ಬ್ರೇಕಿಂಗ್ ನ್ಯೂಸ್
28-08-21 01:20 pm Headline Karnataka News Network ಕ್ರೈಂ
ಶಿವಮೊಗ್ಗ, ಆಗಸ್ಟ್ 28 : ಪ್ರೇಮ ವೈಫಲ್ಯ ಹಿನ್ನೆಲೆಯಲ್ಲಿ ಭಗ್ನ ಪ್ರೇಮಿಯೊಬ್ಬ ಪ್ರಿಯತಮೆಯನ್ನು ಕೊಲೆಗೈದು ತಾನೂ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಜಿಲ್ಲೆಯ ಹೊಸನಗರ ತಾಲೂಕಿನ ನೇರಲಗಿ ಬಳಿ ನಡೆದಿದೆ.
ಕೊಲೆಯಾದ ಯುವತಿಯನ್ನು ಕವಿತಾ (21) ಎಂದು ಗುರುತಿಸಲಾಗಿದ್ದು, ಆತ್ಮಹತ್ಯೆಗೆ ಯತ್ನಿಸಿದ ಭಗ್ನ ಪ್ರೇಮಿಯನ್ನು ಶಿವಮೂರ್ತಿ (21) ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೆ ಯತ್ನಿಸಿದ ಶಿವಮೂರ್ತಿ ಸದ್ಯ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾನೆ.

ಹೊಸನಗರ ತಾಲೂಕಿನ ನೇರಲಗಿ ಗ್ರಾಮದ ಕವಿತಾ ಶಿವಮೊಗ್ಗದ ನಂಜಪ್ಪ ಲೈಫ್ ಕೇರ್ ನರ್ಸಿಂಗ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಹೊಸನಗರ ತಾಲೂಕಿನ ಕಗಲಿ ಗ್ರಾಮದ ಶಿವಮೂರ್ತಿ ರಿಪ್ಪನ್ ಪೇಟೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ದ್ವಿತೀಯ ವರ್ಷದ ಬಿಕಾಂ ವ್ಯಾಸಂಗ ಮಾಡುತ್ತಿದ್ದನು. ಇವರು ಇಬ್ಬರೂ 7 ವರ್ಷದಿಂದ ಪ್ರೀತಿಸುತ್ತಿದ್ದರು. ಆದರೆ, ಇತ್ತೀಚಿಗೆ ಕವಿತಾ, ಶಿವಮೂರ್ತಿ ಜೊತೆಗಿನ ಪ್ರೀತಿ ತೊರೆದು ಭದ್ರಾವತಿ ಮೂಲದ ಅಂಬುಲೆನ್ಸ್ ಚಾಲಕನ ಪ್ರೇಮ ಪಾಶಕ್ಕೆ ಸಿಲುಕಿದ್ದಳು. ಆನಂತರ, ಕವಿತಾ ಹಳೆ ಪ್ರೇಮಿ ಶಿವಮೂರ್ತಿಯನ್ನು ದೂರ ಮಾಡಿದ್ದಳು.
ಇದರಿಂದ ರೊಚ್ಚಿಗೆದ್ದ ಶಿವಮೂರ್ತಿ, ಬುಧವಾರ ಮಧ್ಯಾಹ್ನ ಕವಿತಾಳನ್ನು ನಿನ್ನ ಜೊತೆ ಮಾತನಾಡಬೇಕು ಎಂದು ನೇರಲಗಿ ಬಳಿಗೆ ಕರೆಯಿಸಿದ್ದಾನೆ. ಅಲ್ಲಿ ಇಬ್ಬರ ನಡುವೆ ಜಗಳ ನಡೆದಿದ್ದು ಕವಿತಾಳನ್ನು ಕೊಲೆಗೈದು, ನಂತರ ತಾನೂ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಅಲ್ಲದೆ ಕವಿತಾಳನ್ನು ತಾನೇ ಕೊಲೆಗೈದಿರುವುದಾಗಿ ಪೊಲೀಸರ ಮುಂದೆ ತಪ್ಪೊಪ್ಪಿಕೊಂಡಿದ್ದಾನೆ. ಘಟನೆ ಕುರಿತು ರಿಪ್ಪನ್ ಪೇಟೆ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ.
Shivamogga Youth Killed Girlfriend and Attempts Suicide.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm