ಬ್ರೇಕಿಂಗ್ ನ್ಯೂಸ್
03-09-21 10:44 am Headline Karnataka News Network ಕ್ರೈಂ
ಚಿಕ್ಕಬಳ್ಳಾಪುರ, ಸೆ.3: ಹೈದರಾಬಾದ್ ನಿಂದ ಬರುತ್ತಿದ್ದ ಬೃಹತ್ ಕಂಟೈನರ್ ಲಾರಿಗಳನ್ನು ತಪಾಸಣೆ ಮಾಡುತ್ತಿದ್ದಾಗ ಟನ್ ಗಟ್ಟಲೆ ಜಾನುವಾರುಗಳ ಕೊಂಬು, ಮೂಳೆಗಳು ದೊರೆತ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಪೋತೇಪಲ್ಲಿ ಕ್ರಾಸ್ ಬಳಿ ನಡೆದಿದೆ.
ಹೈದರಾಬಾದ್ ಕಡೆಯಿಂದ ಉತ್ತರ ಪ್ರದೇಶ ನೊಂದಣಿಯ ಬೃಹತ್ ಗಾತ್ರದ ಕಂಟೈನರ್ ಲಾರಿ, ಕ್ಯಾಂಟರ್ ಸೇರಿದಂತೆ ಅಶೋಕ್ ಲೈಲಾಂಡ್ ಮೂರು ವಾಹನಗಳಲ್ಲಿ ಜಾನುವಾರುಗಳ ಕೊಂಬು, ಮೂಳೆಗಳನ್ನು ಹೊತ್ತು ತಂದಿದ್ದು ಅವನ್ನು ಬಾಗೇಪಲ್ಲಿಯಲ್ಲಿ ಇತರೇ ಚಿಕ್ಕ ವಾಹನಗಳ ಮೂಲಕ ಅಜ್ಞಾತ ಸ್ಥಳಕ್ಕೆ ರವಾನೆ ಮಾಡಲಾಗುತ್ತಿತ್ತು. ಈ ಬಗ್ಗೆ ಖಚಿತ ಮಾಹಿತಿ ಪಡೆದು ಬಾಗೇಪಲ್ಲಿ ಸಿಪಿಐ ನಾಗರಾಜು ಹಾಗೂ ಪಿಎಸ್ಐ ಗೋಪಾಲ್ ರೆಡ್ಡಿ, ದಾಳಿ ನಡೆಸಿ ಮೂರು ಲಾರಿಗಳನ್ನು ವಶಕ್ಕೆ ಪಡಿಸಿಕೊಂಡಿದ್ದಾರೆ.
ವಶಪಡಿಸಿಕೊಂಡ ಕೊಂಬು, ಮೂಳೆಗಳು ಬರೋಬ್ಬರಿ 30 ಟನ್ ನಷ್ಟು ಇರಬಹುದು ಎಂದು ಅಂದಾಜಿಸಲಾಗಿದೆ. ಸದ್ಯ ಲಾರಿ ಚಾಲಕರಾದ ಸದಾಖತ್ ಆಲಿ, ತೌಸಿಫ್, ಮಹಮ್ ಬಷೀರ್ ಅನ್ಸಾರಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರ ವಿಚಾರಣೆ ನಡೆಸಿರುವ ಪೊಲೀಸರು, ಬಾಗೇಪಲ್ಲಿಯ ಸ್ಥಳೀಯ ವ್ತಕ್ತಿಯೊರ್ವ ಈ ಗೋವಿನ ಮೂಳೆ, ಕೊಂಬುಗಳನ್ನು ಹೈದರಾಬಾದ್ ನಿಂದ ಎಕ್ಸ್ಪೋರ್ಟ್ ಮಾಡಿಕೊಂಡಿದ್ದಾನೆಂದು ತಿಳಿದುಬಂದಿದೆ. ಈ ಮೂಳೆನ ಕೊಂಬುಗಳನ್ನು ಪುಡಿ ಮಾಡಿ ಬೇರೆ ಕಡೆಗೆ ರವಾನೆ ಮಾಡುತ್ತಿದ್ದ ಎನ್ನಲಾಗಿದೆ. ಸದ್ಯ ಬಾಗೇಪಲ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
32 tons of cattle horns found in truck from Hyderabad seized in Chikkaballapur Bengaluru
30-06-25 02:55 pm
HK News Desk
ಅಕ್ರಮ ಗೋಸಾಗಣೆ ತಡೆದ ಶ್ರೀರಾಮ ಸೇನೆ ಕಾರ್ಯಕರ್ತರನ್ನ...
30-06-25 01:44 pm
Spike in Heart Attack, Hassan: Dr. Manjunath...
30-06-25 12:05 pm
Tumakuru accident, four killed: ಕ್ಯಾಂಟರ್ -...
30-06-25 11:04 am
ಕರ್ಣಾಟಕ ಬ್ಯಾಂಕ್ ಸಿಇಓ, ಎಂಡಿ ಶ್ರೀಕೃಷ್ಣನ್ ಹರಿಹರ...
29-06-25 10:48 pm
29-06-25 11:13 am
HK News Desk
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
400 ಕಿಮೀ ಎತ್ತರದ ಬಾಹ್ಯಾಕಾಶ ನಿಲ್ದಾಣ ತಲುಪಿದ ಮೊದಲ...
27-06-25 01:44 pm
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
30-06-25 03:20 pm
Mangalore Correspondent
Mangalore Bomb Threat, Airport: ಮಂಗಳೂರು ಸೇರಿ...
30-06-25 01:07 pm
Red Stone Quarry, Dakshina Kannada, Protest:...
27-06-25 10:17 pm
ಧರ್ಮಸ್ಥಳ ಗ್ರಾಮದಲ್ಲಿ ಅಸಹಜ ಸಾವಿನ ವೈರಲ್ ಪತ್ರ ; ಮ...
27-06-25 04:56 pm
Mangalore Jail Fight: ಮಂಗಳೂರು ಜೈಲಿನಲ್ಲಿ ಮತ್ತೆ...
26-06-25 10:08 pm
29-06-25 11:23 pm
Mangalore Correspondent
Udupi Crime, Kapu, Railway: ರೈಲಿನಲ್ಲಿ ಉಡುಪಿಗೆ...
29-06-25 11:15 pm
Davanagere ATM Robbery : ಪೆಟ್ರೋಲ್ ಸುರಿದು ಎಟಿಎ...
29-06-25 04:26 pm
Tumakuru Husband Murder, Wife arrest, Crime:...
29-06-25 02:26 pm
Rape, Mangalore Crime, Someshwara Beach: ಇನ್ಸ...
28-06-25 07:30 pm