ಬ್ರೇಕಿಂಗ್ ನ್ಯೂಸ್
28-08-21 12:03 pm Headline Karnataka News Network ಕ್ರೈಂ
ಮೈಸೂರು, ಆಗಸ್ಟ್ 28: ರಾಜ್ಯದಲ್ಲಿ ಸಂಚಲನ ಮೂಡಿಸಿದ್ದ ಗ್ಯಾಂಗ್ ರೇಪ್ ಪ್ರಕರಣ ಸಂಬಂಧಿಸಿ ಐವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಖಚಿತ ಸುಳಿವಿನ ಮೇರೆಗೆ ತಮಿಳುನಾಡಿಗೆ ತೆರಳಿದ್ದ ಪೊಲೀಸರ ತಂಡ ಐವರನ್ನು ವಶಕ್ಕೆ ಪಡೆದು ಬೆಂಗಳೂರಿಗೆ ಕರೆತಂದಿದ್ದಾರೆ.
ಘಟನೆ ಸಂಬಂಧಿಸಿ 25ಕ್ಕೂ ಹೆಚ್ಚು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಆದರೆ, ಸರಿಯಾದ ಸುಳಿವು ಸಿಗದ ಕಾರಣ ಆರೋಪಿಗಳನ್ನು ಪತ್ತೆ ಮಾಡುವುದು ಸಾಧ್ಯವಾಗಲಿಲ್ಲ. ತಾಂತ್ರಿಕ ಸಾಕ್ಷ್ಯಗಳ ಹಿನ್ನೆಲೆಯಲ್ಲಿ ತಮಿಳುನಾಡು ಮತ್ತು ಕೇರಳಕ್ಕೆ ತೆರಳಿದ್ದ ಪೊಲೀಸರ ತಂಡ ಐವರನ್ನು ವಶಕ್ಕೆ ತೆಗೆದುಕೊಂಡಿದ್ದು, ಅವರನ್ನೇ ಆರೋಪಿಗಳನ್ನಾಗಿ ತೋರಿಸಲಿದ್ದಾರೆ.
ಕೆಲವು ಮೂಲಗಳ ಪ್ರಕಾರ, ತಮಿಳುನಾಡು ಕಡೆಯಿಂದ ಬೆಂಗಳೂರಿಗೆ ಬಂದಿದ್ದ ವ್ಯಾಪಾರಿಗಳ ತಂಡ ಹಿಂತಿರುಗಿ ಹೋಗುವಾಗ ರೋಡ್ ರಾಬರಿಗೆ ಯತ್ನಿಸುತ್ತಿದ್ದಾಗ ಯುವ ಜೋಡಿ ಕೈಗೆ ಸಿಕ್ಕಿಬಿದ್ದಿದ್ದು ಯುವತಿಯ ಮೇಲೆರಗಿದ್ದಾರೆ ಎನ್ನಲಾಗುತ್ತಿದೆ. ಇದೇ ವೇಳೆ, ಮೈಸೂರಿನ ಕಾಲೇಜೊಂದರ ಬಿಇ ವಿದ್ಯಾರ್ಥಿಗಳು ಕೂಡ ನಾಪತ್ತೆಯಾಗಿರುವುದು ಸಂಶಯಕ್ಕೆ ಕಾರಣವಾಗಿತ್ತು. ತಮಿಳುನಾಡಿನ ಮೂವರು ಮತ್ತು ಇನ್ನೊಬ್ಬ ಕೇರಳದ ನಿವಾಸಿ ವಿದ್ಯಾರ್ಥಿಗಳು ನಾಪತ್ತೆಯಾಗಿದ್ದು ಅವರನ್ನು ವಶಕ್ಕೆ ಪಡೆಯಲು ಪೊಲೀಸರು ತೆರಳಿದ್ದರು.
ಇದೀಗ ಹಲವು ಕಡೆಗಳಿಂದ 25ಕ್ಕೂ ಹೆಚ್ಚು ಮಂದಿಯನ್ನು ಶಂಕೆ ಮತ್ತು ತಾಂತ್ರಿಕ ಸಾಕ್ಷ್ಯಗಳ ಅನುಸಾರ ವಶಕ್ಕೆ ಪಡೆದಿದ್ದು, ಆರೋಪಿಗಳ ಪತ್ತೆ ನಡೆಸಲಿದ್ದಾರೆ. ಸಂತ್ರಸ್ತ ಯುವತಿ ಮತ್ತು ಯುವಕನ ಮೂಲಕವೇ ಆರೋಪಿಗಳ ಪತ್ತೆ ಕಾರ್ಯ ನಡೆಯಲಿದೆ. ಆದರೆ, ಸಂತ್ರಸ್ತ ಯುವತಿ ಆಸ್ಪತ್ರೆಯಿಂದ ಬಿಡುಗಡೆಗೊಂಡು ಮುಂಬೈಗೆ ತೆರಳಿದ್ದಾರೆ. ಯುವಕನೂ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾನೆ. ಈ ನಡುವೆ, ಆರೋಪಿಗಳು ತಮಿಳು ಮಾತನಾಡುತ್ತಿದ್ದರು. ಕಾರ್ಮಿಕರ ರೀತಿ ಇದ್ದರು ಎಂಬ ಬಗ್ಗೆ ಯುವಕ ನೀಡಿದ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದ್ದರು.
Read: ಚಾಮುಂಡಿಬೆಟ್ಟದ ತಪ್ಪಲಲ್ಲಿ ಸ್ನೇಹಿತನ ಎದುರಲ್ಲೇ ಗ್ಯಾಂಗ್ ರೇಪ್ ; ಎಂಬಿಎ ವಿದ್ಯಾರ್ಥಿನಿ ಆಸ್ಪತ್ರೆಗೆ ದಾಖಲು
The Mysuru Police have arrested five persons for gang raping a college student after assaulting her friend at the foot of Chamundi Hill. The heinous crime was committed on the night of Aug. 24 and the incident hit national headlines. Now the city Police have managed to apprehend five accused.
29-04-24 02:11 pm
Bangalore Correspondent
BJP MP Sreenivasa Prasad passes away: ಚಾಮರಾಜನ...
29-04-24 11:33 am
Bellari Accident, wedding: ಬಳ್ಳಾರಿ ; ಮದುವೆ ದಿ...
28-04-24 09:39 pm
PM Modi in Belagavi, Siddaramaiah: ಬಿಜೆಪಿ ಜನರ...
28-04-24 09:16 pm
Modi in Belagavi, Neha Murder: ಕಾಂಗ್ರೆಸ್ ಪಕ್ಷ...
28-04-24 08:24 pm
29-04-24 12:33 pm
HK News Desk
ನಿಲ್ಲಿಸಿದ್ದ ಟಾಟಾ 407 ವಾಹನಕ್ಕೆ ಡಿಕ್ಕಿ ಹೊಡೆದ ಪಿ...
29-04-24 12:09 pm
ನಾಯಿಮರಿ ನಾಪತ್ತೆ ; 12 ವರ್ಷದ ಬಾಲಕಿ ಆತ್ಮಹತ್ಯೆ
28-04-24 10:35 pm
Alejandra Rodríguez, Miss Universe Buenos Air...
28-04-24 10:51 am
ಸುಪ್ರೀಂ ಕೋರ್ಟ್ ಚಾಟಿ ಬೆನ್ನಲ್ಲೇ ಎಚ್ಚೆತ್ತ ಕೇಂದ್ರ...
27-04-24 05:46 pm
29-04-24 11:05 am
Mangalore Correspondent
Contentful CEO Karthik Rau, Udupi: ಜಗತ್ತಿನ ಮು...
28-04-24 11:03 pm
ಕೇರಳದಲ್ಲಿ ಹಕ್ಕಿಜ್ವರ ಭೀತಿ ; ಕರ್ನಾಟಕದ ಗಡಿ ಜಿಲ್ಲ...
28-04-24 03:36 pm
Mangalore, Congress Mp candidate Padmaraj: ಕಾ...
27-04-24 11:06 pm
loksabha elections 2024, Mangalore: ದಕ್ಷಿಣ ಕನ...
27-04-24 09:43 pm
29-04-24 11:50 am
Bangalore Correspondent
Drugs case, Gujarat coast: ಬೋಟ್ ನಲ್ಲಿ ಸಿಕ್ತು...
28-04-24 09:46 pm
Bangalore crime, Instagram: ತಾಯಿಯ ಫೋಟೋ ಅಶ್ಲೀಲ...
28-04-24 05:22 pm
Bangalore crime, Divorce: ಇನ್ನೊಬ್ಬಳ ಜೊತೆ ಪತಿಯ...
27-04-24 01:37 pm
Mangalore crime, stabbed, Pawan: ಫರಂಗಿಪೇಟೆ ;...
26-04-24 03:59 pm