ಬ್ರೇಕಿಂಗ್ ನ್ಯೂಸ್
27-08-21 12:31 pm Headline Karnataka News Network ಕ್ರೈಂ
ಹಾಸನ, ಆಗಸ್ಟ್ 27: ಪತ್ನಿಯ ಅಕ್ಕ ಮತ್ತು ಭಾವನ ಆಸ್ತಿಯನ್ನು ಕಬಳಿಸಲೆಂದು ಅಪಘಾತ ಮಾಡಿಸಿ ಅವರನ್ನು ನಿರ್ದಯವಾಗಿ ಕೊಲೆಗೈದ ನಾಲ್ವರು ಕಿರಾತಕರಿಗೆ ಚನ್ನರಾಯಪಟ್ಟಣದ ನಾಲ್ಕನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ಮಹತ್ವದ ತೀರ್ಪು ನೀಡಿದೆ.
ನಾಗರಾಜ್ ಎಂಬಾತ ತನ್ನ ಪತ್ನಿಯ ಅಕ್ಕ ಮತ್ತು ಭಾವನನ್ನು ಜಗದೀಶ್, ಲತೇಶ್ ಹಾಗೂ ದೀಪಕ್ ಜೊತೆ ಸೇರಿ ಅಪಘಾತ ಮಾಡಿಸುವ ಮೂಲಕ ಹತ್ಯೆಗೈದಿದ್ದ.
ಏನಿದು ಪ್ರಕರಣ?:
2015ರ ಜೂನ್ 17 ರಂದು ಮೋಹನ್ ಕುಮಾರ್ ಮತ್ತು ಪವಿತ್ರ ಸ್ವಗ್ರಾಮ ಬ್ಯಾಡರಹಳ್ಳಿಯಿಂದ ಚನ್ನರಾಯಪಟ್ಟಣಕ್ಕೆ ತಮ್ಮ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದರು. ಈ ವೇಳೆ ಟಾಟಾ ಸುಮೋ ವಾಹನ ಉದಯಪುರ ಸಮೀಪದ ಊಪಿನಹಳ್ಳಿ ಗೇಟ್ ಬಳಿ ಡಿಕ್ಕಿ ಹೊಡೆದಿತ್ತು. ಪರಿಣಾಮ ಸ್ಥಳದಲ್ಲಿಯೇ ಪತಿ-ಪತ್ನಿ ಸಾವಿಗೀಡಾಗಿದ್ದರು.

ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿದ್ದು, ಇದು ಉದ್ದೇಶಪೂರ್ವಕವಾಗಿ ಮಾಡಿರುವ ಅಪಘಾತ ಎಂಬುದು ತಿಳಿದುಬಂದಿತ್ತು. ಬಳಿಕ ತನಿಖೆ ಚುರುಕುಗೊಳಿಸಿದ ಪೊಲೀಸರು, ನಾಲ್ಕು ಮಂದಿ ಆರೋಪಿಗಳನ್ನು ಪಟ್ಟಣದಲ್ಲಿ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಪಡೆದಿದ್ದರು. ಈ ವೇಳೆ ಆಸ್ತಿ ಆಸೆಗಾಗಿ ಅಪಘಾತ ಮಾಡಿ ಕೊಲೆಗೈದಿರುವುದು ಬಹಿರಂಗವಾಗಿದೆ. ಈ ವಿಚಾರ ಕೇಳಿದ ಕುಟುಂಬಕ್ಕೆ ದಿಗ್ಭ್ರಾಂತವಾಗಿತ್ತು.
ಇದೀಗ ನಾಲ್ವರು ಆರೋಪಿಗಳಿಗೆ ಚನ್ನರಾಯಪಟ್ಟಣದ ನಾಲ್ಕನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಮಲ್ಲಿಕಾರ್ಜುನ ಸಂಶಿ ಜೀವಾವಧಿ ಶಿಕ್ಷೆ ವಿಧಿಸಿ, ತಲಾ 25 ಸಾವಿರ ದಂಡದ ಶಿಕ್ಷೆ ನೀಡಿದ್ದಾರೆ. ದಂಡ ಪಾವತಿಸದೇ ಇದ್ದಲ್ಲಿ ಮತ್ತೆ ಎರಡು ವರ್ಷ ಕಠಿಣ ಕಾರಾಗೃಹ ಶಿಕ್ಷೆ ವಿಧಿಸುವಂತೆ ಆದೇಶಿಸಿದ್ದಾರೆ.
ಈ ಪ್ರಕರಣದಲ್ಲಿ ನಾಗರಾಜ್ ನಕಲಿ ಚೆಕ್ ನೀಡಿ ವಂಚಿಸಿದ ಹಿನ್ನೆಲೆಯಲ್ಲಿ ಆತನಿಗೆ ನಾಲ್ಕು ವರ್ಷ ಕಠಿಣ ಕಾರಾಗೃಹ ಹಾಗೂ ರೂ.20,000 ಹೆಚ್ಚುವರಿ ದಂಡ ವಿಧಿಸಿ, ಪಾವತಿಸದೇ ಇದ್ದಲ್ಲಿ ಮತ್ತೆ ಒಂದು ವರ್ಷ ಕಠಿಣ ಕಾರಾಗೃಹ ಶಿಕ್ಷೆ ಅನುಭವಿಸುವಂತೆ ಆದೇಶದಲ್ಲಿ ತಿಳಿಸಿದ್ದಾರೆ.
ಅಪಘಾತದಲ್ಲಿ ಮೃತಪಟ್ಟ ಪವಿತ್ರ ಮತ್ತು ಮೋಹನ್ ಕುಮಾರ್ ಅವರ ಅಪ್ರಾಪ್ತ ಮಕ್ಕಳಿಗೆ 35 ಸಾವಿರ ರೂ.ಗಳನ್ನು ಪರಿಹಾರವಾಗಿ ನೀಡುವಂತೆಯೂ ತೀರ್ಪಿನಲ್ಲಿ ತಿಳಿಸಲಾಗಿದೆ.
27-03-26 04:49 pm
HK News Staffer
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
ಚಿಕ್ಕಮಗಳೂರಿನಲ್ಲಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಬ...
26-03-26 10:27 pm
ಕ್ಲಾಸ್ ರೂಮಿನಲ್ಲೇ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ...
26-03-26 09:21 pm
27-03-26 04:07 pm
HK News Staffer
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
ಹೊರ್ಮುಜ್ ಜಲಸಂಧಿ ನಿರ್ಬಂಧಿಸಿದ್ದ ಇರಾನ್ ನೌಕಾಪಡೆ ಮ...
26-03-26 09:00 pm
ಮಂಗಳೂರಿಗೆ ಮತ್ತೆರಡು ಬೃಹತ್ ತೈಲ ಟ್ಯಾಂಕರ್ ಹಡಗು ;...
26-03-26 09:31 am
27-03-26 03:38 pm
HK News Staffer
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಸಾಮಾಜಿಕ ಜಾಲತಾಣದಲ್...
25-03-26 08:44 pm
27-03-26 10:02 pm
HK News Staffer
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm
ಹೊಸ ಬಾವಿ ಕೊರೆಯುತ್ತಿದ್ದ ವೇಳೆ ದುರಂತ ; ಮೂವತ್ತು ಅ...
27-03-26 09:32 pm
ಪುಟ್ಟೇನಹಳ್ಳಿ ಠಾಣೆ ಇನ್ಸ್ಪೆಕ್ಟರ್ ತಿಂಗಳ ವಸೂಲಿ 2...
27-03-26 08:37 pm
Rowdy Sheeter Arif Hussain Murder, Mangalore:...
27-03-26 06:51 am