ಬ್ರೇಕಿಂಗ್ ನ್ಯೂಸ್
29-08-21 08:56 pm Mangaluru Correspondent ಕ್ರೈಂ
ಉಳ್ಳಾಲ, ಆ.29: ಅಡಿಕೆ ತೋಟದಲ್ಲಿ ಮೇಯಲು ಬರುತ್ತಿದ್ದ ಬೀಡಾಡಿ ಕೋಣವೊಂದನ್ನು ತೋಟದ ಮಾಲೀಕನೇ ಬಾಡಿಗೆ ಯುವಕರಿಂದ ಕೊಲ್ಲಿಸಿದ್ದಾರೆ ಎನ್ನುವ ಆರೋಪ ಕೇಳಿಬಂದಿದ್ದು ಕೋಟೆಕಾರು ಗ್ರಾಮದ ಮಾಡೂರಿನ ಬಲ್ಯ ಎಂಬಲ್ಲಿ ಘಟನೆ ನಡೆದಿದೆ.
ಇಂದು ಸಂಜೆ ವೇಳೆಗೆ ಮಾಡೂರಿನ ಬಲ್ಯದ ನಿರ್ಜನ ಪ್ರದೇಶದ ಗುಡ್ಡದಲ್ಲಿ ಗುಂಡಿನ ಸದ್ದು ಕೇಳಿಸಿದ್ದು ಕೂಡಲೇ ಅಲ್ಲಿಗೆ ಸ್ಥಳೀಯರು ಧಾವಿಸಿದ್ದಾರೆ. ಸ್ಥಳೀಯರು ಬಂದಾಗ ನಿರ್ಜನ ಪ್ರದೇಶದ ಗುಡ್ಡದಲ್ಲಿ ಬೀಡಾಡಿ ಕೋಣವು ಕತ್ತು ಕೊಯ್ದ ಸ್ಥಿತಿಯಲ್ಲಿ ಸತ್ತು ಬಿದ್ದಿತ್ತು. ಸುದ್ದಿ ತಿಳಿಯುತ್ತಿದ್ದಂತೆ ಸ್ಥಳದಲ್ಲಿ ಬಜರಂಗದಳದ ಕಾರ್ಯಕರ್ತರು ಜಮಾಯಿಸಿದ್ದಾರೆ. ಕೋಣ ಸತ್ತು ಬಿದ್ದಿದ್ದ ಸ್ಥಳಕ್ಕೆ ಸ್ಥಳೀಯ ಜಮೀನು ಮಾಲೀಕ ಜಯರಾಮ ಶೆಟ್ಟಿ ಎಂಬವರು ಬಂದಿದ್ದು ತನ್ನ ತೋಟಕ್ಕೆ ದಾಳಿ ಮಾಡುತ್ತಿದ್ದ ಕೋಣವನ್ನ ಅನ್ಯ ಕೋಮಿನ ವ್ಯಕ್ತಿಗಳಿಂದ ಗುಂಡಿಕ್ಕಿ ಕೊಲ್ಲಿಸಿರುವುದಾಗಿ ಸ್ಥಳೀಯರಲ್ಲಿ ಹೇಳಿದ್ದಾರೆ ಎನ್ನಲಾಗಿದೆ.
ಕೂಡಲೇ ಬಜರಂಗದಳ ಸಂಘಟನೆಯ ಪ್ರಮುಖರಾದ ಪವಿತ್ರ ಕೆರೆಬೈಲು, ಅರ್ಜುನ್ ಮಾಡೂರು ಉಳ್ಳಾಲ ಪೊಲೀಸರಿಗೆ ದೂರು ನೀಡಿದ್ದು ಸ್ಥಳಕ್ಕೆ ಬಂದ ಉಳ್ಳಾಲ ಪಿಐ ಸಂದೀಪ್ ಅವರು ಜಯರಾಮ್ ರೈ ಅವರನ್ನ ವಶಕ್ಕೆ ಪಡೆದಿದ್ದಾರೆ. ಪೊಲೀಸರು ಬಂದು ಜಯರಾಮ್ ಶೆಟ್ಟಿಯನ್ನು ವಶಕ್ಕೆ ಪಡೆಯುತ್ತಿದ್ದಂತೆ ಆ ವ್ಯಕ್ತಿ ಉಲ್ಟಾ ಹೊಡೆದಿದ್ದಾರೆ. ತಾನೇನು ಕೋಣವನ್ನ ಕೊಲ್ಲಿಸಿಲ್ಲ. ಯಾರೋ ಮೂವರು ತಮ್ಮ ಕೋಣ ನಾಪತ್ತೆಯಾಗಿದೆ ಎಂದು ಬಂದಿದ್ದರು ಎಂದಿದ್ದಾರೆ. ಆದರೆ, ಹಂತಕರು ಜಯರಾಮ್ ಶೆಟ್ಟಿಯ ಮನೆಯ ಮುಂದೆಯೇ ಸ್ಕೂಟರನ್ನ ಬಿಟ್ಟು ಓಡಿದ್ದು ಸಂಶಯಕ್ಕೆ ಕಾರಣವಾಗಿದೆ.






ಸ್ಥಳೀಯರು ಗುಂಡಿನ ಶಬ್ದ ಕೇಳಿ ಸ್ಥಳದಲ್ಲಿ ಸೇರಿದ್ದರು. ಪೊಲೀಸರು ಹಂತಕರು ಯಾರೆಂದು ಜಯರಾಮ ಶೆಟ್ಟಿಯ ಮನೆಯವರ ಬಳಿ ವಿಚಾರಿಸಿದ್ದು ಕೋಣವನ್ನು ಹಿಡಿಯಲು ಬಂದಿದ್ದವರ ಮೊಬೈಲ್ ಸಂಖ್ಯೆಯನ್ನ ಪೊಲೀಸರಿಗೆ ನೀಡಿದ್ದಾರೆ. ಹಂತಕರ ಮೊಬೈಲ್ ಸಂಖ್ಯೆ ಆಧಾರದಲ್ಲಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.
ಕೋಣವನ್ನ ಕೊಲೆಗೈದ ಮೂವರು ಯುವಕರು ತಾವು ಬಂದಿದ್ದ ಸ್ಕೂಟರನ್ನ ಜಯರಾಮ್ ಶೆಟ್ಟಿ ಮನೆ ಮುಂದೆಯೇ ಬಿಟ್ಟು ಪರಾರಿಯಾಗಿದ್ದಾರೆ. ಸ್ಕೂಟರಲ್ಲಿ ಎರಡು, ಮೂರು ನಂಬರ್ ಪ್ಲೇಟ್ ದೊರಕಿದೆ. ಕೊಲೆಯಾದ ಕೋಣವನ್ನ ಮಹಜರು ನಡೆಸಲಾಗುತ್ತಿದೆ. ಕೈಗೆ ಸಿಗದೆ ಓಡಾಡುತ್ತಿದ್ದ ಬೀಡಾಡಿ ಕೋಣವನ್ನು ಸ್ಥಳೀಯರೇ ಸೇರಿ ಕೊಲ್ಲಿಸಿದ್ದಾರೆ ಎನ್ನಲಾಗುತ್ತಿದೆ. ಇದೀಗ ಹಂತಕರನ್ನು ಕೂಡಲೇ ಪತ್ತೆಹಚ್ಚುವಂತೆ ಸ್ಥಳೀಯ ಬಜರಂಗದಳ ಕಾರ್ಯಕರ್ತರು ಆಗ್ರಹಿಸಿದ್ದಾರೆ.
Buffalo killed by Gun Shot and slitting throat for entering field in Thokottu, Mangalore. The Incident took place at kotekar. The incident came to light after people heard the Gunshot sound. It is said that the field owner Jayaram Shetty was irritated by the buffalo entering his land and hence hired a guy to kill the animal.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm