ಬ್ರೇಕಿಂಗ್ ನ್ಯೂಸ್
28-08-21 01:20 pm Headline Karnataka News Network ಕ್ರೈಂ
ಶಿವಮೊಗ್ಗ, ಆಗಸ್ಟ್ 28 : ಪ್ರೇಮ ವೈಫಲ್ಯ ಹಿನ್ನೆಲೆಯಲ್ಲಿ ಭಗ್ನ ಪ್ರೇಮಿಯೊಬ್ಬ ಪ್ರಿಯತಮೆಯನ್ನು ಕೊಲೆಗೈದು ತಾನೂ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಜಿಲ್ಲೆಯ ಹೊಸನಗರ ತಾಲೂಕಿನ ನೇರಲಗಿ ಬಳಿ ನಡೆದಿದೆ.
ಕೊಲೆಯಾದ ಯುವತಿಯನ್ನು ಕವಿತಾ (21) ಎಂದು ಗುರುತಿಸಲಾಗಿದ್ದು, ಆತ್ಮಹತ್ಯೆಗೆ ಯತ್ನಿಸಿದ ಭಗ್ನ ಪ್ರೇಮಿಯನ್ನು ಶಿವಮೂರ್ತಿ (21) ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೆ ಯತ್ನಿಸಿದ ಶಿವಮೂರ್ತಿ ಸದ್ಯ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾನೆ.

ಹೊಸನಗರ ತಾಲೂಕಿನ ನೇರಲಗಿ ಗ್ರಾಮದ ಕವಿತಾ ಶಿವಮೊಗ್ಗದ ನಂಜಪ್ಪ ಲೈಫ್ ಕೇರ್ ನರ್ಸಿಂಗ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಹೊಸನಗರ ತಾಲೂಕಿನ ಕಗಲಿ ಗ್ರಾಮದ ಶಿವಮೂರ್ತಿ ರಿಪ್ಪನ್ ಪೇಟೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ದ್ವಿತೀಯ ವರ್ಷದ ಬಿಕಾಂ ವ್ಯಾಸಂಗ ಮಾಡುತ್ತಿದ್ದನು. ಇವರು ಇಬ್ಬರೂ 7 ವರ್ಷದಿಂದ ಪ್ರೀತಿಸುತ್ತಿದ್ದರು. ಆದರೆ, ಇತ್ತೀಚಿಗೆ ಕವಿತಾ, ಶಿವಮೂರ್ತಿ ಜೊತೆಗಿನ ಪ್ರೀತಿ ತೊರೆದು ಭದ್ರಾವತಿ ಮೂಲದ ಅಂಬುಲೆನ್ಸ್ ಚಾಲಕನ ಪ್ರೇಮ ಪಾಶಕ್ಕೆ ಸಿಲುಕಿದ್ದಳು. ಆನಂತರ, ಕವಿತಾ ಹಳೆ ಪ್ರೇಮಿ ಶಿವಮೂರ್ತಿಯನ್ನು ದೂರ ಮಾಡಿದ್ದಳು.
ಇದರಿಂದ ರೊಚ್ಚಿಗೆದ್ದ ಶಿವಮೂರ್ತಿ, ಬುಧವಾರ ಮಧ್ಯಾಹ್ನ ಕವಿತಾಳನ್ನು ನಿನ್ನ ಜೊತೆ ಮಾತನಾಡಬೇಕು ಎಂದು ನೇರಲಗಿ ಬಳಿಗೆ ಕರೆಯಿಸಿದ್ದಾನೆ. ಅಲ್ಲಿ ಇಬ್ಬರ ನಡುವೆ ಜಗಳ ನಡೆದಿದ್ದು ಕವಿತಾಳನ್ನು ಕೊಲೆಗೈದು, ನಂತರ ತಾನೂ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಅಲ್ಲದೆ ಕವಿತಾಳನ್ನು ತಾನೇ ಕೊಲೆಗೈದಿರುವುದಾಗಿ ಪೊಲೀಸರ ಮುಂದೆ ತಪ್ಪೊಪ್ಪಿಕೊಂಡಿದ್ದಾನೆ. ಘಟನೆ ಕುರಿತು ರಿಪ್ಪನ್ ಪೇಟೆ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ.
Shivamogga Youth Killed Girlfriend and Attempts Suicide.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am