ಬ್ರೇಕಿಂಗ್ ನ್ಯೂಸ್
28-08-21 10:37 pm Mangaluru Correspondent ಕ್ರೈಂ
ಮಂಗಳೂರು, ಆಗಸ್ಟ್ 28: ಪೊಲೀಸರು ಕಳ್ಳರನ್ನು ಹಿಡಿಯೋರು ಅಂತಾರೆ. ಹಾಗಾಗಿ, ಕಳ್ಳ ಏನಿದ್ದರೂ ಪೊಲೀಸರ ಮನೆಗಂತೂ ಕನ್ನ ಹಾಕಲು ಹೋಗಲ್ಲ. ಸಿಕ್ಕಿಬಿದ್ದರೆ ಬೆನ್ನು ಚಪ್ಪಡಿ ಮಾಡಿಕೊಳ್ಳಬೇಕು ಅಂತ ಪೊಲೀಸರ ಉಸಾಬರಿ ಬೇಡವೆಂದು ದೂರ ನಿಲ್ಲುತ್ತಾರೆ. ಆದರೆ, ಇಲ್ಲೊಬ್ಬ ಪೊಲೀಸರಿಗೇ ಮೇಷ್ಟ್ರು ಆಗಿರುವ ಇನ್ ಸ್ಪೆಕ್ಟರ್ ಒಬ್ಬರ ಮನೆಗೆ ಕನ್ನ ಹಾಕಿದ್ದಾನೆ.
ಹೌದು.. ಮಂಗಳೂರಿನಲ್ಲಿ ಈ ಹಿಂದೆ ಉರ್ವಾ ಠಾಣೆಯಲ್ಲಿ ಇನ್ ಸ್ಪೆಕ್ಟರ್ ಆಗಿದ್ದ, ಸದ್ಯಕ್ಕೆ ಸಂಚಾರ ವಿಭಾಗದಲ್ಲಿ ಕರ್ತವ್ಯದಲ್ಲಿರುವ ಮಹಮ್ಮದ್ ಶರೀಫ್ ಅವರ ಮನೆಯ ಹೊರಗೆ ನಿಲ್ಲಿಸಿದ್ದ ಸೈಕಲನ್ನು ಕಳ್ಳ ಎಗರಿಸಿದ್ದಾನೆ. ಉರ್ವಾ ಮೈದಾನದ ಬಳಿಯ ಚೈತನ್ಯ ಅಪಾರ್ಟ್ಮೆಂಟ್ ನಲ್ಲಿ ಒಂದನೇ ಮಹಡಿಯಲ್ಲಿ ಇನ್ ಸ್ಪೆಕ್ಟರ್ ಶರೀಫ್ ಮನೆಯಿದೆ.
ಕೆಳಗೆ ಪಾರ್ಕಿಂಗ್ ಏರಿಯಾದಲ್ಲಿ ನಿಲ್ಲಿಸಿದ್ದ ಶರೀಫ್ ಪುತ್ರನಿಗೆ ಸೇರಿದ 25 ಸಾವಿರ ಮೌಲ್ಯದ ಸೈಕಲನ್ನು ವ್ಯಕ್ತಿಯೊಬ್ಬ ಎಗರಿಸಿದ್ದಾನೆ. ಸೈಕಲನ್ನು ಎತ್ತಿಕೊಂಡು ಹೋಗುತ್ತಿರುವ ದೃಶ್ಯ ಫ್ಲಾಟಿನ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಆಗಸ್ಟ್ 26ರಂದು ಮಧ್ಯಾಹ್ನ ಘಟನೆ ನಡೆದಿದ್ದು, ಈ ಬಗ್ಗೆ ಇನ್ ಸ್ಪೆಕ್ಟರ್ ಶರೀಫ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿಲ್ಲ. ಕಳವು ಪೊಲೀಸರ ಮನೆಯಿಂದಲೇ ಆಗಿದ್ದರೂ, ಆ ಬಗ್ಗೆ ದೂರು ದಾಖಲು ಮಾಡಬೇಕಾದ್ದು ಪೊಲೀಸ್ ಠಾಣೆಯಲ್ಲೇ ತಾನೆ.
ಆದರೆ, ಇಲ್ಲಿ ಠಾಣೆಯ ಮುಖ್ಯಸ್ಥ ಆಗಿರುವ ಇನ್ ಸ್ಪೆಕ್ಟರ್ ಮನೆಯಿಂದಲೇ ಕಳವಾಗಿದ್ದು, ಚಾಣಾಕ್ಷ ಕಳ್ಳ ಸೈಕಲನ್ನು ಎಗರಿಸಿ ಪೊಲೀಸನಿಗೇ ಚಳ್ಳೆಹಣ್ಣು ತಿನ್ನಿಸಿದ್ದಾನೆ. ಸದ್ಯಕ್ಕೆ ಸೈಕಲ್ ಕದ್ಕೊಂಡು ತೆರಳಿರುವ ಕಳ್ಳನ ಸಿಸಿಟಿವಿ ಫೋಟೋವನ್ನು ಪೊಲೀಸರು ವಾಟ್ಸಪ್ ಗ್ರೂಪಿನಲ್ಲಿ ಹಾಕಿದ್ದಾರೆ. ಸೈಕಲಿಗೆ ಸೀರಿಯಲ್ ನಂಬರ್ ಅಂತೂ ಇಲ್ಲ. ಕಳ್ಳನ ಮುಖ ನೋಡಿಯೇ ಸೈಕಲ್ ಹುಡುಕಬೇಕಷ್ಟೆ.
Man steals bicycle worth 25 thousand from Traffic Police inspectors Shariff's house in Urwa, Mangalore
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am