ಬ್ರೇಕಿಂಗ್ ನ್ಯೂಸ್
04-09-21 01:23 pm Bangalore Correspondent ಕ್ರೈಂ
ಬೆಂಗಳೂರು, ಸೆ.4 : ತನ್ನ ಡ್ರಗ್ಸ್ ವಹಿವಾಟಿನ ಬಗ್ಗೆ ಅನುಮಾನ ಬಾರದಿರಲಿ ಎಂದು ಆತನೇ ಪೊಲೀಸರಿಗೆ ಮಾಹಿತಿದಾರನಾಗಿ ಗುರುತಿಸಿಕೊಂಡಿದ್ದ. ಪೊಲೀಸರಿಗೆ ಇತರ ಆರೋಪಿಗಳ ಬಗ್ಗೆ ಮಾಹಿತಿ ಕೊಟ್ಟು ಡ್ರಗ್ಸ್ ಜಾಲದಲ್ಲಿ ಸಿಲುಕಿಸುತ್ತಿದ್ದ. ಆದರೆ, ಈಗ ತಾನೇ ಡ್ರಗ್ಸ್ ಜಾಲದಲ್ಲಿ ಬಿದ್ದು ಕಾಮಾಕ್ಷಿಪಾಳ್ಯ ಪೊಲೀಸರ ಬಲೆಗೆ ಬಿದ್ದಿದ್ದಾನೆ.
ರತನ್ ಲಾಲ್ ಬಂಧಿತ ಆರೋಪಿಯಾಗಿದ್ದು, ಆತನಿಂದ ಏರ್ ಗನ್, 150 ಗ್ರಾಂ ಗಾಂಜಾ, 150 ಗ್ರಾಂ ಅಫೀಮು, ಒಂದಷ್ಟು ಸಿಂಥೆಟಿಕ್ ಡ್ರಗ್ ವಶಕ್ಕೆ ಪಡೆದುಕೊಳ್ಳಲಾಗಿದೆ. ಹಲವು ವರ್ಷಗಳಿಂದ ಡ್ರಗ್ಸ್ ದಂಧೆ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡುತ್ತಿದ್ದ. ಈತ ನೀಡಿದ ಸುಳಿವಿನ ಮೇರೆಗೆ ಜಯನಗರ, ಗಿರಿನಗರ, ಹಲಸೂರು ಗೇಟ್ ಪೊಲೀಸರು ಆರೋಪಿಗಳನ್ನು ಹಿಡಿದು ತರುತ್ತಿದ್ದರು.
ಮಾದಕ ವಸ್ತು ಜಾಲದಲ್ಲಿ ತೊಡಗಿರುವ ಮಾಹಿತಿ ಮೇರೆಗೆ ಮೊನ್ನೆ ಮಫ್ತಿಯಲ್ಲಿದ್ದ ಪೊಲೀಸರು ರತನ್ ಲಾಲ್ ನನ್ನು ಬಂಧಿಸಲು ಮುಂದಾಗಿದ್ದಾರೆ. ಆದರೆ ಇದರಿಂದ ಭೀತಿಗೊಳಗಾಗಿ ಪೊಲೀಸ್ ಕಂಟ್ರೋಲ್ ರೂಮ್ಗೆ ಕರೆ ಮಾಡಿ, ತನ್ನನ್ನು ಯಾರೋ ಕಿಡ್ಯಾಪ್ ಮಾಡುತ್ತಿರುವುದಾಗಿ ತಿಳಿಸಿದ್ದ. ಕರೆಯ ಬೆನ್ನಲ್ಲೇ ಕಾಮಾಕ್ಷಿಪಾಳ್ಯ ಪೊಲೀಸರು ಸ್ಥಳಕ್ಕೆ ತೆರಳಿದಾಗ ಮಫ್ತಿಯಲ್ಲಿ ಬಂದಿದ್ದು ನಿಜವಾದ ಪೊಲೀಸರೇ ಎನ್ನುವುದು ತಿಳಿದುಬಂದಿದೆ. ಬಳಿಕ ರತನ್ ಲಾಲ್ ಹಾಗೂ ಮತ್ತೋರ್ವನನ್ನು ವಶಕ್ಕೆ ಪಡೆದಿದ್ದು ವಿಚಾರಣೆ ನಡೆಸಿದಾಗ ಮಾದಕವಸ್ತು ಪತ್ತೆಯಾಗಿತ್ತು.
ಎಂಟು ವರ್ಷಗಳಿಂದ ಖುದ್ದು ದಂಧೆಕೋರರಿಂದ ಡ್ರಗ್ಸ್ ಖರೀದಿಸಿ ವಹಿವಾಟು ನಡೆಸುತ್ತಿದ್ದ. ತನ್ನ ಮೇಲೆ ಅನುಮಾನ ಬಾರದಿರಲಿ ಎಂದು ಪೊಲೀಸರಿಗೆ ಮಾಹಿತಿದಾರನಾಗಿಯೂ ಗುರುತಿಸಿಕೊಂಡಿದ್ದ. ಈಗಾಗಲೇ ಆರೋಪಿಯಿಂದ ಸಿಂಥೆಟಿಕ್ ಹಾಗೂ ನಾನ್ ಸಿಂಥೆಟಿಕ್ ಡ್ರಗ್ ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am