ಬ್ರೇಕಿಂಗ್ ನ್ಯೂಸ್
02-09-21 01:34 pm Mangaluru Correspondent ಕ್ರೈಂ
ಪುತ್ತೂರು, ಸೆ.2: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಯುವತಿಯನ್ನು ಭೇಟಿಯಾಗಲು ಬಂದಿದ್ದ ರಾಯಚೂರು ಮೂಲದ ಯುವಕನಿಗೆ ಪುತ್ತೂರು ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದಲ್ಲಿ ಹಲ್ಲೆ ನಡೆಸಿದ ಘಟನೆ ನಡೆದಿದ್ದು ಘಟನೆ ಸಂಬಂಧ ಪೊಲೀಸರು ಇಬ್ಬರು ಆರೋಪಿಗಳನ್ನ ವಶಕ್ಕೆ ಪಡೆದಿದ್ದಾರೆ.
ಬಂಧಿತರನ್ನು ಕುರಿಯ ನಿವಾಸಿ ಫಾರೂಕ್ (32), ಬಲ್ನಾಡು ನಿವಾಸಿ ಅಬ್ದುಲ್ ಮಜೀದ್( 21) ಎಂದು ಗುರುತಿಸಲಾಗಿದೆ. ಆರು ತಿಂಗಳ ಹಿಂದೆ ಷೇರ್ ಚಾಟ್ ನಲ್ಲಿ ಪರಿಚಯವಾಗಿದ್ದ ಹುಡುಗಿಯನ್ನು ಭೇಟಿಯಾಗುವ ಉದ್ದೇಶದಿಂದ ಬುಧವಾರ ಮಧ್ಯಾಹ್ನ ರಾಯಚೂರು ಮೂಲದ ಹನುಮಂತರಾಯ ಎಂಬಾತ ಬಂದಿದ್ದ. ಪುತ್ತೂರು ಕೆಎಸ್ ಆರ್ಟಿಸಿ ಬಸ್ ನಿಲ್ದಾಣಕ್ಕೆ ಬಂದು ಯುವತಿಯ ಜೊತೆ ಮಾತನಾಡುತ್ತಿದ್ದಾಗ ಆರು ಜನರ ತಂಡ ಹಲ್ಲೆ ನಡೆಸಿದೆ.

ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ದದ್ದಲ ಗ್ರಾಮದ ನಿವಾಸಿ, ಯುವಕ ಹನುಮಂತರಾಯ(19) ಆರು ತಿಂಗಳ ಹಿಂದೆ ಹುಡುಗಿಯ ಪರಿಚಯ ಆಗಿದ್ದು ಚಾಟಿಂಗ್ ಮತ್ತು ಫೋನ್ ನಂಬರ್ ಪಡೆದು ಮಾತನಾಡುತ್ತಿದ್ದರು. ಹುಡುಗಿಯನ್ನು ಭೇಟಿಯಾಗಲೆಂದು ತನ್ನ ಸ್ನೇಹಿತ ಚೌಡಯ್ಯ ಎಂಬ ಯುವಕನೊಂದಿಗೆ ಪುತ್ತೂರಿಗೆ ಬಂದಿದ್ದ. ಇದೇ ವೇಳೆ, ಹುಡುಗಿ ತನ್ನ ಸ್ನೇಹಿತೆಯ ಜೊತೆಗೆ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣಕ್ಕೆ ಬಂದಿದ್ದಳು. ನಾಲ್ವರೂ ಬಸ್ ನಿಲ್ದಾಣದಲ್ಲಿ ಮಾತನಾಡುತ್ತಿದ್ದ ವೇಳೆ, ಐದಾರು ಮಂದಿ ಯುವಕರು ಅವಾಚ್ಯ ಶಬ್ದಗಳಿಂದ ನಿಂದಿಸಿ ಇವರ ಮೇಲೆ ಹಲ್ಲೆ ನಡೆಸಿದ್ದಾರೆ.
ಈ ಬಗ್ಗೆ ಪುತ್ತೂರು ಪೊಲೀಸ್ ಠಾಣೆಯಲ್ಲಿ ಹನುಮಂತರಾಯ ದೂರು ನೀಡಿದ್ದು ಪ್ರಕರಣ ದಾಖಲಾಗಿತ್ತು. ಇದೀಗ ಹಲ್ಲೆ ನಡೆಸಿದ್ದ ತಂಡದಲ್ಲಿ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿಯೇ ಸ್ನೇಹದ ನೆಪದಲ್ಲಿ ಭೇಟಿಯಾಗಿದ್ದನ್ನೇ ನೆಪವಾಗಿರಿಸಿ ಮುಸ್ಲಿಂ ಗುಂಪು ಹಲ್ಲೆ ನಡೆಸಿದ್ದು ಹಿಂದು ಸಂಘಟನೆಗಳ ಕಾರ್ಯಕರ್ತರು ನಡೆಸುವ ನೈತಿಕ ಪೊಲೀಸ್ ರೀತಿಯ ವರ್ತನೆಯೇ ಆಗಿತ್ತು.
Puttur Group of people intercepts questions two men woman seen together
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm