ಬ್ರೇಕಿಂಗ್ ನ್ಯೂಸ್
30-08-21 04:28 pm Mangaluru Correspondent ಕ್ರೈಂ
ಮೂಡುಬಿದಿರೆ, ಆಗಸ್ಟ್ 30: ಮಹಿಳೆಯೊಬ್ಬಳ ನಗ್ನಚಿತ್ರಗಳನ್ನು ಮುಂದಿಟ್ಟು ಬ್ಲಾಕ್ ಮೇಲ್ ಮಾಡುತ್ತಿದ್ದ ಯುವಕನನ್ನು ಮೂಡುಬಿದ್ರೆ ಪೊಲೀಸರು ಬಂಧಿಸಿದ್ದಾರೆ. ಪುತ್ತಿಗೆ ಗ್ರಾಮದ ನಿವಾಸಿ ವಿಜಯ್ ಗೌಡ(33) ಬಂಧಿತ.
ಮಹಿಳೆಯ ಮನೆಗೆ ಕೂಲಿ ಕೆಲಸಕ್ಕೆ ಬರುತ್ತಿದ್ದ ವಿಜಯ್ ಗೌಡ ಆನಂತರ ಮೊಬೈಲ್ ನಂಬರ್ ಪಡೆದು ಸಲುಗೆ ಬೆಳೆಸಿದ್ದಾನೆ. ಆನಂತರ ಕರೆ ಮಾಡಿ, ತನಗೆ ವಾಟ್ಸಪ್ ನಲ್ಲಿ ನಗ್ನಚಿತ್ರಗಳನ್ನು ಕಳುಹಿಸುವಂತೆ ಆರೋಪಿಯು ಒತ್ತಡ ಹೇರಿದ್ದು, ಇಲ್ಲದಿದ್ದರೆ ತನಗೆ ನಿನ್ನ ಜೊತೆ ಸಂಬಂಧ ಇದೆಯೆಂದು ಸುದ್ದಿ ಹಬ್ಬಿಸುವುದಾಗಿ ಬೆದರಿಸಿದ್ದಾನೆ.

ಒತ್ತಡಕ್ಕೆ ಬಿದ್ದ ಮಹಿಳೆ, ಆಬಳಿಕ ಯುವಕನಿಗೆ ನಗ್ನಚಿತ್ರಗಳನ್ನು ಕಳುಹಿಸಿದ್ದು ಅದೇ ಫೋಟೋಗಳನ್ನು ಮುಂದಿಟ್ಟು ಯುವಕ ಬ್ಲಾಕ್ ಮೇಲ್ ಮಾಡಿದ್ದಾನೆ. ಆನಂತರ ತನ್ನೊಂದಿಗೆ ಲೈಂಗಿಕ ಕ್ರಿಯೆಗೆ ಸಹಕರಿಸುವಂತೆ ಬೇಡಿಕೆ ಇಟ್ಟು ಒತ್ತಡ ಹೇರಿದ್ದಾನೆ. ಅಲ್ಲದೆ, ಫೋಟೋಗಳನ್ನು ಜಾಲತಾಣದಲ್ಲಿ ಹಾಕುವುದಾಗಿ ಬೆದರಿಸಿ ಹಣ ನೀಡುವಂತೆ ಪೀಡಿಸುತ್ತಿದ್ದ. ಮನೆಯವರಿಗೂ ನಿನ್ನ ಬೆತ್ತಲೆ ಫೋಟೋಗಳನ್ನು ತೋರಿಸುವುದಾಗಿ ಹೇಳಿ ಬೆದರಿಸಿದ್ದು, ಆಗಸ್ಟ್ 19ರಂದು ಎರಡು ಸಾವಿರ ರೂಪಾಯಿ ಪೀಕಿಸಿಕೊಂಡಿದ್ದಾನೆ. ಆನಂತರ ಆಗಸ್ಟ್ 28ರಂದು ಮಹಿಳೆಯ ಮನೆಗೆ ತೆರಳಿ, ಹಣ ನೀಡುವಂತೆ ಪೀಡಿಸಿದ್ದು, ಹಣ ನೀಡದೇ ಇದ್ದಾಗ ನಗ್ನಚಿತ್ರಗಳನ್ನು ತನ್ನ ಗೆಳೆಯರಿಗೆ ಕಳುಹಿಸಿ ಮಾನ ಹರಾಜು ಮಾಡಿದ್ದಾನೆ ಎಂದು ಮಹಿಳೆ ಪೊಲೀಸ್ ದೂರು ನೀಡಿದ್ದಾಳೆ.
ಪೊಲೀಸರು ಆರೋಪಿ ವಿಜಯ್ ಗೌಡನನ್ನು ಬಂಧಿಸಿದ್ದಾರೆ. ಮಹಿಳೆ ಮತ್ತು ಯುವಕನಿಗೆ ಬೇರೆಯೇ ಮದುವೆಯಾಗಿದ್ದು ಅದರ ನಡುವೆ ಇವರ ಕಿತಾಪತಿಯಿಂದಾಗಿ ಈಗ ಮಾನ ಬೀದಿಗೆ ಬಂದಂತಾಗಿದೆ.
Man Blackmail Girl Over Nude photo Extorts Money Arrested In Moodbidre.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
06-02-26 10:56 pm
Mangalore Correspondent
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm