ಬ್ರೇಕಿಂಗ್ ನ್ಯೂಸ್
01-09-21 02:48 pm Headline Karnataka News Network ಕ್ರೈಂ
ಬೆಂಗಳೂರು, ಸೆ.1: ಯಶವಂತ ಪೊಲೀಸರ ಕೈಗೆ ಕತರ್ನಾಕ್ ಕಳ್ಳಿ ಮಹಿಳೆಯೊಬ್ಬಳು ಸಿಕ್ಕಿಬಿದ್ದಿದ್ದಾಳೆ. ಸಂಶಯಾಸ್ಪದ ನೆಲೆಯಲ್ಲಿ ಮಹಿಳೆಯನ್ನು ಬಂಧಿಸಿ ವಿಚಾರಣೆ ನಡೆಸಿದಾಗ, ಆಕೆ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಚಿನ್ನದ ಆಭರಣಗಳನ್ನು ಕದ್ದಿರುವ ವಿಚಾರವನ್ನು ಬಾಯಿಬಿಟ್ಟಿದ್ದಾಳೆ. 20 ಲಕ್ಷ ಮೌಲ್ಯದ 439 ಗ್ರಾಮ್ ಚಿನ್ನಾಭರಣವನ್ನು ವಿವಿಧ ಕಡೆಯಿಂದ ಮಹಿಳೆ ಕದ್ದಿರುವ ಬಗ್ಗೆ ತಪ್ಪೊಪ್ಪಿಗೆ ನೀಡಿದ್ದಾರೆ.
ಮಹಿಳೆಯನ್ನು ಲಗ್ಗೆರೆ ನಿವಾಸಿ ಮಮತಾ (40) ಎಂದು ಗುರುತಿಸಲಾಗಿದೆ. ಮೂಲತಃ ಆಂಧ್ರ ಪ್ರದೇಶದ ಮೂಲದ ನಿವಾಸಿಯಾಗಿರುವ ಈ ಮಹಿಳೆ ಬೆಂಗಳೂರಿನ ಲಗ್ಗೆರೆಯಲ್ಲಿ ವಾಸವಿದ್ದಾಳೆ. ಈಕೆಯ ಮೊದಲ ಗಂಡ ಎರಡು ವರ್ಷಗಳ ಹಿಂದೆ ತೀರಿಕೊಂಡಿದ್ದು, ಆನಂತರ ಇತ್ತೀಚೆಗೆ ಹತ್ತಿರದ ಸಂಬಂಧಿಕನಾಗಿರುವ ವ್ಯಕ್ತಿಯನ್ನು ಮದುವೆಯಾಗಿದ್ದಳು. ಮದುವೆ ಬಳಿಕ ಕುಕ್ಕೆ ಸುಬ್ರಹ್ಮಣ್ಯ ಮತ್ತು ಧರ್ಮಸ್ಥಳಕ್ಕೆ ಹೋಗಿ ಬರೋಣ ಎಂದು ಇತ್ತೀಚೆಗೆ ಪ್ರವಾಸ ಬಂದಿದ್ದರು.
ಆಗಸ್ಟ್ 19 ಧರ್ಮಸ್ಥಳಕ್ಕೆ ಬಂದಿದ್ದ ದಂಪತಿ, ಮರುದಿನ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿದ್ದರು. ಈ ವೇಳೆ, ಹೊಟೇಲ್ ಒಂದರಲ್ಲಿ ಉಪಹಾರಕ್ಕೆ ಕುಳಿತಿದ್ದಾಗ, ಪಕ್ಕದ ಟೇಬಲ್ ನಲ್ಲಿ ಕುಟುಂಬವೊಂದು ಮಕ್ಕಳ ಜೊತೆಗೆ ಉಪಾಹಾರ ಸೇವನೆಯಲ್ಲಿದ್ದರು. ಆನಂತರ ಅಲ್ಲಿಂದ ಕುಟುಂಬ ಕೈ ತೊಳೆಯಲೆಂದು ಟೇಬಲ್ ನಲ್ಲಿ ಬ್ಯಾಗನ್ನು ಇಟ್ಟು ತೆರಳಿತ್ತು. ಇದೇ ಸಂದರ್ಭವನ್ನು ಉಪಯೋಗಿಸಿದ ಮಹಿಳೆ ಮತ್ತು ಆಕೆಯ ಗಂಡ ಬ್ಯಾಗನ್ನು ಎತ್ತಿಕೊಂಡು ತೆರಳಿದ್ದಾರೆ.
ಬ್ಯಾಗನ್ನು ದೂರಕ್ಕೆ ಒಯ್ದು ನೋಡಿದಾಗ ಬಂಗಾರದ ಆಭರಣಗಳಿದ್ದವು. ಆನಂತರ, ಬಂಗಾರವನ್ನು ಎತ್ತಿಕೊಂಡು ಬೆಂಗಳೂರಿಗೆ ಮರಳಿದ್ದು, ಯಾವುದೇ ಚಿಂತೆಯಿಲ್ಲದೆ ಜೀವನ ಮಾಡೋಣ ಎಂದುಕೊಂಡಿದ್ದರು. ಆನಂತರ ಆಭರಣಗಳನ್ನು ಒಂದೊಂದಾಗಿ ಜುವೆಲ್ಲರಿಗಳಲ್ಲಿ ಮಾರಲು ಆರಂಭಿಸಿದ್ದರು. ಆಗಸ್ಟ್ 25ರಂದು ಬೆಳಗ್ಗೆ ಮಹಿಳೆ ಮತ್ತು ಆಕೆಯ ಗಂಡ ಯಶವಂತಪುರದ ಎಸ್.ಕೆ. ಜುವೆಲ್ಲರಿಗೆ ಬಂದಿದ್ದು, ಸಂಶಯಾಸ್ಪದವಾಗಿ ಹೊರಗಡೆ ತಿರುಗಾಡಿಕೊಂಡಿದ್ದರು. ಇದೇ ವೇಳೆ, ಗಸ್ತಿನಲ್ಲಿದ್ದ ಪೊಲೀಸರು ಮಹಿಳೆಯನ್ನು ಪ್ರಶ್ನೆ ಮಾಡಿದ್ದಾರೆ. ಮಹಿಳೆ ತಡಬಡಾಯಿಸಿದ್ದು ಜೊತೆಗಿದ್ದ ಗಂಡ ಅಲ್ಲಿಂದ ಪರಾರಿಯಾಗಿದ್ದಾನೆ. ಗಂಡ ಓಡಿ ತಪ್ಪಿಸಿಕೊಂಡಿದ್ದರಿಂದ ಸಂಶಯಗೊಂಡ ಪೊಲೀಸರು ಮಹಿಳೆಯನ್ನು ಯಶವಂತಪುರ ಪೊಲೀಸರ ವಶಕ್ಕೆ ಒಪ್ಪಿಸಿದ್ದರು.
ಪೊಲೀಸರು ಆಕೆಯ ಬ್ಯಾಗ್ ಪಡೆದು ತಪಾಸಣೆ ನಡೆಸಿದಾಗ, ಅದರಲ್ಲಿ ಹತ್ತು ಕಡೆ ಬಂಗಾರವನ್ನು ಅಡ ಇಟ್ಟಿರುವ ರಶೀತಿ ಸಿಕ್ಕಿದೆ. ಅಲ್ಲದೆ, ತಲಾ ನಾಲ್ಕು ಗ್ರಾಮ್ ಇದ್ದ ಎರಡು ಉಂಗುರವೂ ಸಿಕ್ಕಿದೆ. ಇಷ್ಟೊಂದು ಬಂಗಾರ ಅಡ ಇಟ್ಟಿರುವ ಬಗ್ಗೆ ಸಂಶಯಗೊಂಡು ಆಕೆಯನ್ನು ಮತ್ತಷ್ಟು ವಿಚಾರಣೆ ನಡೆಸಿದಾಗ, ಕುಕ್ಕೆ ಸುಬ್ರಹ್ಮಣ್ಯದಲ್ಲಿ ಬಂಗಾರ ಕಳವು ಮಾಡಿದ್ದನ್ನು ಹೇಳಿದ್ದಾಳೆ. ಪೊಲೀಸರು ಮಹಿಳೆಯನ್ನು ಬಂಧಿಸಿದ್ದು, ಆಕೆಯ ಗಂಡನ ಪತ್ತೆಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಗಂಡ ಸಿಕ್ಕಿದ ಬಳಿಕ ಇವರು ಈ ಹಿಂದೆಯೂ ಇದೇ ರೀತಿ ಕಳವು ನಡೆಸಿದ್ದಾರೆಯೇ ಎಂಬ ಬಗ್ಗೆ ತಿಳಿಯಬಹುದು ಎಂದು ಪೊಲೀಸರು ತಿಳಿಸಿದ್ದಾರೆ.
Yeshwantpur police have arrested a woman and confiscated gold ornaments weighing 439 grams valued at Rs 20 lac. It is said that she had posed as a pilgrim, visited Kukke Subrahmanya, and stolen ornaments belonging to some devotees.
30-06-25 02:55 pm
HK News Desk
ಅಕ್ರಮ ಗೋಸಾಗಣೆ ತಡೆದ ಶ್ರೀರಾಮ ಸೇನೆ ಕಾರ್ಯಕರ್ತರನ್ನ...
30-06-25 01:44 pm
Spike in Heart Attack, Hassan: Dr. Manjunath...
30-06-25 12:05 pm
Tumakuru accident, four killed: ಕ್ಯಾಂಟರ್ -...
30-06-25 11:04 am
ಕರ್ಣಾಟಕ ಬ್ಯಾಂಕ್ ಸಿಇಓ, ಎಂಡಿ ಶ್ರೀಕೃಷ್ಣನ್ ಹರಿಹರ...
29-06-25 10:48 pm
29-06-25 11:13 am
HK News Desk
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
400 ಕಿಮೀ ಎತ್ತರದ ಬಾಹ್ಯಾಕಾಶ ನಿಲ್ದಾಣ ತಲುಪಿದ ಮೊದಲ...
27-06-25 01:44 pm
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
30-06-25 08:19 pm
Mangalore Correspondent
Mangalore, Rain, School News: ತರಗತಿ ನಡೆಯುತ್ತಿ...
30-06-25 03:20 pm
Mangalore Bomb Threat, Airport: ಮಂಗಳೂರು ಸೇರಿ...
30-06-25 01:07 pm
Red Stone Quarry, Dakshina Kannada, Protest:...
27-06-25 10:17 pm
ಧರ್ಮಸ್ಥಳ ಗ್ರಾಮದಲ್ಲಿ ಅಸಹಜ ಸಾವಿನ ವೈರಲ್ ಪತ್ರ ; ಮ...
27-06-25 04:56 pm
30-06-25 06:12 pm
Giridhar Shetty, Mangaluru
Olx Fraud, Mangalore: ಓಎಲ್ ಎಕ್ಸ್ ನಲ್ಲಿ ಕಾರು ಮ...
29-06-25 11:23 pm
Udupi Crime, Kapu, Railway: ರೈಲಿನಲ್ಲಿ ಉಡುಪಿಗೆ...
29-06-25 11:15 pm
Davanagere ATM Robbery : ಪೆಟ್ರೋಲ್ ಸುರಿದು ಎಟಿಎ...
29-06-25 04:26 pm
Tumakuru Husband Murder, Wife arrest, Crime:...
29-06-25 02:26 pm