ಬ್ರೇಕಿಂಗ್ ನ್ಯೂಸ್
31-08-21 05:46 pm Mangaluru Correspondent ಕ್ರೈಂ
ಮಂಗಳೂರು, ಆಗಸ್ಟ್ 31: ಪೋಕ್ಸೋ ಪ್ರಕರಣದಲ್ಲಿ ಬಂಧಿತನಾಗಿದ್ದ ಆರೋಪಿ ಕೋರ್ಟಿಗೆ ಹಾಜರುಪಡಿಸಿದ ವೇಳೆ ನಗರದ ನ್ಯಾಯಾಲಯ ಸಂಕೀರ್ಣದ ಆರನೇ ಮಹಡಿಯಿಂದ ಹೊರಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಹೃದಯ ವಿದ್ರಾವಕ ಘಟನೆ ನಡೆದಿದೆ.
ತಲಪಾಡಿ ಕಿನ್ಯ ನಿವಾಸಿ ರವಿರಾಜ್ (32) ಕೋರ್ಟ್ ಮಹಡಿಯಿಂದ ಹಾರಿ ಸಾವು ಕಂಡವರು. ರವಿರಾಜ್ ಅವರನ್ನು ಸೋಮವಾರ ತೊಕ್ಕೊಟ್ಟಿನ ಸೆಬಾಸ್ಟಿಯನ್ ಕಾಲೇಜು ಬಳಿ ಅಪ್ರಾಪ್ತ ಹುಡುಗಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಪೊಲೀಸರು ಬಂಧಿಸಿದ್ದರು.











ಆರೋಪಿಯನ್ನು ಇಂದು ಉಳ್ಳಾಲ ಪೊಲೀಸರು ಕೋರ್ಟಿಗೆ ಹಾಜರುಪಡಿಸಿದ್ದರು. ನ್ಯಾಯಾಧೀಶರ ಮುಂದೆ ಹಾಜರುಪಡಿಸಿ ಹೊರಗೆ ತಂದು ಕುಳಿತಿರುವಂತೆ ಪೊಲೀಸರು ಸೂಚಿಸಿದ್ದರು. ಆತನ ಪರವಾಗಿ ಹಾಜರಾಗಿದ್ದ ವಕೀಲರು ರವಿರಾಜ್ ಬಳಿ ಮಾತನಾಡಿದ್ದು ಅಲ್ಲಿಯೇ ಇದ್ದರು. ಆದರೆ, ಅದೇ ವೇಳೆಗೆ ಹಠಾತ್ತಾಗಿ ಆರೋಪಿ ರವಿರಾಜ್ ಪೊಲೀಸರ ಕೈಯಿಂದ ತಪ್ಪಿಸಿಕೊಂಡು ಆರನೇ ಮಹಡಿಯಿಂದ ಕೆಳಕ್ಕೆ ಹಾರಿದ್ದಾನೆ. ಕೋರ್ಟ್ ಒಳಗಡೆಯೇ ಲಿಫ್ಟ್ ಇರುವ ಜಾಗದಲ್ಲಿ ಮೇಲಿನಿಂದ ಕೆಳಕ್ಕೆ ಬಿದ್ದ ವ್ಯಕ್ತಿ ಸ್ಥಳದಲ್ಲೇ ಸಾವು ಕಂಡಿದ್ದಾನೆ.





ಪ್ರಕರಣದಲ್ಲಿ ರವಿರಾಜ್, ತಾನೇನು ಹಾಗೆ ಮಾಡಿಲ್ಲ. ಪರಿಚಯದ ಹುಡುಗಿ ಎಂದು ಹತ್ತಿರ ಹೋಗಿದ್ದೆ ಎಂದು ವಕೀಲರಲ್ಲಿ ಹೇಳಿದ್ದರು. ಆದರೆ, ಕುಡಿದ ಮತ್ತಿನಲ್ಲಿದ್ದ ವ್ಯಕ್ತಿ ಸಾರ್ವಜನಿಕ ಪ್ರದೇಶದಲ್ಲಿ ಸೈಕಲಿನಲ್ಲಿ ಬಂದಿದ್ದ ಅನ್ಯಕೋಮಿನ ಹುಡುಗಿಯನ್ನು ಮುಟ್ಟಲು ಹೋಗಿದ್ದು ಸ್ಥಳೀಯರನ್ನು ಕೆರಳಿಸಿತ್ತು. ಸ್ಥಳೀಯರು ಸೇರಿ, ರವಿರಾಜ್ ಮೇಲೆ ಥಳಿಸಿ ಲೈಂಗಿಕ ಕಿರುಕುಳ ನೀಡಿದ್ದಾಗಿ ಆರೋಪಿಸಿ ಪೊಲೀಸರ ಕೈಗೆ ಒಪ್ಪಿಸಿದ್ದರು. ಪೊಲೀಸರು ಪೋಕ್ಸೋ ಕಾಯ್ದೆಯಡಿ ಕೇಸು ದಾಖಲಿಸಿದ್ದರು. ತಾನು ಮಾಡದ ತಪ್ಪಿಗೆ ಈ ರೀತಿ ಆಯ್ತಲ್ಲಾ ಎಂಬ ನೋವಿನಲ್ಲಿ ರವಿರಾಜ್ ಕೋರ್ಟ್ ಮಹಡಿಯಿಂದ ಹೊರಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ.
Mangalore Ullal Pocso case accused jumps from sixth floor in Mangalore court dies on spot in the court complex. The deceased has been identified as Raviraj
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm