ಬ್ರೇಕಿಂಗ್ ನ್ಯೂಸ್
04-09-21 01:23 pm Bangalore Correspondent ಕ್ರೈಂ
ಬೆಂಗಳೂರು, ಸೆ.4 : ತನ್ನ ಡ್ರಗ್ಸ್ ವಹಿವಾಟಿನ ಬಗ್ಗೆ ಅನುಮಾನ ಬಾರದಿರಲಿ ಎಂದು ಆತನೇ ಪೊಲೀಸರಿಗೆ ಮಾಹಿತಿದಾರನಾಗಿ ಗುರುತಿಸಿಕೊಂಡಿದ್ದ. ಪೊಲೀಸರಿಗೆ ಇತರ ಆರೋಪಿಗಳ ಬಗ್ಗೆ ಮಾಹಿತಿ ಕೊಟ್ಟು ಡ್ರಗ್ಸ್ ಜಾಲದಲ್ಲಿ ಸಿಲುಕಿಸುತ್ತಿದ್ದ. ಆದರೆ, ಈಗ ತಾನೇ ಡ್ರಗ್ಸ್ ಜಾಲದಲ್ಲಿ ಬಿದ್ದು ಕಾಮಾಕ್ಷಿಪಾಳ್ಯ ಪೊಲೀಸರ ಬಲೆಗೆ ಬಿದ್ದಿದ್ದಾನೆ.
ರತನ್ ಲಾಲ್ ಬಂಧಿತ ಆರೋಪಿಯಾಗಿದ್ದು, ಆತನಿಂದ ಏರ್ ಗನ್, 150 ಗ್ರಾಂ ಗಾಂಜಾ, 150 ಗ್ರಾಂ ಅಫೀಮು, ಒಂದಷ್ಟು ಸಿಂಥೆಟಿಕ್ ಡ್ರಗ್ ವಶಕ್ಕೆ ಪಡೆದುಕೊಳ್ಳಲಾಗಿದೆ. ಹಲವು ವರ್ಷಗಳಿಂದ ಡ್ರಗ್ಸ್ ದಂಧೆ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡುತ್ತಿದ್ದ. ಈತ ನೀಡಿದ ಸುಳಿವಿನ ಮೇರೆಗೆ ಜಯನಗರ, ಗಿರಿನಗರ, ಹಲಸೂರು ಗೇಟ್ ಪೊಲೀಸರು ಆರೋಪಿಗಳನ್ನು ಹಿಡಿದು ತರುತ್ತಿದ್ದರು.
ಮಾದಕ ವಸ್ತು ಜಾಲದಲ್ಲಿ ತೊಡಗಿರುವ ಮಾಹಿತಿ ಮೇರೆಗೆ ಮೊನ್ನೆ ಮಫ್ತಿಯಲ್ಲಿದ್ದ ಪೊಲೀಸರು ರತನ್ ಲಾಲ್ ನನ್ನು ಬಂಧಿಸಲು ಮುಂದಾಗಿದ್ದಾರೆ. ಆದರೆ ಇದರಿಂದ ಭೀತಿಗೊಳಗಾಗಿ ಪೊಲೀಸ್ ಕಂಟ್ರೋಲ್ ರೂಮ್ಗೆ ಕರೆ ಮಾಡಿ, ತನ್ನನ್ನು ಯಾರೋ ಕಿಡ್ಯಾಪ್ ಮಾಡುತ್ತಿರುವುದಾಗಿ ತಿಳಿಸಿದ್ದ. ಕರೆಯ ಬೆನ್ನಲ್ಲೇ ಕಾಮಾಕ್ಷಿಪಾಳ್ಯ ಪೊಲೀಸರು ಸ್ಥಳಕ್ಕೆ ತೆರಳಿದಾಗ ಮಫ್ತಿಯಲ್ಲಿ ಬಂದಿದ್ದು ನಿಜವಾದ ಪೊಲೀಸರೇ ಎನ್ನುವುದು ತಿಳಿದುಬಂದಿದೆ. ಬಳಿಕ ರತನ್ ಲಾಲ್ ಹಾಗೂ ಮತ್ತೋರ್ವನನ್ನು ವಶಕ್ಕೆ ಪಡೆದಿದ್ದು ವಿಚಾರಣೆ ನಡೆಸಿದಾಗ ಮಾದಕವಸ್ತು ಪತ್ತೆಯಾಗಿತ್ತು.
ಎಂಟು ವರ್ಷಗಳಿಂದ ಖುದ್ದು ದಂಧೆಕೋರರಿಂದ ಡ್ರಗ್ಸ್ ಖರೀದಿಸಿ ವಹಿವಾಟು ನಡೆಸುತ್ತಿದ್ದ. ತನ್ನ ಮೇಲೆ ಅನುಮಾನ ಬಾರದಿರಲಿ ಎಂದು ಪೊಲೀಸರಿಗೆ ಮಾಹಿತಿದಾರನಾಗಿಯೂ ಗುರುತಿಸಿಕೊಂಡಿದ್ದ. ಈಗಾಗಲೇ ಆರೋಪಿಯಿಂದ ಸಿಂಥೆಟಿಕ್ ಹಾಗೂ ನಾನ್ ಸಿಂಥೆಟಿಕ್ ಡ್ರಗ್ ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
30-06-25 02:55 pm
HK News Desk
ಅಕ್ರಮ ಗೋಸಾಗಣೆ ತಡೆದ ಶ್ರೀರಾಮ ಸೇನೆ ಕಾರ್ಯಕರ್ತರನ್ನ...
30-06-25 01:44 pm
Spike in Heart Attack, Hassan: Dr. Manjunath...
30-06-25 12:05 pm
Tumakuru accident, four killed: ಕ್ಯಾಂಟರ್ -...
30-06-25 11:04 am
ಕರ್ಣಾಟಕ ಬ್ಯಾಂಕ್ ಸಿಇಓ, ಎಂಡಿ ಶ್ರೀಕೃಷ್ಣನ್ ಹರಿಹರ...
29-06-25 10:48 pm
29-06-25 11:13 am
HK News Desk
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
400 ಕಿಮೀ ಎತ್ತರದ ಬಾಹ್ಯಾಕಾಶ ನಿಲ್ದಾಣ ತಲುಪಿದ ಮೊದಲ...
27-06-25 01:44 pm
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
30-06-25 08:19 pm
Mangalore Correspondent
Mangalore, Rain, School News: ತರಗತಿ ನಡೆಯುತ್ತಿ...
30-06-25 03:20 pm
Mangalore Bomb Threat, Airport: ಮಂಗಳೂರು ಸೇರಿ...
30-06-25 01:07 pm
Red Stone Quarry, Dakshina Kannada, Protest:...
27-06-25 10:17 pm
ಧರ್ಮಸ್ಥಳ ಗ್ರಾಮದಲ್ಲಿ ಅಸಹಜ ಸಾವಿನ ವೈರಲ್ ಪತ್ರ ; ಮ...
27-06-25 04:56 pm
30-06-25 06:12 pm
Giridhar Shetty, Mangaluru
Olx Fraud, Mangalore: ಓಎಲ್ ಎಕ್ಸ್ ನಲ್ಲಿ ಕಾರು ಮ...
29-06-25 11:23 pm
Udupi Crime, Kapu, Railway: ರೈಲಿನಲ್ಲಿ ಉಡುಪಿಗೆ...
29-06-25 11:15 pm
Davanagere ATM Robbery : ಪೆಟ್ರೋಲ್ ಸುರಿದು ಎಟಿಎ...
29-06-25 04:26 pm
Tumakuru Husband Murder, Wife arrest, Crime:...
29-06-25 02:26 pm