ಬ್ರೇಕಿಂಗ್ ನ್ಯೂಸ್
27-08-21 12:31 pm Headline Karnataka News Network ಕ್ರೈಂ
ಹಾಸನ, ಆಗಸ್ಟ್ 27: ಪತ್ನಿಯ ಅಕ್ಕ ಮತ್ತು ಭಾವನ ಆಸ್ತಿಯನ್ನು ಕಬಳಿಸಲೆಂದು ಅಪಘಾತ ಮಾಡಿಸಿ ಅವರನ್ನು ನಿರ್ದಯವಾಗಿ ಕೊಲೆಗೈದ ನಾಲ್ವರು ಕಿರಾತಕರಿಗೆ ಚನ್ನರಾಯಪಟ್ಟಣದ ನಾಲ್ಕನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ಮಹತ್ವದ ತೀರ್ಪು ನೀಡಿದೆ.
ನಾಗರಾಜ್ ಎಂಬಾತ ತನ್ನ ಪತ್ನಿಯ ಅಕ್ಕ ಮತ್ತು ಭಾವನನ್ನು ಜಗದೀಶ್, ಲತೇಶ್ ಹಾಗೂ ದೀಪಕ್ ಜೊತೆ ಸೇರಿ ಅಪಘಾತ ಮಾಡಿಸುವ ಮೂಲಕ ಹತ್ಯೆಗೈದಿದ್ದ.
ಏನಿದು ಪ್ರಕರಣ?:
2015ರ ಜೂನ್ 17 ರಂದು ಮೋಹನ್ ಕುಮಾರ್ ಮತ್ತು ಪವಿತ್ರ ಸ್ವಗ್ರಾಮ ಬ್ಯಾಡರಹಳ್ಳಿಯಿಂದ ಚನ್ನರಾಯಪಟ್ಟಣಕ್ಕೆ ತಮ್ಮ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದರು. ಈ ವೇಳೆ ಟಾಟಾ ಸುಮೋ ವಾಹನ ಉದಯಪುರ ಸಮೀಪದ ಊಪಿನಹಳ್ಳಿ ಗೇಟ್ ಬಳಿ ಡಿಕ್ಕಿ ಹೊಡೆದಿತ್ತು. ಪರಿಣಾಮ ಸ್ಥಳದಲ್ಲಿಯೇ ಪತಿ-ಪತ್ನಿ ಸಾವಿಗೀಡಾಗಿದ್ದರು.

ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿದ್ದು, ಇದು ಉದ್ದೇಶಪೂರ್ವಕವಾಗಿ ಮಾಡಿರುವ ಅಪಘಾತ ಎಂಬುದು ತಿಳಿದುಬಂದಿತ್ತು. ಬಳಿಕ ತನಿಖೆ ಚುರುಕುಗೊಳಿಸಿದ ಪೊಲೀಸರು, ನಾಲ್ಕು ಮಂದಿ ಆರೋಪಿಗಳನ್ನು ಪಟ್ಟಣದಲ್ಲಿ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಪಡೆದಿದ್ದರು. ಈ ವೇಳೆ ಆಸ್ತಿ ಆಸೆಗಾಗಿ ಅಪಘಾತ ಮಾಡಿ ಕೊಲೆಗೈದಿರುವುದು ಬಹಿರಂಗವಾಗಿದೆ. ಈ ವಿಚಾರ ಕೇಳಿದ ಕುಟುಂಬಕ್ಕೆ ದಿಗ್ಭ್ರಾಂತವಾಗಿತ್ತು.
ಇದೀಗ ನಾಲ್ವರು ಆರೋಪಿಗಳಿಗೆ ಚನ್ನರಾಯಪಟ್ಟಣದ ನಾಲ್ಕನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಮಲ್ಲಿಕಾರ್ಜುನ ಸಂಶಿ ಜೀವಾವಧಿ ಶಿಕ್ಷೆ ವಿಧಿಸಿ, ತಲಾ 25 ಸಾವಿರ ದಂಡದ ಶಿಕ್ಷೆ ನೀಡಿದ್ದಾರೆ. ದಂಡ ಪಾವತಿಸದೇ ಇದ್ದಲ್ಲಿ ಮತ್ತೆ ಎರಡು ವರ್ಷ ಕಠಿಣ ಕಾರಾಗೃಹ ಶಿಕ್ಷೆ ವಿಧಿಸುವಂತೆ ಆದೇಶಿಸಿದ್ದಾರೆ.
ಈ ಪ್ರಕರಣದಲ್ಲಿ ನಾಗರಾಜ್ ನಕಲಿ ಚೆಕ್ ನೀಡಿ ವಂಚಿಸಿದ ಹಿನ್ನೆಲೆಯಲ್ಲಿ ಆತನಿಗೆ ನಾಲ್ಕು ವರ್ಷ ಕಠಿಣ ಕಾರಾಗೃಹ ಹಾಗೂ ರೂ.20,000 ಹೆಚ್ಚುವರಿ ದಂಡ ವಿಧಿಸಿ, ಪಾವತಿಸದೇ ಇದ್ದಲ್ಲಿ ಮತ್ತೆ ಒಂದು ವರ್ಷ ಕಠಿಣ ಕಾರಾಗೃಹ ಶಿಕ್ಷೆ ಅನುಭವಿಸುವಂತೆ ಆದೇಶದಲ್ಲಿ ತಿಳಿಸಿದ್ದಾರೆ.
ಅಪಘಾತದಲ್ಲಿ ಮೃತಪಟ್ಟ ಪವಿತ್ರ ಮತ್ತು ಮೋಹನ್ ಕುಮಾರ್ ಅವರ ಅಪ್ರಾಪ್ತ ಮಕ್ಕಳಿಗೆ 35 ಸಾವಿರ ರೂ.ಗಳನ್ನು ಪರಿಹಾರವಾಗಿ ನೀಡುವಂತೆಯೂ ತೀರ್ಪಿನಲ್ಲಿ ತಿಳಿಸಲಾಗಿದೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm