ಬ್ರೇಕಿಂಗ್ ನ್ಯೂಸ್
26-08-21 04:34 pm Headline Karnataka News Network ಕ್ರೈಂ
ಬೆಂಗಳೂರು, ಆ.26 : ರೌಡಿಶೀಟರ್ ಜೊತೆ ಸೇರಿ ಆಹಾರ ತಯಾರಿಕಾ ಸಂಸ್ಥೆಯ ಇಬ್ಬರು ಸಿಬ್ಬಂದಿಯನ್ನು ಅಪಹರಿಸಿ 20 ಲಕ್ಷ ರೂ. ಹಣಕ್ಕಾಗಿ ಬ್ಲಾಕ್ಮೇಲ್ ಮಾಡುತ್ತಿದ್ದ ಯುಟ್ಯೂಬ್ ಚಾನೆಲ್ ವರದಿಗಾರ ಸೇರಿದಂತೆ ಆರು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
ರೌಡಿ ಶೀಟರ್ ಕುಳ್ಳ ರಮೇಶ್, ಯುಟ್ಯೂಬ್ ಚಾನೆಲ್ ವರದಿಗಾರ ಸಂತೋಷ್, ದುರ್ಗೇಶ, ಹರೀಶ್, ಅರವಿಂದ್ ಹಾಗೂ ವಿವೇಕ್ ಬಂಧಿತ ಆರೋಪಿಗಳು. ಮೂರು ದಿನಗಳ ಹಿಂದೆ ಸಾಯಿ ಫುಡ್ ಪ್ರೈ. ಲಿಮಿಟೆಡ್ ಎಂಬ ಕಂಪನಿಯ ಇಬ್ಬರು ಸಿಬ್ಬಂದಿಯ ವಾಹನವನ್ನು ಅಡ್ಡಗಟ್ಟಿ ಅವರದ್ದೇ ಕಾರಿನಲ್ಲಿ ಅಪಹರಿಸಿದ್ದರು. ಇಬ್ಬರನ್ನು ಬಿಡುಗಡೆ ಮಾಡಬೇಕಾದರೆ 20 ಲಕ್ಷ ರೂ. ಹಣ ನೀಡುವಂತೆ ಬೇಡಿಕೆ ಇಟ್ಟಿದ್ದರು. ಹಣ ಕೊಡದಿದ್ದರೆ ಇಬ್ಬರನ್ನು ಹತ್ಯೆ ಮಾಡುವುದಾಗಿ ಬೆದರಿಕೆ ಹಾಕಿದ್ದರು. ಸಾಯಿ ಫುಡ್ ಮಾಲೀಕರು ಮಹಾಲಕ್ಷ್ಮೀ ಲೇಔಟ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಸತತ ಮೂರು ದಿನಗಳಿಂದ ಕಾರ್ಯಾಚರಣೆ ನಡೆಸಿದ ಮಹಾಲಕ್ಷ್ಮೀ ಲೇಔಟ್ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಕೆಲದಿನಗಳ ಹಿಂದೆ ಯುಟ್ಯೂಬ್ ಚಾನೆಲ್ ವರದಿಗಾರ ಸಂತೋಷ್ ಮತ್ತು ಟೀಂ ಸಾಯಿ ಫುಡ್ ತಯಾರಿಸುತ್ತಿದ್ದ ಆಹಾರ ಪದಾರ್ಥಗಳ ಗೋಡೌನ್ ಗೆ ನುಗ್ಗಿತ್ತು. ಅವಧಿ ಮುಗಿದ ಆಹಾರ ಪದಾರ್ಥಗಳನ್ನು ಮಾರಾಟ ಮಾಡುತ್ತಿದ್ದೀರಾ ಎಂದು ಬೆದರಿಕೆ ಹಾಕಿದ್ದರು. ಹಣ ಕೊಡದಿದ್ದರೆ ನಿಮ್ಮ ಅಕ್ರಮವನ್ನು ಯುಟ್ಯೂಬ್ಗೆ ಹಾಕುವುದಾಗಿ ಬೆದರಿಸಿದ್ದರು. ಅವಧಿ ಮುಗಿದ ಆಹಾರ ಪದಾರ್ಥಗಳು ಸಿಗದ ಕಾರಣ ಹಣ ವಸೂಲಿಗೆ ಯತ್ನಿಸಿ ವಾಪಸು ತೆರಳಿದ್ದರು. ಆನಂತರ ಅಪಹರಣ ಕೃತ್ಯ ನಡೆದಿತ್ತು. ಈ ಬಗ್ಗೆ ಮಾಹಿತಿ ಪಡೆದ ಪೊಲೀಸರು, ಯುಟ್ಯೂಬ್ ಚಾನೆಲ್ ವರದಿಗಾರನ ಬೆನ್ನಟ್ಟಿ ಆರೋಪಿಗಳನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತ ಆರೋಪಿಗಳು ಹಲವರಿಗೆ ಬ್ಲಾಕ್ ಮೇಲ್ ಮಾಡಿರುವ ಬಗ್ಗೆ ಮಾಹಿತಿ ಸಿಕ್ಕಿದೆ. ಹೀಗಾಗಿ ಆರು ಮಂದಿಯನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಯೂಟ್ಯೂಬ್ ಚಾನೆಲ್ ಹೆಸರಿನಲ್ಲಿ ಬೆದರಿಸಿ, ಹಣ ಪಡೆದಿರುವುದು ತಿಳಿದುಬಂದರೆ ಹೆಚ್ಚುವರಿ ಪ್ರಕರಣ ದಾಖಲಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
Bangalore Police arrests six including News Youtuber kindnap and extrotion of catering company owner.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
06-02-26 10:56 pm
Mangalore Correspondent
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm