ಬ್ರೇಕಿಂಗ್ ನ್ಯೂಸ್
26-08-21 12:36 pm Mangaluru Correspondent ಕ್ರೈಂ
ಉಳ್ಳಾಲ, ಆ.26: ಕೇರಳದಿಂದ ಕರ್ನಾಟಕಕ್ಕೆ ನಕಲಿ ಆರ್ ಟಿಪಿಸಿಆರ್ ಸರ್ಟಿಫಿಕೇಟ್ ತೋರಿಸಿ ಬಂದಿದ್ದ ಕಾಸರಗೋಡು ಜಿಲ್ಲೆಯ ನಾಲ್ವರನ್ನ ಉಳ್ಳಾಲ ಪೊಲೀಸರು ತಲಪಾಡಿ ಗಡಿಭಾಗದಲ್ಲಿ ಬಂಧಿಸಿದ್ದಾರೆ.
ಕೇರಳದಲ್ಲಿ ಕೊರೊನಾ ಸೋಂಕು ಹೆಚ್ಚಿದ ನಿಟ್ಟಿನಲ್ಲಿ ಕರ್ನಾಟಕ - ಕೇರಳ ನಡುವಿನ ಗಡಿ ಪ್ರದೇಶಗಳಲ್ಲಿ ಕಟ್ಟುನಿಟ್ಟಿನ ತಪಾಸಣೆ ನಡೆಯುತ್ತಿದ್ದು RTPCR ರಿಪೋರ್ಟ್ ಇದ್ದವರನ್ನು ಮಾತ್ರ ಕರ್ನಾಟಕ ಪ್ರವೇಶಿಸಲು ಅವಕಾಶ ಕಲ್ಪಿಸಲಾಗಿದೆ. ತಲಪಾಡಿ ಗಡಿ ಪ್ರದೇಶದಲ್ಲೂ ದಕ್ಷಿಣ ಕನ್ನಡ ಜಿಲ್ಲಾಡಳಿತವು ತಪಾಸಣೆ ನಡೆಸುತ್ತಿದೆ. ಈ ವೇಳೆ ನಕಲಿ RTPCR ಪರೀಕ್ಷೆ ವರದಿ ತೋರಿಸಿ ಕರ್ನಾಟಕ ಪ್ರವೇಶಿಸಿದ ಕಾಸರಗೋಡು ಜಿಲ್ಲೆಯ ನಾಲ್ವರು ವ್ಯಕ್ತಿಗಳನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.



ಇನ್ನೋವಾ ಕಾರಲ್ಲಿ ಆಗಮಿಸಿದ್ದ ಕಾಸರಗೋಡು ಜಿಲ್ಲೆಯ ಚೆರ್ವತ್ತೂರು ನಿವಾಸಿ ಆದಿಲ್ (25) ಮತ್ತು ಕಡಪುರ ನಿವಾಸಿ ಇಸ್ಮಾಯಿಲ್(48) ಹಾಗೂ ಬೈಕ್ ಮೂಲಕ ಬಂದು ಗಡಿ ಪ್ರವೇಶ ಮಾಡಿದ್ದ ಕಾಸರಗೋಡು, ಚೆರ್ವತ್ತೂರು ನಿವಾಸಿ ಹನೀನ್(31) ಮತ್ತು ಬಸ್ ಮೂಲಕ ಬಂದಿದ್ದ ಚೆಂಗಳ ನಿವಾಸಿ ಅಬ್ದುಲ್ ತಮೀಮ್ (19) ನನ್ನ ಉಳ್ಳಾಲ ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ.
ಬಂಧಿತರ ವಿರುದ್ಧ ಉಳ್ಳಾಲ ಪೊಲೀಸರು ಎಪಿಡಮಿಕ್ ಆಕ್ಟ್, ವಂಚನೆ, ಫೋರ್ಜರಿ ಪ್ರಕರಣ ದಾಖಲಿಸಿದ್ದಾರೆ. ಆರ್ ಟಿಪಿಸಿಆರ್ ಪರೀಕ್ಷೆ ವರದಿಯ ಮಾದರಿಯಲ್ಲೇ ನಕಲಿ ಪ್ರಮಾಣ ಪತ್ರ ಮಾಡಿಸಿಕೊಂಡು ಇವರು ಕರ್ನಾಟಕ ಪ್ರವೇಶ ಮಾಡಿದ್ದರು. ತಲಪಾಡಿ ಗಡಿಯಲ್ಲಿ ವರದಿಯನ್ನು ಪರಿಶೀಲನೆ ನಡೆಸಿದಾಗ, ನಕಲಿ ಆಗಿರುವುದು ಕಂಡುಬಂದಿದೆ.
Ullal police arrest four Keralites at Talapady for showing fake RTPCR report. The four have come through car from Kerala and when asked for Rtpcr test report it was said to be fake when examined.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am