ಬ್ರೇಕಿಂಗ್ ನ್ಯೂಸ್
07-09-20 05:44 pm Bangalore Correspondent ಕ್ರೈಂ
ಬೆಂಗಳೂರು: ಹಣ ವಾಪಸ್ ಕೇಳಲು ಬಂದ ಬ್ಯಾಂಕ್ ಸಿಬ್ಬಂದಿಗೆ ಅತ್ಯಾಚಾರದ ಕೇಸ್ ಹಾಕುತ್ತೇನೆ ಎಂದು ಅವಾಜ್ ಹಾಕಿದ್ದ ಮಹಿಳೆಯ ವಿರುದ್ಧ ದೂರು ದಾಖಲಾಗಿದೆ.
ಸಂಗೀತಾ ಗೋಪಾಲ್ ವಿರುದ್ಧ ದೂರು ದಾಖಲಾಗಿದೆ. ಸಂಗೀತಾ ಗೋಪಾಲ್ ಡ್ರಗ್ಸ್ ಪೆಡ್ಲರ್ ರಾಹುಲ್ ಆಪ್ತೆ ಎನ್ನಲಾಗುತ್ತಿದೆ. ಇಂದಿರಾನಗರ ಪೊಲೀಸ್ ಠಾಣೆಗೆ ಸಾಮಾಜಿಕ ಕಾರ್ಯಕರ್ತೆ ಪ್ರಿಯಾ ಆರ್ಯಾ ದೂರು ನೀಡಿದ್ದಾರೆ.
ಸಂಗೀತಾ ಗೋಪಾಲ್ ಬ್ಯಾಂಕ್ ಅಧಿಕಾರಿಗಳಿಗೆ ಸುಳ್ಳು ರೇಪ್ ಕೇಸ್ ಹಾಕುತ್ತೇನೆ ಎಂದು ಧಮ್ಕಿ ಹಾಕಿದ್ದಳು. ಬ್ಯಾಂಕ್ ಅಧಿಕಾರಿಗಳಿಗೆ ಧಮ್ಕಿ ಹಾಕಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.
ಬೆಂಗಳೂರು ಪೊಲೀಸರಿಗೆ ಟ್ವಿಟ್ಟರ್ನಲ್ಲೂ ಈ ಬಗ್ಗೆ ಸಾರ್ವಜನಿಕರು ದೂರು ನೀಡಿದ್ದರು. ಇದೀಗ ಬ್ಯಾಂಕ್ ಅಧಿಕಾರಿಯನ್ನ ಅಶ್ಲೀಲವಾಗಿ ನಿಂದಿಸಿದ್ದಾರೆಂದು ದೂರು ನೀಡಲಾಗಿದೆ. ಸದ್ಯ ಸಾಮಾಜಿಕ ಕಾರ್ಯಕರ್ತೆ ದೂರಿನ ಅನ್ವಯ ಸಂಗೀತಾಳನ್ನು ವಿಚಾರಣೆ ಮಾಡುವ ಸಾಧ್ಯತೆ ಇದೆ.
ಏನಿದು ಪ್ರಕರಣ?
ಬ್ಯಾಂಕಿನಲ್ಲಿ ಪಡೆದ ಸಾಲವನ್ನು ವಾಪಸ್ ಕೊಡಿ ಎಂದು ಕೇಳಲು ಮೂರು ಜನ ಬ್ಯಾಂಕ್ ಸಿಬ್ಬಂದಿ ಮಹಿಳೆಯ ಮನೆಗೆ ಬಂದಿದ್ದಾರೆ. ಈ ವೇಳೆ ಮಹಿಳೆ ಸುಮ್ಮನೆ ಜಗಳ ಮಾಡಿದ್ದಲ್ಲದೆ, ನಿಮ್ಮ ಮೇಲೆ ಅತ್ಯಾಚಾರದ ಕೇಸ್ ಹಾಕುತ್ತೇನೆ ಎಂದು ಅವಾಜ್ ಹಾಕಿದ್ದಾಳೆ. ನನ್ನ ಮನೆಗೆ ಹಣ ಕೇಳೋಕೆ ಬರಲು ನಿಮಗೆಷ್ಟು ಧೈರ್ಯ ಎಂದು ಅವಾಚ್ಯ ಪದಗಳಿಂದ ನಿಂದಿಸಿದ್ದಾಳೆ. ಮಹಿಳೆಯ ಕಡೆಯವರೇ ಈ ವಿಡಿಯೋ ಮಾಡಿದ್ದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದರು.
ಬ್ಯಾಂಕ್ ಸಿಬ್ಬಂದಿಯನ್ನು ತಾನೇ ಎಳೆದಾಡಿ, ನಿನ್ನ ಮೇಲೆ ಅತ್ಯಾಚಾರ ಕೇಸ್ ಹಾಕುತ್ತೇನೆ. ನನ್ನ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ದೂರು ನೀಡುತ್ತೇನೆ ಎಂದು ಮಹಿಳೆ ಬೆದರಿಕೆ ಹಾಕಿದ್ದಾಳೆ. ಅಲ್ಲದೇ ನಿಮ್ಮ ಫೋಟೋವನ್ನು ಫೇಸ್ಬುಕ್ಗೆ ಹಾಕಿ ಅರೆಸ್ಟ್ ಮಾಡಿಸುತ್ತೇನೆ ಎಂದಿದ್ದಾಳೆ. ಈ ವೇಳೆ ಸಿಬ್ಬಂದಿಯೋರ್ವರು ಮಹಿಳೆಯ ಕಾಲಿಗೆ ಬಿದ್ದು ನಮ್ಮನ್ನು ಬಿಟ್ಟು ಬೀಡಿ ಎಂದು ಕೇಳಿಕೊಂಡರೂ ಮಹಿಳೆ ದರ್ಪ ತೋರಿದ್ದಾಳೆ. ಹಿರಿಯ ನಾಗರಿಕರು ಎಂಬ ಅರಿವಿಲ್ಲದೇ ಮಹಿಳೆ ನಡೆದುಕೊಂಡ ರೀತಿಗೆ ಜಾಲತಾಣದಲ್ಲಿ ಛೀಮಾರಿ ಹಾಕುತ್ತಿದ್ದಾರೆ.
So here's d woman who gave #falserape case threats. Her name is Sangeetha Gopal. Allegedly her husbands company owes money to many & when someone asks for payment, she cries rape. We all saw who was abusive in video but see who gave apology - Lenders & she's flaunting! Sickening. pic.twitter.com/9qxadYsYKb
— Deepika Narayan Bhardwaj (@DeepikaBhardwaj) September 6, 2020
28-07-26 08:12 pm
HK News Staffer
ಶಿಕ್ಷಕರ ಕೊರತೆ ಇರುವ ಸರ್ಕಾರಿ ಶಾಲೆಗಳನ್ನು ಖಾಸಗಿ ಶ...
25-07-26 03:06 pm
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
28-07-26 11:56 am
HK News Staffer
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
28-07-26 10:28 pm
HK News Desk
ಶಾಸಕ ಅಶೋಕ ರೈ ಹೆಸರೇಳಿ ಮಹಿಳೆಗೆ ಕರೆ ಮಾಡಿ ವಂಚನೆ ;...
28-07-26 10:23 pm
ಜಾಲತಾಣದಲ್ಲಿ ಜೆನ್ ಜೀಗಳ ಅಬ್ಬರ ; ಕಾಕ್ರೋಚ್ ಬೆನ್ನಲ...
27-07-26 09:48 pm
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
29-07-26 10:40 am
HK News Staffer
ಪತ್ನಿಗೆ ನೇಣು ಬಿಗಿದು ವಿಡಿಯೋ ಕಾಲ್ನಲ್ಲಿ ಅತ್ತೆ-ಮ...
28-07-26 08:11 pm
Lavanya Murder Case, News: ಲಾವಣ್ಯ ಹತ್ಯೆ ಪ್ರಕರ...
28-07-26 07:07 pm
ವಿಚ್ಛೇದಿತ ಮಹಿಳೆಗೆ ಫೇಸ್ಬುಕ್ನಲ್ಲಿ ಪ್ರೀತಿಯ ನಾಟ...
28-07-26 12:28 pm
12 ವರ್ಷಗಳ ಹಿಂದಿನ ಗಂಗಾಧರ ಪಾಂಗಾಳ ಕೊಲೆ ಪ್ರಕರಣ ;...
27-07-26 11:07 pm