ಬ್ರೇಕಿಂಗ್ ನ್ಯೂಸ್
28-08-21 12:03 pm Headline Karnataka News Network ಕ್ರೈಂ
ಮೈಸೂರು, ಆಗಸ್ಟ್ 28: ರಾಜ್ಯದಲ್ಲಿ ಸಂಚಲನ ಮೂಡಿಸಿದ್ದ ಗ್ಯಾಂಗ್ ರೇಪ್ ಪ್ರಕರಣ ಸಂಬಂಧಿಸಿ ಐವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಖಚಿತ ಸುಳಿವಿನ ಮೇರೆಗೆ ತಮಿಳುನಾಡಿಗೆ ತೆರಳಿದ್ದ ಪೊಲೀಸರ ತಂಡ ಐವರನ್ನು ವಶಕ್ಕೆ ಪಡೆದು ಬೆಂಗಳೂರಿಗೆ ಕರೆತಂದಿದ್ದಾರೆ.
ಘಟನೆ ಸಂಬಂಧಿಸಿ 25ಕ್ಕೂ ಹೆಚ್ಚು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಆದರೆ, ಸರಿಯಾದ ಸುಳಿವು ಸಿಗದ ಕಾರಣ ಆರೋಪಿಗಳನ್ನು ಪತ್ತೆ ಮಾಡುವುದು ಸಾಧ್ಯವಾಗಲಿಲ್ಲ. ತಾಂತ್ರಿಕ ಸಾಕ್ಷ್ಯಗಳ ಹಿನ್ನೆಲೆಯಲ್ಲಿ ತಮಿಳುನಾಡು ಮತ್ತು ಕೇರಳಕ್ಕೆ ತೆರಳಿದ್ದ ಪೊಲೀಸರ ತಂಡ ಐವರನ್ನು ವಶಕ್ಕೆ ತೆಗೆದುಕೊಂಡಿದ್ದು, ಅವರನ್ನೇ ಆರೋಪಿಗಳನ್ನಾಗಿ ತೋರಿಸಲಿದ್ದಾರೆ.




ಕೆಲವು ಮೂಲಗಳ ಪ್ರಕಾರ, ತಮಿಳುನಾಡು ಕಡೆಯಿಂದ ಬೆಂಗಳೂರಿಗೆ ಬಂದಿದ್ದ ವ್ಯಾಪಾರಿಗಳ ತಂಡ ಹಿಂತಿರುಗಿ ಹೋಗುವಾಗ ರೋಡ್ ರಾಬರಿಗೆ ಯತ್ನಿಸುತ್ತಿದ್ದಾಗ ಯುವ ಜೋಡಿ ಕೈಗೆ ಸಿಕ್ಕಿಬಿದ್ದಿದ್ದು ಯುವತಿಯ ಮೇಲೆರಗಿದ್ದಾರೆ ಎನ್ನಲಾಗುತ್ತಿದೆ. ಇದೇ ವೇಳೆ, ಮೈಸೂರಿನ ಕಾಲೇಜೊಂದರ ಬಿಇ ವಿದ್ಯಾರ್ಥಿಗಳು ಕೂಡ ನಾಪತ್ತೆಯಾಗಿರುವುದು ಸಂಶಯಕ್ಕೆ ಕಾರಣವಾಗಿತ್ತು. ತಮಿಳುನಾಡಿನ ಮೂವರು ಮತ್ತು ಇನ್ನೊಬ್ಬ ಕೇರಳದ ನಿವಾಸಿ ವಿದ್ಯಾರ್ಥಿಗಳು ನಾಪತ್ತೆಯಾಗಿದ್ದು ಅವರನ್ನು ವಶಕ್ಕೆ ಪಡೆಯಲು ಪೊಲೀಸರು ತೆರಳಿದ್ದರು.
ಇದೀಗ ಹಲವು ಕಡೆಗಳಿಂದ 25ಕ್ಕೂ ಹೆಚ್ಚು ಮಂದಿಯನ್ನು ಶಂಕೆ ಮತ್ತು ತಾಂತ್ರಿಕ ಸಾಕ್ಷ್ಯಗಳ ಅನುಸಾರ ವಶಕ್ಕೆ ಪಡೆದಿದ್ದು, ಆರೋಪಿಗಳ ಪತ್ತೆ ನಡೆಸಲಿದ್ದಾರೆ. ಸಂತ್ರಸ್ತ ಯುವತಿ ಮತ್ತು ಯುವಕನ ಮೂಲಕವೇ ಆರೋಪಿಗಳ ಪತ್ತೆ ಕಾರ್ಯ ನಡೆಯಲಿದೆ. ಆದರೆ, ಸಂತ್ರಸ್ತ ಯುವತಿ ಆಸ್ಪತ್ರೆಯಿಂದ ಬಿಡುಗಡೆಗೊಂಡು ಮುಂಬೈಗೆ ತೆರಳಿದ್ದಾರೆ. ಯುವಕನೂ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾನೆ. ಈ ನಡುವೆ, ಆರೋಪಿಗಳು ತಮಿಳು ಮಾತನಾಡುತ್ತಿದ್ದರು. ಕಾರ್ಮಿಕರ ರೀತಿ ಇದ್ದರು ಎಂಬ ಬಗ್ಗೆ ಯುವಕ ನೀಡಿದ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದ್ದರು.
Read: ಚಾಮುಂಡಿಬೆಟ್ಟದ ತಪ್ಪಲಲ್ಲಿ ಸ್ನೇಹಿತನ ಎದುರಲ್ಲೇ ಗ್ಯಾಂಗ್ ರೇಪ್ ; ಎಂಬಿಎ ವಿದ್ಯಾರ್ಥಿನಿ ಆಸ್ಪತ್ರೆಗೆ ದಾಖಲು
The Mysuru Police have arrested five persons for gang raping a college student after assaulting her friend at the foot of Chamundi Hill. The heinous crime was committed on the night of Aug. 24 and the incident hit national headlines. Now the city Police have managed to apprehend five accused.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm