ಬ್ರೇಕಿಂಗ್ ನ್ಯೂಸ್
01-09-21 11:35 am Headline Karnataka News Network ಕ್ರೈಂ
ಚಿಕ್ಕಮಗಳೂರು, ಸೆ.1 : ಕುದುರೆಮುಖ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಯುವಕರ ತಂಡವೊಂದು ಎಣ್ಣೆ ಪಾರ್ಟಿ ನಡೆಸುತ್ತಿದ್ದುದನ್ನು ಪ್ರಶ್ನೆ ಮಾಡಿದ ಹಿರಿಯ ಪರಿಸರವಾದಿ ಡಿ.ವಿ.ಗಿರೀಶ್ ಮತ್ತು ಅವರ ತಂಡದ ಮೇಲೆ ಕಿರಾತಕರು ಯದ್ವಾತದ್ವಾ ಹಲ್ಲೆ ನಡೆಸಿದ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದ್ದು ಭಾರೀ ಆಕ್ರೋಶ ಕೇಳಿಬಂದಿದೆ.
ಘಟನೆಗೆ ಸಂಬಂಧಿಸಿ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಖ್ಯಾತ ಪರಿಸರವಾದಿ ಡಿ.ವಿ. ಗಿರೀಶ್ ಸೋಮವಾರ ಸಂಜೆ ತಮ್ಮ ಸಹಚರರಾದ ಶ್ರೀಪಾಲ್ ಜೈನ್, ದಿನೇಶ್, ಕೀರ್ತಿಕುಮಾರ್, ಜಬೀವುಲ್ಲಾ ಹಾಗೂ ದಿನೇಶ್ ಅವರ ಪುತ್ರಿ ಕರೀಷ್ಮಾ ಎಂಬವರೊಂದಿಗೆ ಕೆಮ್ಮಣ್ಣುಗುಂಡಿ ಸಮೀಪದಲ್ಲಿರುವ ಕ್ರೀಸ್ಟೋಫರ್ ಎಂಬವರ ಎಸ್ಟೇಟ್ಗೆ ಜಿಪ್ಸಿ ವಾಹನದಲ್ಲಿ ಹೋಗಿದ್ದರು. ಅಲ್ಲಿಂದ ಹಿಂದಿರುಗುತ್ತಿದ್ದ ವೇಳೆ ಸಿರವಾಸೆ ಗ್ರಾಮದ 2ನೇ ತಿರುವಿನಲ್ಲಿ ಯುವಕರು ಮದ್ಯಪಾನ ಮಾಡುತ್ತಿದ್ದರು. ಅರಣ್ಯ ಪ್ರದೇಶದಲ್ಲಿ ಈ ರೀತಿ ಮಾಡಬಾರದು ಎಂದು ಡಿ.ವಿ. ಗಿರೀಶ್ ತಮ್ಮ ವಾಹನದಲ್ಲಿದ್ದುಕೊಂಡೇ ಬುದ್ಧಿವಾದ ಹೇಳಿದ್ದರು. ಅದಕ್ಕೆ ತಿರುಗಿಬಿದ್ದಿದ್ದ ಯುವಕರು ಜಿಪ್ಸಿ ವಾಹನದಲ್ಲಿದ್ದ ಯುವತಿಯನ್ನು ಕಂಡು ಚುಡಾಯಿಸಿದ್ದಾರೆ. ಅಲ್ಲದೆ, ಗಿರೀಶ್ ಹಾಗೂ ವಾಹನದಲ್ಲಿದ್ದವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಪರಿಸ್ಥಿತಿ ವಿಕೋಪಕ್ಕೆ ಹೋಗುತ್ತಿದ್ದಂತೆ ಗಿರೀಶ್ ಮತ್ತು ತಂಡ ಯುವಕರ ಜೊತೆ ವಾಗ್ವಾದಕ್ಕಿಳಿಯದೆ ತಮ್ಮ ವಾಹನದಲ್ಲಿ ಚಿಕ್ಕಮಗಳೂರಿನತ್ತ ತೆರಳಿದ್ದಾರೆ.





ಆದರೆ ಕುಡಿದ ಮತ್ತಿನಲ್ಲಿದ್ದ ಯುವಕರು ಮೂರು ಬೈಕ್ಗಳಲ್ಲಿ ಜಿಪ್ಸಿ ವಾಹನವನ್ನು ಚೇಸ್ ಮಾಡಿಕೊಂಡು ಬಂದಿದ್ದು ಕಂಬಿಹಳ್ಳ ಎಂಬಲ್ಲಿ ಗಿರೀಶ್ ಅವರಿದ್ದ ವಾಹನವನ್ನು ಅಡ್ಡಗಟ್ಟಿ ಏಕಾಏಕಿ ಹಲ್ಲೆ ನಡೆಸಿದ್ದಾರೆ. ಇದನ್ನು ಪ್ರಶ್ನಿಸಿದ ಗಿರೀಶ್ ಜೊತೆಗಿದ್ದವರ ಮೇಲೂ ಎರಗಿದ ಆರೋಪಿಗಳು ಮನಬಂದಂತೆ ಥಳಿಸಿದ್ದಾರೆ. ಈ ವೇಳೆ ಆರೋಪಿಗಳು ಕಲ್ಲನ್ನು ತೂರಿದ್ದು ಕೀರ್ತಿಕುಮಾರ್ ಎಂಬವರು ಕಲ್ಲೇಟು ಬಿದ್ದು ಗಾಯಗೊಂಡಿದ್ದಾರೆ.
ಯುವಕರ ಗುಂಪು ಡಿ.ವಿ.ಗಿರೀಶ್ ಮತ್ತವರ ತಂಡದ ಮೇಲೆ ದಾಳಿ ಮಾಡುತ್ತಿದ್ದುದನ್ನು ಕಂಡ ಸ್ಥಳೀಯ ನಿವಾಸಿಗಳು ಬಳಿಕ ಯುವಕರನ್ನು ತಡೆದು ಪರಿಸರವಾದಿಗಳ ತಂಡಕ್ಕೆ ರಕ್ಷಣೆ ನೀಡಿದ್ದಾರೆ. ಅಲ್ಲದೆ, ಹಲ್ಲೆ ನಡೆಸಿದ ಘಟನೆಯನ್ನು ಸ್ಥಳೀಯರು ಮೊಬೈಲಿನಲ್ಲಿ ಸೆರೆಹಿಡಿದಿದ್ದು ಕಿರಾತಕರ ಕೃತ್ಯಕ್ಕೆ ಸಾಕ್ಷಿಯಾಗಿದೆ.
ಅಲ್ಲಿಂದ ತಪ್ಪಿಸಿಕೊಂಡು ಬಂದ ಡಿ.ವಿ.ಗಿರೀಶ್ ನೇರವಾಗಿ ಗ್ರಾಮಾಂತರ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾರೆ. ಹಲ್ಲೆ ಮಾಡಿದ ಆರೋಪಿಗಳ ಪೈಕಿ ಓರ್ವ ವ್ಯಕ್ತಿ ಚಿಕ್ಕಮಗಳೂರಿನ ಯುವಕ ಎಂದು ದೂರಿನಲ್ಲಿ ಉಲ್ಲೇಖಿಸಿದ್ದು, ಪೊಲೀಸರು ಎಂಟು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Video:
Dundee militant DV Girish has assaulted a survivor of the Bhadra Wildlife Sanctuary in the district on Monday. The police lodged a complaint on Tuesday and traced the identity of the accused. Girish’s attack on the Shola grassland of Chikmagalur has been widely condemned.
27-10-25 10:52 pm
Bangalore Correspondent
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
ಡಿಕೆಶಿ ದಿಢೀರ್ ದೆಹಲಿಗೆ ದೌಡು ; ವಿಶೇಷ ಏನೂ ಇಲ್ಲ,...
26-10-25 07:33 pm
ಪ್ರೀತಿ ನೆಪದಲ್ಲಿ ಹಿಂದು ಯುವತಿಗೆ ಮೋಸ ; ಮದುವೆಯಾಗಲ...
25-10-25 09:33 pm
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
26-10-25 11:01 pm
HK News Desk
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
27-10-25 11:01 pm
Mangalore Correspondent
ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ...
27-10-25 10:25 pm
ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
RSS Leader Kalladka Prabhakar Bhat: ಕಲ್ಲಡ್ಕ ಪ...
27-10-25 07:24 pm
ಹೈಕಮಾಂಡ್ ತೀರ್ಮಾನ ಮಾಡಿದ್ರೆ ಐದು ವರ್ಷ ಸಿಎಂ ಆಗಿರು...
27-10-25 05:56 pm
27-10-25 05:29 pm
HK News Desk
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm