ಬ್ರೇಕಿಂಗ್ ನ್ಯೂಸ್
27-08-21 12:31 pm Headline Karnataka News Network ಕ್ರೈಂ
ಹಾಸನ, ಆಗಸ್ಟ್ 27: ಪತ್ನಿಯ ಅಕ್ಕ ಮತ್ತು ಭಾವನ ಆಸ್ತಿಯನ್ನು ಕಬಳಿಸಲೆಂದು ಅಪಘಾತ ಮಾಡಿಸಿ ಅವರನ್ನು ನಿರ್ದಯವಾಗಿ ಕೊಲೆಗೈದ ನಾಲ್ವರು ಕಿರಾತಕರಿಗೆ ಚನ್ನರಾಯಪಟ್ಟಣದ ನಾಲ್ಕನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ಮಹತ್ವದ ತೀರ್ಪು ನೀಡಿದೆ.
ನಾಗರಾಜ್ ಎಂಬಾತ ತನ್ನ ಪತ್ನಿಯ ಅಕ್ಕ ಮತ್ತು ಭಾವನನ್ನು ಜಗದೀಶ್, ಲತೇಶ್ ಹಾಗೂ ದೀಪಕ್ ಜೊತೆ ಸೇರಿ ಅಪಘಾತ ಮಾಡಿಸುವ ಮೂಲಕ ಹತ್ಯೆಗೈದಿದ್ದ.
ಏನಿದು ಪ್ರಕರಣ?:
2015ರ ಜೂನ್ 17 ರಂದು ಮೋಹನ್ ಕುಮಾರ್ ಮತ್ತು ಪವಿತ್ರ ಸ್ವಗ್ರಾಮ ಬ್ಯಾಡರಹಳ್ಳಿಯಿಂದ ಚನ್ನರಾಯಪಟ್ಟಣಕ್ಕೆ ತಮ್ಮ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದರು. ಈ ವೇಳೆ ಟಾಟಾ ಸುಮೋ ವಾಹನ ಉದಯಪುರ ಸಮೀಪದ ಊಪಿನಹಳ್ಳಿ ಗೇಟ್ ಬಳಿ ಡಿಕ್ಕಿ ಹೊಡೆದಿತ್ತು. ಪರಿಣಾಮ ಸ್ಥಳದಲ್ಲಿಯೇ ಪತಿ-ಪತ್ನಿ ಸಾವಿಗೀಡಾಗಿದ್ದರು.

ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿದ್ದು, ಇದು ಉದ್ದೇಶಪೂರ್ವಕವಾಗಿ ಮಾಡಿರುವ ಅಪಘಾತ ಎಂಬುದು ತಿಳಿದುಬಂದಿತ್ತು. ಬಳಿಕ ತನಿಖೆ ಚುರುಕುಗೊಳಿಸಿದ ಪೊಲೀಸರು, ನಾಲ್ಕು ಮಂದಿ ಆರೋಪಿಗಳನ್ನು ಪಟ್ಟಣದಲ್ಲಿ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಪಡೆದಿದ್ದರು. ಈ ವೇಳೆ ಆಸ್ತಿ ಆಸೆಗಾಗಿ ಅಪಘಾತ ಮಾಡಿ ಕೊಲೆಗೈದಿರುವುದು ಬಹಿರಂಗವಾಗಿದೆ. ಈ ವಿಚಾರ ಕೇಳಿದ ಕುಟುಂಬಕ್ಕೆ ದಿಗ್ಭ್ರಾಂತವಾಗಿತ್ತು.
ಇದೀಗ ನಾಲ್ವರು ಆರೋಪಿಗಳಿಗೆ ಚನ್ನರಾಯಪಟ್ಟಣದ ನಾಲ್ಕನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಮಲ್ಲಿಕಾರ್ಜುನ ಸಂಶಿ ಜೀವಾವಧಿ ಶಿಕ್ಷೆ ವಿಧಿಸಿ, ತಲಾ 25 ಸಾವಿರ ದಂಡದ ಶಿಕ್ಷೆ ನೀಡಿದ್ದಾರೆ. ದಂಡ ಪಾವತಿಸದೇ ಇದ್ದಲ್ಲಿ ಮತ್ತೆ ಎರಡು ವರ್ಷ ಕಠಿಣ ಕಾರಾಗೃಹ ಶಿಕ್ಷೆ ವಿಧಿಸುವಂತೆ ಆದೇಶಿಸಿದ್ದಾರೆ.
ಈ ಪ್ರಕರಣದಲ್ಲಿ ನಾಗರಾಜ್ ನಕಲಿ ಚೆಕ್ ನೀಡಿ ವಂಚಿಸಿದ ಹಿನ್ನೆಲೆಯಲ್ಲಿ ಆತನಿಗೆ ನಾಲ್ಕು ವರ್ಷ ಕಠಿಣ ಕಾರಾಗೃಹ ಹಾಗೂ ರೂ.20,000 ಹೆಚ್ಚುವರಿ ದಂಡ ವಿಧಿಸಿ, ಪಾವತಿಸದೇ ಇದ್ದಲ್ಲಿ ಮತ್ತೆ ಒಂದು ವರ್ಷ ಕಠಿಣ ಕಾರಾಗೃಹ ಶಿಕ್ಷೆ ಅನುಭವಿಸುವಂತೆ ಆದೇಶದಲ್ಲಿ ತಿಳಿಸಿದ್ದಾರೆ.
ಅಪಘಾತದಲ್ಲಿ ಮೃತಪಟ್ಟ ಪವಿತ್ರ ಮತ್ತು ಮೋಹನ್ ಕುಮಾರ್ ಅವರ ಅಪ್ರಾಪ್ತ ಮಕ್ಕಳಿಗೆ 35 ಸಾವಿರ ರೂ.ಗಳನ್ನು ಪರಿಹಾರವಾಗಿ ನೀಡುವಂತೆಯೂ ತೀರ್ಪಿನಲ್ಲಿ ತಿಳಿಸಲಾಗಿದೆ.
02-05-26 04:48 pm
HK News Staffer
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm