ಬ್ರೇಕಿಂಗ್ ನ್ಯೂಸ್
26-08-21 12:36 pm Mangaluru Correspondent ಕ್ರೈಂ
ಉಳ್ಳಾಲ, ಆ.26: ಕೇರಳದಿಂದ ಕರ್ನಾಟಕಕ್ಕೆ ನಕಲಿ ಆರ್ ಟಿಪಿಸಿಆರ್ ಸರ್ಟಿಫಿಕೇಟ್ ತೋರಿಸಿ ಬಂದಿದ್ದ ಕಾಸರಗೋಡು ಜಿಲ್ಲೆಯ ನಾಲ್ವರನ್ನ ಉಳ್ಳಾಲ ಪೊಲೀಸರು ತಲಪಾಡಿ ಗಡಿಭಾಗದಲ್ಲಿ ಬಂಧಿಸಿದ್ದಾರೆ.
ಕೇರಳದಲ್ಲಿ ಕೊರೊನಾ ಸೋಂಕು ಹೆಚ್ಚಿದ ನಿಟ್ಟಿನಲ್ಲಿ ಕರ್ನಾಟಕ - ಕೇರಳ ನಡುವಿನ ಗಡಿ ಪ್ರದೇಶಗಳಲ್ಲಿ ಕಟ್ಟುನಿಟ್ಟಿನ ತಪಾಸಣೆ ನಡೆಯುತ್ತಿದ್ದು RTPCR ರಿಪೋರ್ಟ್ ಇದ್ದವರನ್ನು ಮಾತ್ರ ಕರ್ನಾಟಕ ಪ್ರವೇಶಿಸಲು ಅವಕಾಶ ಕಲ್ಪಿಸಲಾಗಿದೆ. ತಲಪಾಡಿ ಗಡಿ ಪ್ರದೇಶದಲ್ಲೂ ದಕ್ಷಿಣ ಕನ್ನಡ ಜಿಲ್ಲಾಡಳಿತವು ತಪಾಸಣೆ ನಡೆಸುತ್ತಿದೆ. ಈ ವೇಳೆ ನಕಲಿ RTPCR ಪರೀಕ್ಷೆ ವರದಿ ತೋರಿಸಿ ಕರ್ನಾಟಕ ಪ್ರವೇಶಿಸಿದ ಕಾಸರಗೋಡು ಜಿಲ್ಲೆಯ ನಾಲ್ವರು ವ್ಯಕ್ತಿಗಳನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.



ಇನ್ನೋವಾ ಕಾರಲ್ಲಿ ಆಗಮಿಸಿದ್ದ ಕಾಸರಗೋಡು ಜಿಲ್ಲೆಯ ಚೆರ್ವತ್ತೂರು ನಿವಾಸಿ ಆದಿಲ್ (25) ಮತ್ತು ಕಡಪುರ ನಿವಾಸಿ ಇಸ್ಮಾಯಿಲ್(48) ಹಾಗೂ ಬೈಕ್ ಮೂಲಕ ಬಂದು ಗಡಿ ಪ್ರವೇಶ ಮಾಡಿದ್ದ ಕಾಸರಗೋಡು, ಚೆರ್ವತ್ತೂರು ನಿವಾಸಿ ಹನೀನ್(31) ಮತ್ತು ಬಸ್ ಮೂಲಕ ಬಂದಿದ್ದ ಚೆಂಗಳ ನಿವಾಸಿ ಅಬ್ದುಲ್ ತಮೀಮ್ (19) ನನ್ನ ಉಳ್ಳಾಲ ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ.
ಬಂಧಿತರ ವಿರುದ್ಧ ಉಳ್ಳಾಲ ಪೊಲೀಸರು ಎಪಿಡಮಿಕ್ ಆಕ್ಟ್, ವಂಚನೆ, ಫೋರ್ಜರಿ ಪ್ರಕರಣ ದಾಖಲಿಸಿದ್ದಾರೆ. ಆರ್ ಟಿಪಿಸಿಆರ್ ಪರೀಕ್ಷೆ ವರದಿಯ ಮಾದರಿಯಲ್ಲೇ ನಕಲಿ ಪ್ರಮಾಣ ಪತ್ರ ಮಾಡಿಸಿಕೊಂಡು ಇವರು ಕರ್ನಾಟಕ ಪ್ರವೇಶ ಮಾಡಿದ್ದರು. ತಲಪಾಡಿ ಗಡಿಯಲ್ಲಿ ವರದಿಯನ್ನು ಪರಿಶೀಲನೆ ನಡೆಸಿದಾಗ, ನಕಲಿ ಆಗಿರುವುದು ಕಂಡುಬಂದಿದೆ.
Ullal police arrest four Keralites at Talapady for showing fake RTPCR report. The four have come through car from Kerala and when asked for Rtpcr test report it was said to be fake when examined.
02-05-26 04:48 pm
HK News Staffer
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm