ಬ್ರೇಕಿಂಗ್ ನ್ಯೂಸ್
07-09-20 05:44 pm Bangalore Correspondent ಕ್ರೈಂ
ಬೆಂಗಳೂರು: ಹಣ ವಾಪಸ್ ಕೇಳಲು ಬಂದ ಬ್ಯಾಂಕ್ ಸಿಬ್ಬಂದಿಗೆ ಅತ್ಯಾಚಾರದ ಕೇಸ್ ಹಾಕುತ್ತೇನೆ ಎಂದು ಅವಾಜ್ ಹಾಕಿದ್ದ ಮಹಿಳೆಯ ವಿರುದ್ಧ ದೂರು ದಾಖಲಾಗಿದೆ.
ಸಂಗೀತಾ ಗೋಪಾಲ್ ವಿರುದ್ಧ ದೂರು ದಾಖಲಾಗಿದೆ. ಸಂಗೀತಾ ಗೋಪಾಲ್ ಡ್ರಗ್ಸ್ ಪೆಡ್ಲರ್ ರಾಹುಲ್ ಆಪ್ತೆ ಎನ್ನಲಾಗುತ್ತಿದೆ. ಇಂದಿರಾನಗರ ಪೊಲೀಸ್ ಠಾಣೆಗೆ ಸಾಮಾಜಿಕ ಕಾರ್ಯಕರ್ತೆ ಪ್ರಿಯಾ ಆರ್ಯಾ ದೂರು ನೀಡಿದ್ದಾರೆ.
ಸಂಗೀತಾ ಗೋಪಾಲ್ ಬ್ಯಾಂಕ್ ಅಧಿಕಾರಿಗಳಿಗೆ ಸುಳ್ಳು ರೇಪ್ ಕೇಸ್ ಹಾಕುತ್ತೇನೆ ಎಂದು ಧಮ್ಕಿ ಹಾಕಿದ್ದಳು. ಬ್ಯಾಂಕ್ ಅಧಿಕಾರಿಗಳಿಗೆ ಧಮ್ಕಿ ಹಾಕಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.
ಬೆಂಗಳೂರು ಪೊಲೀಸರಿಗೆ ಟ್ವಿಟ್ಟರ್ನಲ್ಲೂ ಈ ಬಗ್ಗೆ ಸಾರ್ವಜನಿಕರು ದೂರು ನೀಡಿದ್ದರು. ಇದೀಗ ಬ್ಯಾಂಕ್ ಅಧಿಕಾರಿಯನ್ನ ಅಶ್ಲೀಲವಾಗಿ ನಿಂದಿಸಿದ್ದಾರೆಂದು ದೂರು ನೀಡಲಾಗಿದೆ. ಸದ್ಯ ಸಾಮಾಜಿಕ ಕಾರ್ಯಕರ್ತೆ ದೂರಿನ ಅನ್ವಯ ಸಂಗೀತಾಳನ್ನು ವಿಚಾರಣೆ ಮಾಡುವ ಸಾಧ್ಯತೆ ಇದೆ.
ಏನಿದು ಪ್ರಕರಣ?
ಬ್ಯಾಂಕಿನಲ್ಲಿ ಪಡೆದ ಸಾಲವನ್ನು ವಾಪಸ್ ಕೊಡಿ ಎಂದು ಕೇಳಲು ಮೂರು ಜನ ಬ್ಯಾಂಕ್ ಸಿಬ್ಬಂದಿ ಮಹಿಳೆಯ ಮನೆಗೆ ಬಂದಿದ್ದಾರೆ. ಈ ವೇಳೆ ಮಹಿಳೆ ಸುಮ್ಮನೆ ಜಗಳ ಮಾಡಿದ್ದಲ್ಲದೆ, ನಿಮ್ಮ ಮೇಲೆ ಅತ್ಯಾಚಾರದ ಕೇಸ್ ಹಾಕುತ್ತೇನೆ ಎಂದು ಅವಾಜ್ ಹಾಕಿದ್ದಾಳೆ. ನನ್ನ ಮನೆಗೆ ಹಣ ಕೇಳೋಕೆ ಬರಲು ನಿಮಗೆಷ್ಟು ಧೈರ್ಯ ಎಂದು ಅವಾಚ್ಯ ಪದಗಳಿಂದ ನಿಂದಿಸಿದ್ದಾಳೆ. ಮಹಿಳೆಯ ಕಡೆಯವರೇ ಈ ವಿಡಿಯೋ ಮಾಡಿದ್ದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದರು.
ಬ್ಯಾಂಕ್ ಸಿಬ್ಬಂದಿಯನ್ನು ತಾನೇ ಎಳೆದಾಡಿ, ನಿನ್ನ ಮೇಲೆ ಅತ್ಯಾಚಾರ ಕೇಸ್ ಹಾಕುತ್ತೇನೆ. ನನ್ನ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ದೂರು ನೀಡುತ್ತೇನೆ ಎಂದು ಮಹಿಳೆ ಬೆದರಿಕೆ ಹಾಕಿದ್ದಾಳೆ. ಅಲ್ಲದೇ ನಿಮ್ಮ ಫೋಟೋವನ್ನು ಫೇಸ್ಬುಕ್ಗೆ ಹಾಕಿ ಅರೆಸ್ಟ್ ಮಾಡಿಸುತ್ತೇನೆ ಎಂದಿದ್ದಾಳೆ. ಈ ವೇಳೆ ಸಿಬ್ಬಂದಿಯೋರ್ವರು ಮಹಿಳೆಯ ಕಾಲಿಗೆ ಬಿದ್ದು ನಮ್ಮನ್ನು ಬಿಟ್ಟು ಬೀಡಿ ಎಂದು ಕೇಳಿಕೊಂಡರೂ ಮಹಿಳೆ ದರ್ಪ ತೋರಿದ್ದಾಳೆ. ಹಿರಿಯ ನಾಗರಿಕರು ಎಂಬ ಅರಿವಿಲ್ಲದೇ ಮಹಿಳೆ ನಡೆದುಕೊಂಡ ರೀತಿಗೆ ಜಾಲತಾಣದಲ್ಲಿ ಛೀಮಾರಿ ಹಾಕುತ್ತಿದ್ದಾರೆ.
So here's d woman who gave #falserape case threats. Her name is Sangeetha Gopal. Allegedly her husbands company owes money to many & when someone asks for payment, she cries rape. We all saw who was abusive in video but see who gave apology - Lenders & she's flaunting! Sickening. pic.twitter.com/9qxadYsYKb
— Deepika Narayan Bhardwaj (@DeepikaBhardwaj) September 6, 2020
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm