ಬ್ರೇಕಿಂಗ್ ನ್ಯೂಸ್
01-09-21 02:48 pm Headline Karnataka News Network ಕ್ರೈಂ
ಬೆಂಗಳೂರು, ಸೆ.1: ಯಶವಂತ ಪೊಲೀಸರ ಕೈಗೆ ಕತರ್ನಾಕ್ ಕಳ್ಳಿ ಮಹಿಳೆಯೊಬ್ಬಳು ಸಿಕ್ಕಿಬಿದ್ದಿದ್ದಾಳೆ. ಸಂಶಯಾಸ್ಪದ ನೆಲೆಯಲ್ಲಿ ಮಹಿಳೆಯನ್ನು ಬಂಧಿಸಿ ವಿಚಾರಣೆ ನಡೆಸಿದಾಗ, ಆಕೆ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಚಿನ್ನದ ಆಭರಣಗಳನ್ನು ಕದ್ದಿರುವ ವಿಚಾರವನ್ನು ಬಾಯಿಬಿಟ್ಟಿದ್ದಾಳೆ. 20 ಲಕ್ಷ ಮೌಲ್ಯದ 439 ಗ್ರಾಮ್ ಚಿನ್ನಾಭರಣವನ್ನು ವಿವಿಧ ಕಡೆಯಿಂದ ಮಹಿಳೆ ಕದ್ದಿರುವ ಬಗ್ಗೆ ತಪ್ಪೊಪ್ಪಿಗೆ ನೀಡಿದ್ದಾರೆ.
ಮಹಿಳೆಯನ್ನು ಲಗ್ಗೆರೆ ನಿವಾಸಿ ಮಮತಾ (40) ಎಂದು ಗುರುತಿಸಲಾಗಿದೆ. ಮೂಲತಃ ಆಂಧ್ರ ಪ್ರದೇಶದ ಮೂಲದ ನಿವಾಸಿಯಾಗಿರುವ ಈ ಮಹಿಳೆ ಬೆಂಗಳೂರಿನ ಲಗ್ಗೆರೆಯಲ್ಲಿ ವಾಸವಿದ್ದಾಳೆ. ಈಕೆಯ ಮೊದಲ ಗಂಡ ಎರಡು ವರ್ಷಗಳ ಹಿಂದೆ ತೀರಿಕೊಂಡಿದ್ದು, ಆನಂತರ ಇತ್ತೀಚೆಗೆ ಹತ್ತಿರದ ಸಂಬಂಧಿಕನಾಗಿರುವ ವ್ಯಕ್ತಿಯನ್ನು ಮದುವೆಯಾಗಿದ್ದಳು. ಮದುವೆ ಬಳಿಕ ಕುಕ್ಕೆ ಸುಬ್ರಹ್ಮಣ್ಯ ಮತ್ತು ಧರ್ಮಸ್ಥಳಕ್ಕೆ ಹೋಗಿ ಬರೋಣ ಎಂದು ಇತ್ತೀಚೆಗೆ ಪ್ರವಾಸ ಬಂದಿದ್ದರು.

ಆಗಸ್ಟ್ 19 ಧರ್ಮಸ್ಥಳಕ್ಕೆ ಬಂದಿದ್ದ ದಂಪತಿ, ಮರುದಿನ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿದ್ದರು. ಈ ವೇಳೆ, ಹೊಟೇಲ್ ಒಂದರಲ್ಲಿ ಉಪಹಾರಕ್ಕೆ ಕುಳಿತಿದ್ದಾಗ, ಪಕ್ಕದ ಟೇಬಲ್ ನಲ್ಲಿ ಕುಟುಂಬವೊಂದು ಮಕ್ಕಳ ಜೊತೆಗೆ ಉಪಾಹಾರ ಸೇವನೆಯಲ್ಲಿದ್ದರು. ಆನಂತರ ಅಲ್ಲಿಂದ ಕುಟುಂಬ ಕೈ ತೊಳೆಯಲೆಂದು ಟೇಬಲ್ ನಲ್ಲಿ ಬ್ಯಾಗನ್ನು ಇಟ್ಟು ತೆರಳಿತ್ತು. ಇದೇ ಸಂದರ್ಭವನ್ನು ಉಪಯೋಗಿಸಿದ ಮಹಿಳೆ ಮತ್ತು ಆಕೆಯ ಗಂಡ ಬ್ಯಾಗನ್ನು ಎತ್ತಿಕೊಂಡು ತೆರಳಿದ್ದಾರೆ.
ಬ್ಯಾಗನ್ನು ದೂರಕ್ಕೆ ಒಯ್ದು ನೋಡಿದಾಗ ಬಂಗಾರದ ಆಭರಣಗಳಿದ್ದವು. ಆನಂತರ, ಬಂಗಾರವನ್ನು ಎತ್ತಿಕೊಂಡು ಬೆಂಗಳೂರಿಗೆ ಮರಳಿದ್ದು, ಯಾವುದೇ ಚಿಂತೆಯಿಲ್ಲದೆ ಜೀವನ ಮಾಡೋಣ ಎಂದುಕೊಂಡಿದ್ದರು. ಆನಂತರ ಆಭರಣಗಳನ್ನು ಒಂದೊಂದಾಗಿ ಜುವೆಲ್ಲರಿಗಳಲ್ಲಿ ಮಾರಲು ಆರಂಭಿಸಿದ್ದರು. ಆಗಸ್ಟ್ 25ರಂದು ಬೆಳಗ್ಗೆ ಮಹಿಳೆ ಮತ್ತು ಆಕೆಯ ಗಂಡ ಯಶವಂತಪುರದ ಎಸ್.ಕೆ. ಜುವೆಲ್ಲರಿಗೆ ಬಂದಿದ್ದು, ಸಂಶಯಾಸ್ಪದವಾಗಿ ಹೊರಗಡೆ ತಿರುಗಾಡಿಕೊಂಡಿದ್ದರು. ಇದೇ ವೇಳೆ, ಗಸ್ತಿನಲ್ಲಿದ್ದ ಪೊಲೀಸರು ಮಹಿಳೆಯನ್ನು ಪ್ರಶ್ನೆ ಮಾಡಿದ್ದಾರೆ. ಮಹಿಳೆ ತಡಬಡಾಯಿಸಿದ್ದು ಜೊತೆಗಿದ್ದ ಗಂಡ ಅಲ್ಲಿಂದ ಪರಾರಿಯಾಗಿದ್ದಾನೆ. ಗಂಡ ಓಡಿ ತಪ್ಪಿಸಿಕೊಂಡಿದ್ದರಿಂದ ಸಂಶಯಗೊಂಡ ಪೊಲೀಸರು ಮಹಿಳೆಯನ್ನು ಯಶವಂತಪುರ ಪೊಲೀಸರ ವಶಕ್ಕೆ ಒಪ್ಪಿಸಿದ್ದರು.

ಪೊಲೀಸರು ಆಕೆಯ ಬ್ಯಾಗ್ ಪಡೆದು ತಪಾಸಣೆ ನಡೆಸಿದಾಗ, ಅದರಲ್ಲಿ ಹತ್ತು ಕಡೆ ಬಂಗಾರವನ್ನು ಅಡ ಇಟ್ಟಿರುವ ರಶೀತಿ ಸಿಕ್ಕಿದೆ. ಅಲ್ಲದೆ, ತಲಾ ನಾಲ್ಕು ಗ್ರಾಮ್ ಇದ್ದ ಎರಡು ಉಂಗುರವೂ ಸಿಕ್ಕಿದೆ. ಇಷ್ಟೊಂದು ಬಂಗಾರ ಅಡ ಇಟ್ಟಿರುವ ಬಗ್ಗೆ ಸಂಶಯಗೊಂಡು ಆಕೆಯನ್ನು ಮತ್ತಷ್ಟು ವಿಚಾರಣೆ ನಡೆಸಿದಾಗ, ಕುಕ್ಕೆ ಸುಬ್ರಹ್ಮಣ್ಯದಲ್ಲಿ ಬಂಗಾರ ಕಳವು ಮಾಡಿದ್ದನ್ನು ಹೇಳಿದ್ದಾಳೆ. ಪೊಲೀಸರು ಮಹಿಳೆಯನ್ನು ಬಂಧಿಸಿದ್ದು, ಆಕೆಯ ಗಂಡನ ಪತ್ತೆಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಗಂಡ ಸಿಕ್ಕಿದ ಬಳಿಕ ಇವರು ಈ ಹಿಂದೆಯೂ ಇದೇ ರೀತಿ ಕಳವು ನಡೆಸಿದ್ದಾರೆಯೇ ಎಂಬ ಬಗ್ಗೆ ತಿಳಿಯಬಹುದು ಎಂದು ಪೊಲೀಸರು ತಿಳಿಸಿದ್ದಾರೆ.
Yeshwantpur police have arrested a woman and confiscated gold ornaments weighing 439 grams valued at Rs 20 lac. It is said that she had posed as a pilgrim, visited Kukke Subrahmanya, and stolen ornaments belonging to some devotees.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
06-02-26 10:56 pm
Mangalore Correspondent
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm