ಬ್ರೇಕಿಂಗ್ ನ್ಯೂಸ್
30-08-21 04:28 pm Mangaluru Correspondent ಕ್ರೈಂ
ಮೂಡುಬಿದಿರೆ, ಆಗಸ್ಟ್ 30: ಮಹಿಳೆಯೊಬ್ಬಳ ನಗ್ನಚಿತ್ರಗಳನ್ನು ಮುಂದಿಟ್ಟು ಬ್ಲಾಕ್ ಮೇಲ್ ಮಾಡುತ್ತಿದ್ದ ಯುವಕನನ್ನು ಮೂಡುಬಿದ್ರೆ ಪೊಲೀಸರು ಬಂಧಿಸಿದ್ದಾರೆ. ಪುತ್ತಿಗೆ ಗ್ರಾಮದ ನಿವಾಸಿ ವಿಜಯ್ ಗೌಡ(33) ಬಂಧಿತ.
ಮಹಿಳೆಯ ಮನೆಗೆ ಕೂಲಿ ಕೆಲಸಕ್ಕೆ ಬರುತ್ತಿದ್ದ ವಿಜಯ್ ಗೌಡ ಆನಂತರ ಮೊಬೈಲ್ ನಂಬರ್ ಪಡೆದು ಸಲುಗೆ ಬೆಳೆಸಿದ್ದಾನೆ. ಆನಂತರ ಕರೆ ಮಾಡಿ, ತನಗೆ ವಾಟ್ಸಪ್ ನಲ್ಲಿ ನಗ್ನಚಿತ್ರಗಳನ್ನು ಕಳುಹಿಸುವಂತೆ ಆರೋಪಿಯು ಒತ್ತಡ ಹೇರಿದ್ದು, ಇಲ್ಲದಿದ್ದರೆ ತನಗೆ ನಿನ್ನ ಜೊತೆ ಸಂಬಂಧ ಇದೆಯೆಂದು ಸುದ್ದಿ ಹಬ್ಬಿಸುವುದಾಗಿ ಬೆದರಿಸಿದ್ದಾನೆ.

ಒತ್ತಡಕ್ಕೆ ಬಿದ್ದ ಮಹಿಳೆ, ಆಬಳಿಕ ಯುವಕನಿಗೆ ನಗ್ನಚಿತ್ರಗಳನ್ನು ಕಳುಹಿಸಿದ್ದು ಅದೇ ಫೋಟೋಗಳನ್ನು ಮುಂದಿಟ್ಟು ಯುವಕ ಬ್ಲಾಕ್ ಮೇಲ್ ಮಾಡಿದ್ದಾನೆ. ಆನಂತರ ತನ್ನೊಂದಿಗೆ ಲೈಂಗಿಕ ಕ್ರಿಯೆಗೆ ಸಹಕರಿಸುವಂತೆ ಬೇಡಿಕೆ ಇಟ್ಟು ಒತ್ತಡ ಹೇರಿದ್ದಾನೆ. ಅಲ್ಲದೆ, ಫೋಟೋಗಳನ್ನು ಜಾಲತಾಣದಲ್ಲಿ ಹಾಕುವುದಾಗಿ ಬೆದರಿಸಿ ಹಣ ನೀಡುವಂತೆ ಪೀಡಿಸುತ್ತಿದ್ದ. ಮನೆಯವರಿಗೂ ನಿನ್ನ ಬೆತ್ತಲೆ ಫೋಟೋಗಳನ್ನು ತೋರಿಸುವುದಾಗಿ ಹೇಳಿ ಬೆದರಿಸಿದ್ದು, ಆಗಸ್ಟ್ 19ರಂದು ಎರಡು ಸಾವಿರ ರೂಪಾಯಿ ಪೀಕಿಸಿಕೊಂಡಿದ್ದಾನೆ. ಆನಂತರ ಆಗಸ್ಟ್ 28ರಂದು ಮಹಿಳೆಯ ಮನೆಗೆ ತೆರಳಿ, ಹಣ ನೀಡುವಂತೆ ಪೀಡಿಸಿದ್ದು, ಹಣ ನೀಡದೇ ಇದ್ದಾಗ ನಗ್ನಚಿತ್ರಗಳನ್ನು ತನ್ನ ಗೆಳೆಯರಿಗೆ ಕಳುಹಿಸಿ ಮಾನ ಹರಾಜು ಮಾಡಿದ್ದಾನೆ ಎಂದು ಮಹಿಳೆ ಪೊಲೀಸ್ ದೂರು ನೀಡಿದ್ದಾಳೆ.
ಪೊಲೀಸರು ಆರೋಪಿ ವಿಜಯ್ ಗೌಡನನ್ನು ಬಂಧಿಸಿದ್ದಾರೆ. ಮಹಿಳೆ ಮತ್ತು ಯುವಕನಿಗೆ ಬೇರೆಯೇ ಮದುವೆಯಾಗಿದ್ದು ಅದರ ನಡುವೆ ಇವರ ಕಿತಾಪತಿಯಿಂದಾಗಿ ಈಗ ಮಾನ ಬೀದಿಗೆ ಬಂದಂತಾಗಿದೆ.
Man Blackmail Girl Over Nude photo Extorts Money Arrested In Moodbidre.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm