ಬ್ರೇಕಿಂಗ್ ನ್ಯೂಸ್
31-08-21 01:04 pm Headline Karnataka News Network ಕ್ರೈಂ
ದಾವಣಗೆರೆ, ಆಗಸ್ಟ್ 31: ಮದ್ಯಪಾನ ಮಾಡಬೇಡಿ ಎಂದು ಬುದ್ಧಿವಾದ ಹೇಳಿದ ಪತ್ನಿಯನ್ನೇ ಪತಿ ಕತ್ತು ಹಿಸುಕಿ ಕೊಂದಿರುವ ಘಟನೆ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಸೊರಟೂರು ಗ್ರಾಮದಲ್ಲಿ ಜರುಗಿದೆ.
40 ವರ್ಷದ ಶಿಲ್ಪ ಪತಿಯಿಂದ ಕೊಲೆಯಾದ ದುರ್ದೈವಿ. ಗಿರೀಶ್ ಆರೋಪಿ. ಸರಟೂರು ಗ್ರಾಮದಲ್ಲಿ ಕಳೆದ ಎರಡು ವರ್ಷಗಳಿಂದ ಗಿರೀಶ್ ಹಾಗೂ ಶಿಲ್ಪಾ ದಂಪತಿ ವಾಸವಿದ್ದರು. ಪ್ರತಿನಿತ್ಯ ಆರೋಪಿ ಕುಡಿದು ಮನೆಗೆ ಬರುತ್ತಿದ್ದನಂತೆ. ಕುಡಿಯಬೇಡಿ ಎಂದು ಹೇಳಿದ್ದಕ್ಕೆ ಆಕೆಯನ್ನು ಕೊಲೆ ಮಾಡಿರುವ ಗಿರೀಶ್ ತಲೆಮರೆಸಿಕೊಂಡಿದ್ದ. ಈ ಕುರಿತು ತನಿಖೆ ನಡೆಸಿದ ಹೊನ್ನಾಳಿ ಸಿಪಿಐ ದೇವರಾಜ್ ನೇತೃತ್ವದ ತಂಡ ಕೇವಲ 8 ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ.

ಕುಡಿದು ಬಂದ ಪತಿ ಗಿರೀಶ್, ಊಟ ನೀಡುವಂತೆ ಪತ್ನಿ ಶಿಲ್ಪಾಳ ಬಳಿ ಕ್ಯಾತೆ ತೆಗೆದು ಜಗಳ ಮಾಡಿದ್ದಾನೆ. ಈ ವೇಳೆ ಊಟ ನೀಡದ ಶಿಲ್ಪಾ ಮದ್ಯಪಾನ ಮಾಡ್ಬೇಡ ಎಂದು ಬುದ್ಧಿವಾದ ಹೇಳಿದ್ದಾಳೆ. ನಶೆಯಲ್ಲಿದ್ದ ಗಿರೀಶ್ ಪತ್ನಿಗೆ ಹೊಡೆದು, ಕುತ್ತಿಗೆಗೆ ನೇಣು ಬಿಗಿಯಲು ಮುಂದಾಗಿದ್ದಾನೆ. ಶಿಲ್ಪಾ ಕಾಲಿನಿಂದ ಒದ್ದಿದ್ದು, ಗಿರೀಶ್ಗೆ ಗಾಯಗಳಾಗಿದೆ. ಗಾಯಗೊಂಡರೂ ಬಿಡದ ಆತ ನಂತರ ಪತ್ನಿಯ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ.
ಆರೋಪಿ ಪತಿ ಗಿರೀಶ್ ಪತ್ನಿಯನ್ನು ಕೊಲೆಗೈದು ತಲೆ ಮರೆಸಿಕೊಂಡಿದ್ದ. ದಂಪತಿಯ ಜಗಳದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಗಿರೀಶ್ ಕೊಲೆ ಮಾಡಿ ಮನೆಯಿಂದ ಕಾಲ್ಕಿತ್ತು ಸರ್ಕಾರಿ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದಿದ್ದಾನೆ. ಜನರಿಂದ ಮಾಹಿತಿ ಪಡೆದ ಹೊನ್ನಾಳಿ ಪೋಲಿಸರು ಆಸ್ಪತ್ರೆಗೆ ಬಂಧಿಸಲು ಧಾವಿಸುವಷ್ಟರಲ್ಲಿ ಆತ ಕಾಲ್ಕಿತ್ತಿದ್ದಾನೆ.
ಆರೋಪಿಯ ಜಾಡು ಹಿಡಿದು ಹೋದ ಪೊಲೀಸರು ಕೊನೆಗೂ ಶಿಕಾರಿಪುರ ರಸ್ತೆಯಲ್ಲಿ ಓಡಾಡುತ್ತಿದ್ದ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
Davanagere Husband kills wife for advising not to drink. Husband has been arrested by police.
02-05-26 04:48 pm
HK News Staffer
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm