ಬ್ರೇಕಿಂಗ್ ನ್ಯೂಸ್
28-08-21 10:37 pm Mangaluru Correspondent ಕ್ರೈಂ
ಮಂಗಳೂರು, ಆಗಸ್ಟ್ 28: ಪೊಲೀಸರು ಕಳ್ಳರನ್ನು ಹಿಡಿಯೋರು ಅಂತಾರೆ. ಹಾಗಾಗಿ, ಕಳ್ಳ ಏನಿದ್ದರೂ ಪೊಲೀಸರ ಮನೆಗಂತೂ ಕನ್ನ ಹಾಕಲು ಹೋಗಲ್ಲ. ಸಿಕ್ಕಿಬಿದ್ದರೆ ಬೆನ್ನು ಚಪ್ಪಡಿ ಮಾಡಿಕೊಳ್ಳಬೇಕು ಅಂತ ಪೊಲೀಸರ ಉಸಾಬರಿ ಬೇಡವೆಂದು ದೂರ ನಿಲ್ಲುತ್ತಾರೆ. ಆದರೆ, ಇಲ್ಲೊಬ್ಬ ಪೊಲೀಸರಿಗೇ ಮೇಷ್ಟ್ರು ಆಗಿರುವ ಇನ್ ಸ್ಪೆಕ್ಟರ್ ಒಬ್ಬರ ಮನೆಗೆ ಕನ್ನ ಹಾಕಿದ್ದಾನೆ.
ಹೌದು.. ಮಂಗಳೂರಿನಲ್ಲಿ ಈ ಹಿಂದೆ ಉರ್ವಾ ಠಾಣೆಯಲ್ಲಿ ಇನ್ ಸ್ಪೆಕ್ಟರ್ ಆಗಿದ್ದ, ಸದ್ಯಕ್ಕೆ ಸಂಚಾರ ವಿಭಾಗದಲ್ಲಿ ಕರ್ತವ್ಯದಲ್ಲಿರುವ ಮಹಮ್ಮದ್ ಶರೀಫ್ ಅವರ ಮನೆಯ ಹೊರಗೆ ನಿಲ್ಲಿಸಿದ್ದ ಸೈಕಲನ್ನು ಕಳ್ಳ ಎಗರಿಸಿದ್ದಾನೆ. ಉರ್ವಾ ಮೈದಾನದ ಬಳಿಯ ಚೈತನ್ಯ ಅಪಾರ್ಟ್ಮೆಂಟ್ ನಲ್ಲಿ ಒಂದನೇ ಮಹಡಿಯಲ್ಲಿ ಇನ್ ಸ್ಪೆಕ್ಟರ್ ಶರೀಫ್ ಮನೆಯಿದೆ.
ಕೆಳಗೆ ಪಾರ್ಕಿಂಗ್ ಏರಿಯಾದಲ್ಲಿ ನಿಲ್ಲಿಸಿದ್ದ ಶರೀಫ್ ಪುತ್ರನಿಗೆ ಸೇರಿದ 25 ಸಾವಿರ ಮೌಲ್ಯದ ಸೈಕಲನ್ನು ವ್ಯಕ್ತಿಯೊಬ್ಬ ಎಗರಿಸಿದ್ದಾನೆ. ಸೈಕಲನ್ನು ಎತ್ತಿಕೊಂಡು ಹೋಗುತ್ತಿರುವ ದೃಶ್ಯ ಫ್ಲಾಟಿನ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಆಗಸ್ಟ್ 26ರಂದು ಮಧ್ಯಾಹ್ನ ಘಟನೆ ನಡೆದಿದ್ದು, ಈ ಬಗ್ಗೆ ಇನ್ ಸ್ಪೆಕ್ಟರ್ ಶರೀಫ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿಲ್ಲ. ಕಳವು ಪೊಲೀಸರ ಮನೆಯಿಂದಲೇ ಆಗಿದ್ದರೂ, ಆ ಬಗ್ಗೆ ದೂರು ದಾಖಲು ಮಾಡಬೇಕಾದ್ದು ಪೊಲೀಸ್ ಠಾಣೆಯಲ್ಲೇ ತಾನೆ.
ಆದರೆ, ಇಲ್ಲಿ ಠಾಣೆಯ ಮುಖ್ಯಸ್ಥ ಆಗಿರುವ ಇನ್ ಸ್ಪೆಕ್ಟರ್ ಮನೆಯಿಂದಲೇ ಕಳವಾಗಿದ್ದು, ಚಾಣಾಕ್ಷ ಕಳ್ಳ ಸೈಕಲನ್ನು ಎಗರಿಸಿ ಪೊಲೀಸನಿಗೇ ಚಳ್ಳೆಹಣ್ಣು ತಿನ್ನಿಸಿದ್ದಾನೆ. ಸದ್ಯಕ್ಕೆ ಸೈಕಲ್ ಕದ್ಕೊಂಡು ತೆರಳಿರುವ ಕಳ್ಳನ ಸಿಸಿಟಿವಿ ಫೋಟೋವನ್ನು ಪೊಲೀಸರು ವಾಟ್ಸಪ್ ಗ್ರೂಪಿನಲ್ಲಿ ಹಾಕಿದ್ದಾರೆ. ಸೈಕಲಿಗೆ ಸೀರಿಯಲ್ ನಂಬರ್ ಅಂತೂ ಇಲ್ಲ. ಕಳ್ಳನ ಮುಖ ನೋಡಿಯೇ ಸೈಕಲ್ ಹುಡುಕಬೇಕಷ್ಟೆ.
Man steals bicycle worth 25 thousand from Traffic Police inspectors Shariff's house in Urwa, Mangalore
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm