ಬ್ರೇಕಿಂಗ್ ನ್ಯೂಸ್
02-09-21 01:34 pm Mangaluru Correspondent ಕ್ರೈಂ
ಪುತ್ತೂರು, ಸೆ.2: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಯುವತಿಯನ್ನು ಭೇಟಿಯಾಗಲು ಬಂದಿದ್ದ ರಾಯಚೂರು ಮೂಲದ ಯುವಕನಿಗೆ ಪುತ್ತೂರು ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದಲ್ಲಿ ಹಲ್ಲೆ ನಡೆಸಿದ ಘಟನೆ ನಡೆದಿದ್ದು ಘಟನೆ ಸಂಬಂಧ ಪೊಲೀಸರು ಇಬ್ಬರು ಆರೋಪಿಗಳನ್ನ ವಶಕ್ಕೆ ಪಡೆದಿದ್ದಾರೆ.
ಬಂಧಿತರನ್ನು ಕುರಿಯ ನಿವಾಸಿ ಫಾರೂಕ್ (32), ಬಲ್ನಾಡು ನಿವಾಸಿ ಅಬ್ದುಲ್ ಮಜೀದ್( 21) ಎಂದು ಗುರುತಿಸಲಾಗಿದೆ. ಆರು ತಿಂಗಳ ಹಿಂದೆ ಷೇರ್ ಚಾಟ್ ನಲ್ಲಿ ಪರಿಚಯವಾಗಿದ್ದ ಹುಡುಗಿಯನ್ನು ಭೇಟಿಯಾಗುವ ಉದ್ದೇಶದಿಂದ ಬುಧವಾರ ಮಧ್ಯಾಹ್ನ ರಾಯಚೂರು ಮೂಲದ ಹನುಮಂತರಾಯ ಎಂಬಾತ ಬಂದಿದ್ದ. ಪುತ್ತೂರು ಕೆಎಸ್ ಆರ್ಟಿಸಿ ಬಸ್ ನಿಲ್ದಾಣಕ್ಕೆ ಬಂದು ಯುವತಿಯ ಜೊತೆ ಮಾತನಾಡುತ್ತಿದ್ದಾಗ ಆರು ಜನರ ತಂಡ ಹಲ್ಲೆ ನಡೆಸಿದೆ.
ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ದದ್ದಲ ಗ್ರಾಮದ ನಿವಾಸಿ, ಯುವಕ ಹನುಮಂತರಾಯ(19) ಆರು ತಿಂಗಳ ಹಿಂದೆ ಹುಡುಗಿಯ ಪರಿಚಯ ಆಗಿದ್ದು ಚಾಟಿಂಗ್ ಮತ್ತು ಫೋನ್ ನಂಬರ್ ಪಡೆದು ಮಾತನಾಡುತ್ತಿದ್ದರು. ಹುಡುಗಿಯನ್ನು ಭೇಟಿಯಾಗಲೆಂದು ತನ್ನ ಸ್ನೇಹಿತ ಚೌಡಯ್ಯ ಎಂಬ ಯುವಕನೊಂದಿಗೆ ಪುತ್ತೂರಿಗೆ ಬಂದಿದ್ದ. ಇದೇ ವೇಳೆ, ಹುಡುಗಿ ತನ್ನ ಸ್ನೇಹಿತೆಯ ಜೊತೆಗೆ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣಕ್ಕೆ ಬಂದಿದ್ದಳು. ನಾಲ್ವರೂ ಬಸ್ ನಿಲ್ದಾಣದಲ್ಲಿ ಮಾತನಾಡುತ್ತಿದ್ದ ವೇಳೆ, ಐದಾರು ಮಂದಿ ಯುವಕರು ಅವಾಚ್ಯ ಶಬ್ದಗಳಿಂದ ನಿಂದಿಸಿ ಇವರ ಮೇಲೆ ಹಲ್ಲೆ ನಡೆಸಿದ್ದಾರೆ.
ಈ ಬಗ್ಗೆ ಪುತ್ತೂರು ಪೊಲೀಸ್ ಠಾಣೆಯಲ್ಲಿ ಹನುಮಂತರಾಯ ದೂರು ನೀಡಿದ್ದು ಪ್ರಕರಣ ದಾಖಲಾಗಿತ್ತು. ಇದೀಗ ಹಲ್ಲೆ ನಡೆಸಿದ್ದ ತಂಡದಲ್ಲಿ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿಯೇ ಸ್ನೇಹದ ನೆಪದಲ್ಲಿ ಭೇಟಿಯಾಗಿದ್ದನ್ನೇ ನೆಪವಾಗಿರಿಸಿ ಮುಸ್ಲಿಂ ಗುಂಪು ಹಲ್ಲೆ ನಡೆಸಿದ್ದು ಹಿಂದು ಸಂಘಟನೆಗಳ ಕಾರ್ಯಕರ್ತರು ನಡೆಸುವ ನೈತಿಕ ಪೊಲೀಸ್ ರೀತಿಯ ವರ್ತನೆಯೇ ಆಗಿತ್ತು.
Puttur Group of people intercepts questions two men woman seen together
30-06-25 02:55 pm
HK News Desk
ಅಕ್ರಮ ಗೋಸಾಗಣೆ ತಡೆದ ಶ್ರೀರಾಮ ಸೇನೆ ಕಾರ್ಯಕರ್ತರನ್ನ...
30-06-25 01:44 pm
Spike in Heart Attack, Hassan: Dr. Manjunath...
30-06-25 12:05 pm
Tumakuru accident, four killed: ಕ್ಯಾಂಟರ್ -...
30-06-25 11:04 am
ಕರ್ಣಾಟಕ ಬ್ಯಾಂಕ್ ಸಿಇಓ, ಎಂಡಿ ಶ್ರೀಕೃಷ್ಣನ್ ಹರಿಹರ...
29-06-25 10:48 pm
29-06-25 11:13 am
HK News Desk
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
400 ಕಿಮೀ ಎತ್ತರದ ಬಾಹ್ಯಾಕಾಶ ನಿಲ್ದಾಣ ತಲುಪಿದ ಮೊದಲ...
27-06-25 01:44 pm
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
30-06-25 03:20 pm
Mangalore Correspondent
Mangalore Bomb Threat, Airport: ಮಂಗಳೂರು ಸೇರಿ...
30-06-25 01:07 pm
Red Stone Quarry, Dakshina Kannada, Protest:...
27-06-25 10:17 pm
ಧರ್ಮಸ್ಥಳ ಗ್ರಾಮದಲ್ಲಿ ಅಸಹಜ ಸಾವಿನ ವೈರಲ್ ಪತ್ರ ; ಮ...
27-06-25 04:56 pm
Mangalore Jail Fight: ಮಂಗಳೂರು ಜೈಲಿನಲ್ಲಿ ಮತ್ತೆ...
26-06-25 10:08 pm
30-06-25 06:12 pm
Giridhar Shetty, Mangaluru
Olx Fraud, Mangalore: ಓಎಲ್ ಎಕ್ಸ್ ನಲ್ಲಿ ಕಾರು ಮ...
29-06-25 11:23 pm
Udupi Crime, Kapu, Railway: ರೈಲಿನಲ್ಲಿ ಉಡುಪಿಗೆ...
29-06-25 11:15 pm
Davanagere ATM Robbery : ಪೆಟ್ರೋಲ್ ಸುರಿದು ಎಟಿಎ...
29-06-25 04:26 pm
Tumakuru Husband Murder, Wife arrest, Crime:...
29-06-25 02:26 pm