ಬ್ರೇಕಿಂಗ್ ನ್ಯೂಸ್
26-08-21 12:00 pm Headline Karnataka News Network ಕ್ರೈಂ
ಮಲಪ್ಪುರಂ, ಆಗಸ್ಟ್ 26: ತನ್ನ ಇಬ್ಬರು ಅಪ್ರಾಪ್ತ ಹೆಣ್ಣು ಮಕ್ಕಳನ್ನು ಕಾಮತೃಷೆಗೆ ಬಳಸಿಕೊಂಡ ಪಾಪಿ ತಂದೆಯೊಬ್ಬನ ಅಮಾನವೀಯ ಕೃತ್ಯ ಸಾಬೀತಾದ ಹಿನ್ನೆಲೆಯಲ್ಲಿ ಕೇರಳದ ಮಂಜೇರಿ ಪೊಕ್ಸೊ ವಿಶೇಷ ನ್ಯಾಯಾಲಯ ಡಬಲ್ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ಹೊರಡಿಸಿದೆ. ಜೊತೆಗೆ 3 ಲಕ್ಷ ದಂಡ ಕಟ್ಟುವಂತೆ ಸೂಚಿಸಿದೆ.
55 ವರ್ಷದ ವ್ಯಕ್ತಿಯ ವಿರುದ್ಧದ ಎರಡು ಪ್ರಕರಣಗಳಲ್ಲಿ ಮೊದಲನೆಯ ಪ್ರಕರಣದ ತೀರ್ಪನ್ನು ಮಂಜೇರಿಯ ತ್ವರಿತಗತಿ ವಿಶೇಷ ನ್ಯಾಯಾಲಯ ಪ್ರಕಟಿಸಿತು. ಭಾರತೀಯ ದಂಡ ಸಂಹಿತೆ 376, 511 (ಅತ್ಯಾಚಾರ ಯತ್ನ), 254 (ಮಹಿಳೆಯ ಮೇಲೆ ದೌರ್ಜನ್ಯ), 506 (2) (ಕ್ರಿಮಿನಲ್ ಬೆದರಿಕೆ) ಹಾಗೂ ಬಾಲ ನ್ಯಾಯ ಕಾಯ್ದೆಯ ಸೆಕ್ಷನ್ 75ರ ಅಡಿಯಲ್ಲಿ ಮತ್ತೊಂದು ಪ್ರಕರಣದಲ್ಲಿ ಅಪರಾಧಿಗೆ ಹೆಚ್ಚುವರಿ ಜೈಲು ಶಿಕ್ಷೆ ವಿಧಿಸಲಾಗಿದೆ.

2014-2016ರ ನಡುವೆ ಪತ್ನಿಯೊಂದಿಗೆ ಜಗಳವಾಡಿದ ನಂತರ ಅಪರಾಧಿ ತನ್ನಿಬ್ಬರು ಹೆಣ್ಣು ಮಕ್ಕಳೊಂದಿಗೆ ವಾಸವಾಗಿದ್ದಾಗ ಅವರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದ ಆರೋಪ ಕೇಳಿಬಂದಿತ್ತು. ಮಕ್ಕಳು ತಮ್ಮ ತಾಯಿಗೆ ದೂರು ನೀಡಿದ ನಂತರ ಘಟನೆ ಬೆಳಕಿಗೆ ಬಂದಿದೆ. 2016ರ ಮಾರ್ಚ್ನಲ್ಲಿ, 15 ಮತ್ತು 17 ವರ್ಷ ವಯಸ್ಸಿನ ಹೆಣ್ಣುಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ವಿಷಯ ತಿಳಿದ ತಾಯಿ ಪೊಲೀಸರಿಗೆ ದೂರು ನೀಡಿದ್ದರು.
ಸಿಆರ್ಪಿಸಿ ಸೆಕ್ಷನ್ 433-ಎ ಪ್ರಕಾರ, ಆರೋಪಿ ತಪ್ಪು ಮಾಡಿರುವುದು ಎರಡು ಅಥವಾ ಅದಕ್ಕಿಂತ ಹೆಚ್ಚಿನ ಪ್ರಕರಣಗಳಲ್ಲಿ ಸಾಬೀತಾದರೆ ಡಬಲ್ ಜೀವಾವಧಿ ಶಿಕ್ಷೆ ನೀಡಲಾಗುತ್ತದೆ. ಯಾವ ಪ್ರಕರಣದಲ್ಲಿ ಹೆಚ್ಚು ಅವಧಿಯ ಶಿಕ್ಷೆ ವಿಧಿಸಲಾಗುತ್ತದೆಯೋ ಆ ಶಿಕ್ಷೆಯನ್ನು ಆತ ಪೂರೈಸಬೇಕಾಗುತ್ತದೆ. ಕನಿಷ್ಠ 14 ವರ್ಷ ಜೀವಾವಧಿ ಶಿಕ್ಷೆ ಅನುಭವಿಸಬೇಕಾಗುತ್ತದೆ.
In an extremely aggravated sexual assault case involving the Protection of Children from Sexual Offences (POCSO) Act, a court at Manjeri sentenced a man for imprisonment until his death for repeatedly raping two of his minor daughters.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am