ಬ್ರೇಕಿಂಗ್ ನ್ಯೂಸ್
30-08-21 04:28 pm Mangaluru Correspondent ಕ್ರೈಂ
ಮೂಡುಬಿದಿರೆ, ಆಗಸ್ಟ್ 30: ಮಹಿಳೆಯೊಬ್ಬಳ ನಗ್ನಚಿತ್ರಗಳನ್ನು ಮುಂದಿಟ್ಟು ಬ್ಲಾಕ್ ಮೇಲ್ ಮಾಡುತ್ತಿದ್ದ ಯುವಕನನ್ನು ಮೂಡುಬಿದ್ರೆ ಪೊಲೀಸರು ಬಂಧಿಸಿದ್ದಾರೆ. ಪುತ್ತಿಗೆ ಗ್ರಾಮದ ನಿವಾಸಿ ವಿಜಯ್ ಗೌಡ(33) ಬಂಧಿತ.
ಮಹಿಳೆಯ ಮನೆಗೆ ಕೂಲಿ ಕೆಲಸಕ್ಕೆ ಬರುತ್ತಿದ್ದ ವಿಜಯ್ ಗೌಡ ಆನಂತರ ಮೊಬೈಲ್ ನಂಬರ್ ಪಡೆದು ಸಲುಗೆ ಬೆಳೆಸಿದ್ದಾನೆ. ಆನಂತರ ಕರೆ ಮಾಡಿ, ತನಗೆ ವಾಟ್ಸಪ್ ನಲ್ಲಿ ನಗ್ನಚಿತ್ರಗಳನ್ನು ಕಳುಹಿಸುವಂತೆ ಆರೋಪಿಯು ಒತ್ತಡ ಹೇರಿದ್ದು, ಇಲ್ಲದಿದ್ದರೆ ತನಗೆ ನಿನ್ನ ಜೊತೆ ಸಂಬಂಧ ಇದೆಯೆಂದು ಸುದ್ದಿ ಹಬ್ಬಿಸುವುದಾಗಿ ಬೆದರಿಸಿದ್ದಾನೆ.

ಒತ್ತಡಕ್ಕೆ ಬಿದ್ದ ಮಹಿಳೆ, ಆಬಳಿಕ ಯುವಕನಿಗೆ ನಗ್ನಚಿತ್ರಗಳನ್ನು ಕಳುಹಿಸಿದ್ದು ಅದೇ ಫೋಟೋಗಳನ್ನು ಮುಂದಿಟ್ಟು ಯುವಕ ಬ್ಲಾಕ್ ಮೇಲ್ ಮಾಡಿದ್ದಾನೆ. ಆನಂತರ ತನ್ನೊಂದಿಗೆ ಲೈಂಗಿಕ ಕ್ರಿಯೆಗೆ ಸಹಕರಿಸುವಂತೆ ಬೇಡಿಕೆ ಇಟ್ಟು ಒತ್ತಡ ಹೇರಿದ್ದಾನೆ. ಅಲ್ಲದೆ, ಫೋಟೋಗಳನ್ನು ಜಾಲತಾಣದಲ್ಲಿ ಹಾಕುವುದಾಗಿ ಬೆದರಿಸಿ ಹಣ ನೀಡುವಂತೆ ಪೀಡಿಸುತ್ತಿದ್ದ. ಮನೆಯವರಿಗೂ ನಿನ್ನ ಬೆತ್ತಲೆ ಫೋಟೋಗಳನ್ನು ತೋರಿಸುವುದಾಗಿ ಹೇಳಿ ಬೆದರಿಸಿದ್ದು, ಆಗಸ್ಟ್ 19ರಂದು ಎರಡು ಸಾವಿರ ರೂಪಾಯಿ ಪೀಕಿಸಿಕೊಂಡಿದ್ದಾನೆ. ಆನಂತರ ಆಗಸ್ಟ್ 28ರಂದು ಮಹಿಳೆಯ ಮನೆಗೆ ತೆರಳಿ, ಹಣ ನೀಡುವಂತೆ ಪೀಡಿಸಿದ್ದು, ಹಣ ನೀಡದೇ ಇದ್ದಾಗ ನಗ್ನಚಿತ್ರಗಳನ್ನು ತನ್ನ ಗೆಳೆಯರಿಗೆ ಕಳುಹಿಸಿ ಮಾನ ಹರಾಜು ಮಾಡಿದ್ದಾನೆ ಎಂದು ಮಹಿಳೆ ಪೊಲೀಸ್ ದೂರು ನೀಡಿದ್ದಾಳೆ.
ಪೊಲೀಸರು ಆರೋಪಿ ವಿಜಯ್ ಗೌಡನನ್ನು ಬಂಧಿಸಿದ್ದಾರೆ. ಮಹಿಳೆ ಮತ್ತು ಯುವಕನಿಗೆ ಬೇರೆಯೇ ಮದುವೆಯಾಗಿದ್ದು ಅದರ ನಡುವೆ ಇವರ ಕಿತಾಪತಿಯಿಂದಾಗಿ ಈಗ ಮಾನ ಬೀದಿಗೆ ಬಂದಂತಾಗಿದೆ.
Man Blackmail Girl Over Nude photo Extorts Money Arrested In Moodbidre.
27-10-25 10:52 pm
Bangalore Correspondent
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
ಡಿಕೆಶಿ ದಿಢೀರ್ ದೆಹಲಿಗೆ ದೌಡು ; ವಿಶೇಷ ಏನೂ ಇಲ್ಲ,...
26-10-25 07:33 pm
ಪ್ರೀತಿ ನೆಪದಲ್ಲಿ ಹಿಂದು ಯುವತಿಗೆ ಮೋಸ ; ಮದುವೆಯಾಗಲ...
25-10-25 09:33 pm
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
26-10-25 11:01 pm
HK News Desk
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
27-10-25 11:01 pm
Mangalore Correspondent
ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ...
27-10-25 10:25 pm
ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
RSS Leader Kalladka Prabhakar Bhat: ಕಲ್ಲಡ್ಕ ಪ...
27-10-25 07:24 pm
ಹೈಕಮಾಂಡ್ ತೀರ್ಮಾನ ಮಾಡಿದ್ರೆ ಐದು ವರ್ಷ ಸಿಎಂ ಆಗಿರು...
27-10-25 05:56 pm
27-10-25 05:29 pm
HK News Desk
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm