ಬ್ರೇಕಿಂಗ್ ನ್ಯೂಸ್
30-08-21 04:28 pm Mangaluru Correspondent ಕ್ರೈಂ
ಮೂಡುಬಿದಿರೆ, ಆಗಸ್ಟ್ 30: ಮಹಿಳೆಯೊಬ್ಬಳ ನಗ್ನಚಿತ್ರಗಳನ್ನು ಮುಂದಿಟ್ಟು ಬ್ಲಾಕ್ ಮೇಲ್ ಮಾಡುತ್ತಿದ್ದ ಯುವಕನನ್ನು ಮೂಡುಬಿದ್ರೆ ಪೊಲೀಸರು ಬಂಧಿಸಿದ್ದಾರೆ. ಪುತ್ತಿಗೆ ಗ್ರಾಮದ ನಿವಾಸಿ ವಿಜಯ್ ಗೌಡ(33) ಬಂಧಿತ.
ಮಹಿಳೆಯ ಮನೆಗೆ ಕೂಲಿ ಕೆಲಸಕ್ಕೆ ಬರುತ್ತಿದ್ದ ವಿಜಯ್ ಗೌಡ ಆನಂತರ ಮೊಬೈಲ್ ನಂಬರ್ ಪಡೆದು ಸಲುಗೆ ಬೆಳೆಸಿದ್ದಾನೆ. ಆನಂತರ ಕರೆ ಮಾಡಿ, ತನಗೆ ವಾಟ್ಸಪ್ ನಲ್ಲಿ ನಗ್ನಚಿತ್ರಗಳನ್ನು ಕಳುಹಿಸುವಂತೆ ಆರೋಪಿಯು ಒತ್ತಡ ಹೇರಿದ್ದು, ಇಲ್ಲದಿದ್ದರೆ ತನಗೆ ನಿನ್ನ ಜೊತೆ ಸಂಬಂಧ ಇದೆಯೆಂದು ಸುದ್ದಿ ಹಬ್ಬಿಸುವುದಾಗಿ ಬೆದರಿಸಿದ್ದಾನೆ.

ಒತ್ತಡಕ್ಕೆ ಬಿದ್ದ ಮಹಿಳೆ, ಆಬಳಿಕ ಯುವಕನಿಗೆ ನಗ್ನಚಿತ್ರಗಳನ್ನು ಕಳುಹಿಸಿದ್ದು ಅದೇ ಫೋಟೋಗಳನ್ನು ಮುಂದಿಟ್ಟು ಯುವಕ ಬ್ಲಾಕ್ ಮೇಲ್ ಮಾಡಿದ್ದಾನೆ. ಆನಂತರ ತನ್ನೊಂದಿಗೆ ಲೈಂಗಿಕ ಕ್ರಿಯೆಗೆ ಸಹಕರಿಸುವಂತೆ ಬೇಡಿಕೆ ಇಟ್ಟು ಒತ್ತಡ ಹೇರಿದ್ದಾನೆ. ಅಲ್ಲದೆ, ಫೋಟೋಗಳನ್ನು ಜಾಲತಾಣದಲ್ಲಿ ಹಾಕುವುದಾಗಿ ಬೆದರಿಸಿ ಹಣ ನೀಡುವಂತೆ ಪೀಡಿಸುತ್ತಿದ್ದ. ಮನೆಯವರಿಗೂ ನಿನ್ನ ಬೆತ್ತಲೆ ಫೋಟೋಗಳನ್ನು ತೋರಿಸುವುದಾಗಿ ಹೇಳಿ ಬೆದರಿಸಿದ್ದು, ಆಗಸ್ಟ್ 19ರಂದು ಎರಡು ಸಾವಿರ ರೂಪಾಯಿ ಪೀಕಿಸಿಕೊಂಡಿದ್ದಾನೆ. ಆನಂತರ ಆಗಸ್ಟ್ 28ರಂದು ಮಹಿಳೆಯ ಮನೆಗೆ ತೆರಳಿ, ಹಣ ನೀಡುವಂತೆ ಪೀಡಿಸಿದ್ದು, ಹಣ ನೀಡದೇ ಇದ್ದಾಗ ನಗ್ನಚಿತ್ರಗಳನ್ನು ತನ್ನ ಗೆಳೆಯರಿಗೆ ಕಳುಹಿಸಿ ಮಾನ ಹರಾಜು ಮಾಡಿದ್ದಾನೆ ಎಂದು ಮಹಿಳೆ ಪೊಲೀಸ್ ದೂರು ನೀಡಿದ್ದಾಳೆ.
ಪೊಲೀಸರು ಆರೋಪಿ ವಿಜಯ್ ಗೌಡನನ್ನು ಬಂಧಿಸಿದ್ದಾರೆ. ಮಹಿಳೆ ಮತ್ತು ಯುವಕನಿಗೆ ಬೇರೆಯೇ ಮದುವೆಯಾಗಿದ್ದು ಅದರ ನಡುವೆ ಇವರ ಕಿತಾಪತಿಯಿಂದಾಗಿ ಈಗ ಮಾನ ಬೀದಿಗೆ ಬಂದಂತಾಗಿದೆ.
Man Blackmail Girl Over Nude photo Extorts Money Arrested In Moodbidre.
02-05-26 04:48 pm
HK News Staffer
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm