ಬ್ರೇಕಿಂಗ್ ನ್ಯೂಸ್
31-08-21 01:04 pm Headline Karnataka News Network ಕ್ರೈಂ
ದಾವಣಗೆರೆ, ಆಗಸ್ಟ್ 31: ಮದ್ಯಪಾನ ಮಾಡಬೇಡಿ ಎಂದು ಬುದ್ಧಿವಾದ ಹೇಳಿದ ಪತ್ನಿಯನ್ನೇ ಪತಿ ಕತ್ತು ಹಿಸುಕಿ ಕೊಂದಿರುವ ಘಟನೆ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಸೊರಟೂರು ಗ್ರಾಮದಲ್ಲಿ ಜರುಗಿದೆ.
40 ವರ್ಷದ ಶಿಲ್ಪ ಪತಿಯಿಂದ ಕೊಲೆಯಾದ ದುರ್ದೈವಿ. ಗಿರೀಶ್ ಆರೋಪಿ. ಸರಟೂರು ಗ್ರಾಮದಲ್ಲಿ ಕಳೆದ ಎರಡು ವರ್ಷಗಳಿಂದ ಗಿರೀಶ್ ಹಾಗೂ ಶಿಲ್ಪಾ ದಂಪತಿ ವಾಸವಿದ್ದರು. ಪ್ರತಿನಿತ್ಯ ಆರೋಪಿ ಕುಡಿದು ಮನೆಗೆ ಬರುತ್ತಿದ್ದನಂತೆ. ಕುಡಿಯಬೇಡಿ ಎಂದು ಹೇಳಿದ್ದಕ್ಕೆ ಆಕೆಯನ್ನು ಕೊಲೆ ಮಾಡಿರುವ ಗಿರೀಶ್ ತಲೆಮರೆಸಿಕೊಂಡಿದ್ದ. ಈ ಕುರಿತು ತನಿಖೆ ನಡೆಸಿದ ಹೊನ್ನಾಳಿ ಸಿಪಿಐ ದೇವರಾಜ್ ನೇತೃತ್ವದ ತಂಡ ಕೇವಲ 8 ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ.

ಕುಡಿದು ಬಂದ ಪತಿ ಗಿರೀಶ್, ಊಟ ನೀಡುವಂತೆ ಪತ್ನಿ ಶಿಲ್ಪಾಳ ಬಳಿ ಕ್ಯಾತೆ ತೆಗೆದು ಜಗಳ ಮಾಡಿದ್ದಾನೆ. ಈ ವೇಳೆ ಊಟ ನೀಡದ ಶಿಲ್ಪಾ ಮದ್ಯಪಾನ ಮಾಡ್ಬೇಡ ಎಂದು ಬುದ್ಧಿವಾದ ಹೇಳಿದ್ದಾಳೆ. ನಶೆಯಲ್ಲಿದ್ದ ಗಿರೀಶ್ ಪತ್ನಿಗೆ ಹೊಡೆದು, ಕುತ್ತಿಗೆಗೆ ನೇಣು ಬಿಗಿಯಲು ಮುಂದಾಗಿದ್ದಾನೆ. ಶಿಲ್ಪಾ ಕಾಲಿನಿಂದ ಒದ್ದಿದ್ದು, ಗಿರೀಶ್ಗೆ ಗಾಯಗಳಾಗಿದೆ. ಗಾಯಗೊಂಡರೂ ಬಿಡದ ಆತ ನಂತರ ಪತ್ನಿಯ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ.
ಆರೋಪಿ ಪತಿ ಗಿರೀಶ್ ಪತ್ನಿಯನ್ನು ಕೊಲೆಗೈದು ತಲೆ ಮರೆಸಿಕೊಂಡಿದ್ದ. ದಂಪತಿಯ ಜಗಳದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಗಿರೀಶ್ ಕೊಲೆ ಮಾಡಿ ಮನೆಯಿಂದ ಕಾಲ್ಕಿತ್ತು ಸರ್ಕಾರಿ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದಿದ್ದಾನೆ. ಜನರಿಂದ ಮಾಹಿತಿ ಪಡೆದ ಹೊನ್ನಾಳಿ ಪೋಲಿಸರು ಆಸ್ಪತ್ರೆಗೆ ಬಂಧಿಸಲು ಧಾವಿಸುವಷ್ಟರಲ್ಲಿ ಆತ ಕಾಲ್ಕಿತ್ತಿದ್ದಾನೆ.
ಆರೋಪಿಯ ಜಾಡು ಹಿಡಿದು ಹೋದ ಪೊಲೀಸರು ಕೊನೆಗೂ ಶಿಕಾರಿಪುರ ರಸ್ತೆಯಲ್ಲಿ ಓಡಾಡುತ್ತಿದ್ದ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
Davanagere Husband kills wife for advising not to drink. Husband has been arrested by police.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm