ಬ್ರೇಕಿಂಗ್ ನ್ಯೂಸ್
07-09-20 03:28 pm Headline Karnataka News Network ಕ್ರೈಂ
ಮುಂಬೈ, ಸೆಪ್ಟೆಂಬರ್ 7: ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಮೇಲೆ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಗ್ಯಾಂಗ್ ಹೆಸರಲ್ಲಿ ಬೆದರಿಕೆ ಕರೆ ಬಂದಿದೆ. ಮುಂಬೈನ ಬಾಂದ್ರಾದಲ್ಲಿರುವ ಸಿಎಂ ನಿವಾಸ 'ಮಾತೋಶ್ರೀ' ಗೆ ಕರೆ ಮಾಡಿರುವ ಅಪರಿಚಿತ ವ್ಯಕ್ತಿ ಕೆಲವೇ ದಿನಗಳಲ್ಲಿ ಮಾತೋಶ್ರೀಯನ್ನು ಬ್ಲಾಸ್ಟ್ ಮಾಡುವುದಾಗಿ ಹೇಳಿದ್ದಾನೆ.
ಕರೆ ಮಾಡಿದ ವ್ಯಕ್ತಿ ತಾನು ದಾವೂದ್ ಇಬ್ರಾಹಿಂ ಗ್ಯಾಂಗ್ ಸದಸ್ಯ ಎಂದು ಹೇಳಿಕೊಂಡಿದ್ದ. ಬೆದರಿಕೆ ಕರೆಯ ಬಗ್ಗೆ ಮುಂಬೈ ಕ್ರೈಂ ಬ್ರಾಂಚ್ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಮೇಲ್ನೋಟಕ್ಕೆ ಹುಸಿ ಕರೆ ಎನ್ನುವ ಮಾಹಿತಿ ಪೊಲೀಸರಿಗೆ ಸಿಕ್ಕಿದೆ.


ಆದರೂ ಕರೆಯ ವಿಚಾರವನ್ನು ಗಂಭೀರವಾಗಿ ಪರಿಗಣಿಸಿರುವ ಮಾತೋಶ್ರೀ ಆವರಣದಲ್ಲಿ ಭದ್ರತೆ ಹೆಚ್ಚಿಸಿದೆ. ಅಲ್ಲದೆ, ಕರೆ ಮಾಡಿದ ವ್ಯಕ್ತಿಯ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ನಿನ್ನೆ ರಾತ್ರಿ 10.30ರ ಸುಮಾರಿಗೆ ಕರೆ ಮಾಡಿದ್ದ ವ್ಯಕ್ತಿ , ದಾವೂದ್ ಇಬ್ರಾಹಿಂ ಲೈನಲ್ಲಿದ್ದಾರೆ. ಸಿಎಂ ಉದ್ಧವ್ ಠಾಕ್ರೆಗೆ ಕರೆ ಹಸ್ತಾಂತರ ಮಾಡುವಂತೆ ಹೇಳಿದ್ದಾನೆ. ಆದರೆ ಕರೆ ಸ್ವೀಕರಿಸಿದ ವ್ಯಕ್ತಿ ಉದ್ಧವ್ ಠಾಕ್ರೆಗೆ ಕರೆಯನ್ನು ಹಸ್ತಾಂತರ ಮಾಡಲಿಲ್ಲ. ಅದೇ ವ್ಯಕ್ತಿ ಮತ್ತೊಮ್ಮೆ ಕರೆ ಮಾಡಿದ್ದು ತಾನು ದುಬೈನಿಂದ ಕರೆ ಮಾಡುತ್ತಿದ್ದು ದಾವೂದ್ ಸಹಚರ ಎಂದು ಹೇಳಿದ್ದ. ಹೆಸರು ಕೇಳಿದ್ದಕ್ಕೆ ಹೇಳಿರಲಿಲ್ಲ. ಈ ಬಗ್ಗೆ ಭದ್ರತಾ ಸಿಬಂದಿ ಆಬಳಿಕ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರು.
ಮಹಾರಾಷ್ಟ್ರ ಸರಕಾರ ಘಟನೆ ಬಗ್ಗೆ ಖಂಡನೆ ವ್ಯಕ್ತಪಡಿಸಿದ್ದು ಕೇಂದ್ರ ಸರಕಾರ ಮಧ್ಯಪ್ರವೇಶ ಮಾಡಿ ತನಿಖೆ ನಡೆಸಬೇಕೆಂದು ಒತ್ತಾಯ ಮಾಡಿದೆ.
22-03-26 11:44 am
HK News Staffer
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
ಪಾವಗಡ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕನ ಕಿರುಕ...
21-03-26 05:32 pm
22-03-26 08:37 pm
HK News Staffer
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
ಪ್ಯಾಲೆಸ್ತೀನಿಗರಿಗೆ ಈ ಬಾರಿ ಕಹಿಯಾಯ್ತು ಈದ್ ; ಜೆರು...
20-03-26 05:32 pm
ಲಂಡನ್ ರಸ್ತೆಯಲ್ಲಿ ಪಾನ್ ಉಗುಳಿದ ಭಾರತ ಮೂಲದ ಇಬ್ಬರ...
19-03-26 04:51 pm
22-03-26 07:30 pm
HK News Staffer
Russian oil Tanker, Mangalore: ರಷ್ಯಾದಿಂದ ಮಂಗಳ...
22-03-26 05:07 pm
ರಣಮಳೆಗೆ ಮನೆಯನ್ನ ಕಳಕೊಂಡಿದ್ದ ಕೊಲ್ಯದ ಬಡ ಕುಟುಂಬಕ್...
22-03-26 02:42 pm
Rape, Sandesh PG Inspector: ಇನ್ಸ್ ಪೆಕ್ಟರ್ ಸಂ...
22-03-26 12:10 pm
ಕಲ್ಲಡ್ಕದ ಫ್ಯಾಬ್ರಿಕೇಶನ್ ಉದ್ಯಮಿ ಸುಳ್ಯದ ಲಾಡ್ಜ್ ನ...
21-03-26 08:23 pm
22-03-26 09:44 pm
HK News Staffer
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm