ಬ್ರೇಕಿಂಗ್ ನ್ಯೂಸ್
26-08-21 09:20 pm Mangaluru Correspondent ಕ್ರೈಂ
ಮಂಗಳೂರು, ಆಗಸ್ಟ್ 26: ನಕಲಿ ಅಂಕಪಟ್ಟಿಯ ರೀತಿ ಕೇರಳ ಗಡಿಭಾಗದಲ್ಲಿ ನಕಲಿ ಕೋವಿಡ್ ಸರ್ಟಿಫಿಕೇಟ್ ಜಾಲವೂ ಸಕ್ರಿಯವಾಗಿರುವುದು ಬೆಳಕಿಗೆ ಬಂದಿದೆ. ಮಂಗಳೂರು ನಗರಕ್ಕೆ ಹೊಂದಿಕೊಂಡಿರುವ ತಲಪಾಡಿ ಗಡಿಭಾಗದಲ್ಲಿ ಎರಡು ದಿನಗಳ ಅಂತರದಲ್ಲಿ ನಾಲ್ವರು ಯುವತಿಯರು ಸೇರಿ ಒಟ್ಟು ಹನ್ನೊಂದು ಮಂದಿ ನಕಲಿ ಆರ್ ಟಿಪಿಸಿಆರ್ ಸರ್ಟಿಪಿಕೇಟ್ ಇಟ್ಕೊಂಡು ಕರ್ನಾಟಕಕ್ಕೆ ಬಂದಿರುವುದನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಪ್ರಕರಣ ಸಂಬಂಧಿಸಿ ಏಳು ಮಂದಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.
ಮಂಗಳೂರಿನಲ್ಲಿ ಶಿಕ್ಷಣಕ್ಕಾಗಿ ಆಗಮಿಸುತ್ತಿದ್ದ ಇಬ್ಬರು ಯುವತಿಯರು ಮತ್ತು ಒಬ್ಬ ಎಂಬಿಎ ವಿದ್ಯಾರ್ಥಿ ನಕಲಿ ಸರ್ಟಿಫಿಕೇಟ್ ಜಾಲದಲ್ಲಿ ಸಿಕ್ಕಿಬಿದ್ದಿದ್ದಾರೆ. ನಾಲ್ಕು ಯುವತಿಯರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದು, ವಿಚಾರಣೆ ನಡೆಸಿ ಮನೆಗೆ ಕಳುಹಿಸಿದ್ದಾರೆ. ನಕಲಿ ಸರ್ಟಿಫಿಕೇಟ್ ಮಾಡಿಕೊಟ್ಟ ಆರೋಪಿ ಸೇರಿ ಏಳು ಮಂದಿಯನ್ನು ಬಂಧಿಸಿದ್ದಾರೆ.


ಮಂಗಳೂರಿನಲ್ಲಿ ಎಂಬಿಎ ವಿದ್ಯಾರ್ಥಿಯಾಗಿರುವ ಕಾಸರಗೋಡು ಜಿಲ್ಲೆಯ ಆಲಂಪಾಡಿ ನಿವಾಸಿ ಅಬ್ದುಲ್ ತಮೀಮ್ (19), ಚೆರುವತ್ತೂರು ನಿವಾಸಿ ಹಸೀನ್(31), ಚೆರುವತ್ತೂರಿನ ಹಾದಿಲ್ (25), ಕಾಸರಗೋಡು ಕಡಪ್ಪರ ನಿವಾಸಿ ಇಸ್ಮಾಯಿಲ್ (48) ಮತ್ತು ಇವರಿಗೆ ನಕಲಿ ಪ್ರಮಾಣಪತ್ರ ಮಾಡಿಸಿಕೊಟ್ಟಿದ್ದ ಚೆರ್ವತ್ತೂರು ಪಯ್ಯಂಗೇಟ್ ನಿವಾಸಿ ಕಬೀರ್ ಎ.ಎಂ.(24) ಎಂಬವರನ್ನು ತಲಪಾಡಿ ಗಡಿಯಲ್ಲಿ ಬುಧವಾರ ಬಂಧಿಸಲಾಗಿತ್ತು. ಇಂದು ಮತ್ತೆ ತಲಪಾಡಿ ಗಡಿಯಲ್ಲಿ ಮಂಗಳೂರಿನ ಪಡೀಲ್ ನಿವಾಸಿ ಮಹಮ್ಮದ್ ಶರೀಫ್ (34) ಮತ್ತು ಮಂಜೇಶ್ವರ ನಿವಾಸಿ ಅಬುಬಕ್ಕರ್ (28) ನಕಲಿ ಸರ್ಟಿಫಿಕೇಟ್ ತೋರಿಸಿ ಸಿಕ್ಕಿಬಿದ್ದಿದ್ದಾರೆ.

ಪಡೀಲ್ ನಿವಾಸಿ ಮಂಜೇಶ್ವರದ ಸಂಬಂಧಿಕರ ಮನೆಗೆ ತೆರಳಿದ್ದು, ಹಿಂತಿರುಗಿ ಬರುವಾಗ ಕೋವಿಡ್ ನೆಗೆಟಿವ್ ಸರ್ಟಿಫಿಕೇಟ್ ತೋರಿಸಿದ್ದ. ಆದರೆ, ಅದು ನಕಲಿಯಾಗಿತ್ತು. ಸೌದಿಯಲ್ಲಿ ಉದ್ಯೋಗಿಯಾಗಿರುವ ಅಬುಬಕ್ಕರ್, ತನ್ನ ಗೆಳೆಯರನ್ನು ಕಾಣುವ ಸಲುವಾಗಿ ಮಂಗಳೂರಿಗೆ ಬಂದಿದ್ದು ಈ ವೇಳೆ ನಕಲಿ ಸರ್ಟಿಫಿಕೇಟ್ ತೋರಿಸಿದ್ದ. ಇವರಿಗೆ ನಕಲಿ ಸರ್ಟಿಫಿಕೇಟ್ ಮಾಡಿಕೊಟ್ಟಿದ್ದು ಯಾರು ಮತ್ತು ಎಲ್ಲಿ ಎನ್ನುವುದನ್ನು ಪೊಲೀಸರು ಪತ್ತೆ ಮಾಡುತ್ತಿದ್ದಾರೆ.
ಕಾಸರಗೋಡಿನ ಇತರ ಆರೋಪಿಗಳು ಚೆರುವತ್ತೂರಿನ ಕಬೀರ್ ಬಳಿಯಲ್ಲೇ ನಕಲಿ ಸರ್ಟಿಫಿಕೇಟ್ ಮಾಡಿದ್ದರು ಎನ್ನುವುದು ತನಿಖೆಯಲ್ಲಿ ಬಯಲಾಗಿದೆ. ಈ ಬಗ್ಗೆ ಖಚಿತ ಮಾಹಿತಿ ಪಡೆದು ಉಳ್ಳಾಲ ಪೊಲೀಸರು ಕಾಸರಗೋಡಿಗೆ ದಾಳಿ ನಡೆಸಿ, ಆರೋಪಿಯನ್ನು ಬಂಧಿಸಿದ್ದಾರೆ. ಕಾಸರಗೋಡಿನಿಂದ ಮಂಗಳೂರಿಗೆ ಬರಲು ಬಳಸಿದ್ದ ಇನ್ನೋವಾ ಮತ್ತು ಇಟಿಯೋಸ್ ಕಾರು, ಎರಡು ಬೈಕ್ ಗಳನ್ನು ವಶಕ್ಕೆ ಪಡೆದಿದ್ದಾರೆ. ಉಪ್ಪಳ ಮೂಲದ ಇಬ್ಬರು ವಿದ್ಯಾರ್ಥಿನಿಯರು ವಿಚಾರಣೆ ಸಂದರ್ಭ ತಮಗೆ ಬೇರೆ ಗೆಳೆಯರು ಸರ್ಟಿಫಿಕೇಟ್ ಮಾಡಿಕೊಟ್ಟಿದ್ದರು. ನಾವು ಪರೀಕ್ಷೆಗೆ ತೆರಳಿದ್ದೆವು ಎಂದು ಹೇಳಿದ್ದರು. ಆದರೆ, ಅದನ್ನು ನಕಲಿಯಾಗಿಯೇ ಮಾಡಲಾಗಿತ್ತು ಎಂಬುದನ್ನು ಪೊಲೀಸರು ಪತ್ತೆ ಮಾಡಿದ್ದಾರೆ.
Seven people were arrested in four separate cases for forging RT-PCR reports at Talapady check post on August 25 and 26. The arrested are identified as Mohammed Sharif (34) from Padil, Abubakker (28) from Manjeshwar, Abdul Tamim (19) from Chengala, Ismail (48) from Kadappara, and Hadil (25), Kabir A M (24) and Hasin (31) from Cheruvathur.
18-12-25 12:37 pm
HK News Desk
ಸಿಎಂ ಸಿದ್ದರಾಮಯ್ಯ ಆರೋಗ್ಯದಲ್ಲಿ ಏರುಪೇರು ; ಸದನಕ್ಕ...
17-12-25 10:30 pm
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
18-12-25 10:52 am
Mangalore Correspondent
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm