ಶಿಕ್ಷೆ ಅನುಭವಿಸಬೇಕಾಗುತ್ತದೆ.
In an extremely aggravated sexual assault case involving the Protection of Children from Sexual Offences (POCSO) Act, a court at Manjeri sentenced a man for imprisonment until his death for repeatedly raping two of his minor daughters.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
06-02-26 10:56 pm
Mangalore Correspondent
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm