ಬ್ರೇಕಿಂಗ್ ನ್ಯೂಸ್
01-09-21 06:39 pm Headline Karnataka News Network ಕ್ರೈಂ
ನವದೆಹಲಿ, ಸೆಪ್ಟೆಂಬರ್ 1: ಫುಡ್ ಡೆಲಿವರಿ ಬಾಯ್ ಒಬ್ಬ ಪಾರ್ಸಲ್ ನೀಡುವುದು ತಡವಾಯಿತು ಎಂಬ ಕಾರಣಕ್ಕೆ ರೆಸ್ಟೋರೆಂಟ್ ಮಾಲೀಕನಿಗೆ ಗುಂಡು ಹಾರಿಸಿ ಹತ್ಯೆ ಮಾಡಿರುವ ಘಟನೆ ದೆಹಲಿಯಲ್ಲಿ ನಡೆದಿದೆ.
ಸುನಿಲ್ ಅಗರ್ವಾಲ್ ಮೃತನಾಗಿದ್ದಾನೆ. ಮಿತ್ರ ಎಂಬ ಸ್ವಂತ ರೆಸ್ಟೋರೆಂಟ್ ಹೊಂದಿದ್ದರು. ರಾತ್ರಿ ಫುಡ್ ಡೆಲಿವರಿ ಬಾಯ್ನಿಂದ ಕೊಲೆಯಾಗಿದ್ದಾರೆ. ಫುಡ್ ತಡವಾಗುತ್ತದೆ ಎನ್ನುವ ಕಾರಣಕ್ಕಾಗಿ ಕೊಲೆ ಮಾಡಲಾಗಿದೆ.

ಮಿತ್ರ ರೆಸ್ಟೋರೆಂಟ್ಗೆ ಚಿಕನ್ ಬಿರಿಯಾನಿ ಹಾಗೂ ಪೂರಿ ಸಬ್ಜಿ ಆರ್ಡರ್ ಬಂದಿತ್ತು. ಆ ಆರ್ಡರ್ ಅನ್ನು ತೆಗೆದುಕೊಂಡು ಹೋಗಲು ಮಂಗಳವಾರ ರಾತ್ರಿ ಡೆಲಿವರಿ ಬಾಯ್ ಬಂದಿದ್ದ. ಆತ ಬರುವ ವೇಳೆಗೆ ಬಿರಿಯಾನಿ ರೆಡಿಯಾಗಿತ್ತು. ಆದರೆ ಪೂರಿ, ಸಬ್ಜಿ ಪಾರ್ಸಲ್ ರೆಡಿ ಮಾಡಲು ಇನ್ನೂ ಸ್ವಲ್ಪ ಸಮಯ ಬೇಕಾಗುತ್ತದೆ ಎಂದು ಹೋಟೆಲ್ನವರು ಹೇಳಿದ್ದರು. ಇದೇ ವಿಷಯಕ್ಕೆ ಡೆಲಿವರಿ ಬಾಯ್ ಮತ್ತು ರೆಸ್ಟೋರೆಂಟ್ ಸಿಬ್ಬಂದಿ ನಡುವೆ ಜಗಳವಾಗಿತ್ತು.
ಈ ವೇಳೆ ರೆಸ್ಟೋರೆಂಟ್ ಸಿಬ್ಬಂದಿಗೆ ಸ್ವಿಗ್ಗಿ ಡೆಲಿವರಿ ಬಾಯ್ ಮನಬಂದಂತೆ ಬೈದಿದ್ದ. ಇದರಿಂದ ಕೋಪಗೊಂಡ ಆ ಸಿಬ್ಬಂದಿ ರೆಸ್ಟೋರೆಂಟ್ ಮಾಲೀಕರಿಗೆ ವಿಷಯ ತಿಳಿಸಿದ್ದ. ಜಗಳ ನಿಲ್ಲಿಸಲು ಅಲ್ಲಿಗೆ ಬಂದ ಸುನಿಲ್ ಹಣೆಗೆ ಈ ವೇಳೆ ಸ್ವಿಗ್ಗಿ ಡೆಲಿವರಿ ಏಜೆಂಟ್ ಗುಂಡು ಹಾರಿಸಿದ್ದಾನೆ. ತಕ್ಷಣ ರೆಸ್ಟೋರೆಂಟ್ ಸಿಬ್ಬಂದಿ ಅವರನ್ನು ಆಸ್ಪತ್ರೆಗೆ ಸೇರಿಸಿದ್ದಾರೆ. ಆದರೆ ಅಷ್ಟರಲ್ಲಿ ಅವರು ಸಾವನ್ನಪ್ಪಿದ್ದರು. ಡೆಲಿವರಿ ಬಾಯ್ ನಾಪತ್ತೆಯಾಗಿದ್ದು, ಆತನನ್ನು ಹಿಡಿಯಲು ಮೂರು ಪೊಲೀಸರ ತಂಡ ರಚಿಸಲಾಗಿದೆ.
A delivery executive working for the online food ordering service Swiggy allegedly killed the owner of a restaurant in Greater Noida early on Wednesday due to a dispute over delay in an order. The incident took place around 12:15 am last night, according to the police.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am