ಬ್ರೇಕಿಂಗ್ ನ್ಯೂಸ್
04-09-21 01:23 pm Bangalore Correspondent ಕ್ರೈಂ
ಬೆಂಗಳೂರು, ಸೆ.4 : ತನ್ನ ಡ್ರಗ್ಸ್ ವಹಿವಾಟಿನ ಬಗ್ಗೆ ಅನುಮಾನ ಬಾರದಿರಲಿ ಎಂದು ಆತನೇ ಪೊಲೀಸರಿಗೆ ಮಾಹಿತಿದಾರನಾಗಿ ಗುರುತಿಸಿಕೊಂಡಿದ್ದ. ಪೊಲೀಸರಿಗೆ ಇತರ ಆರೋಪಿಗಳ ಬಗ್ಗೆ ಮಾಹಿತಿ ಕೊಟ್ಟು ಡ್ರಗ್ಸ್ ಜಾಲದಲ್ಲಿ ಸಿಲುಕಿಸುತ್ತಿದ್ದ. ಆದರೆ, ಈಗ ತಾನೇ ಡ್ರಗ್ಸ್ ಜಾಲದಲ್ಲಿ ಬಿದ್ದು ಕಾಮಾಕ್ಷಿಪಾಳ್ಯ ಪೊಲೀಸರ ಬಲೆಗೆ ಬಿದ್ದಿದ್ದಾನೆ.
ರತನ್ ಲಾಲ್ ಬಂಧಿತ ಆರೋಪಿಯಾಗಿದ್ದು, ಆತನಿಂದ ಏರ್ ಗನ್, 150 ಗ್ರಾಂ ಗಾಂಜಾ, 150 ಗ್ರಾಂ ಅಫೀಮು, ಒಂದಷ್ಟು ಸಿಂಥೆಟಿಕ್ ಡ್ರಗ್ ವಶಕ್ಕೆ ಪಡೆದುಕೊಳ್ಳಲಾಗಿದೆ. ಹಲವು ವರ್ಷಗಳಿಂದ ಡ್ರಗ್ಸ್ ದಂಧೆ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡುತ್ತಿದ್ದ. ಈತ ನೀಡಿದ ಸುಳಿವಿನ ಮೇರೆಗೆ ಜಯನಗರ, ಗಿರಿನಗರ, ಹಲಸೂರು ಗೇಟ್ ಪೊಲೀಸರು ಆರೋಪಿಗಳನ್ನು ಹಿಡಿದು ತರುತ್ತಿದ್ದರು.
ಮಾದಕ ವಸ್ತು ಜಾಲದಲ್ಲಿ ತೊಡಗಿರುವ ಮಾಹಿತಿ ಮೇರೆಗೆ ಮೊನ್ನೆ ಮಫ್ತಿಯಲ್ಲಿದ್ದ ಪೊಲೀಸರು ರತನ್ ಲಾಲ್ ನನ್ನು ಬಂಧಿಸಲು ಮುಂದಾಗಿದ್ದಾರೆ. ಆದರೆ ಇದರಿಂದ ಭೀತಿಗೊಳಗಾಗಿ ಪೊಲೀಸ್ ಕಂಟ್ರೋಲ್ ರೂಮ್ಗೆ ಕರೆ ಮಾಡಿ, ತನ್ನನ್ನು ಯಾರೋ ಕಿಡ್ಯಾಪ್ ಮಾಡುತ್ತಿರುವುದಾಗಿ ತಿಳಿಸಿದ್ದ. ಕರೆಯ ಬೆನ್ನಲ್ಲೇ ಕಾಮಾಕ್ಷಿಪಾಳ್ಯ ಪೊಲೀಸರು ಸ್ಥಳಕ್ಕೆ ತೆರಳಿದಾಗ ಮಫ್ತಿಯಲ್ಲಿ ಬಂದಿದ್ದು ನಿಜವಾದ ಪೊಲೀಸರೇ ಎನ್ನುವುದು ತಿಳಿದುಬಂದಿದೆ. ಬಳಿಕ ರತನ್ ಲಾಲ್ ಹಾಗೂ ಮತ್ತೋರ್ವನನ್ನು ವಶಕ್ಕೆ ಪಡೆದಿದ್ದು ವಿಚಾರಣೆ ನಡೆಸಿದಾಗ ಮಾದಕವಸ್ತು ಪತ್ತೆಯಾಗಿತ್ತು.
ಎಂಟು ವರ್ಷಗಳಿಂದ ಖುದ್ದು ದಂಧೆಕೋರರಿಂದ ಡ್ರಗ್ಸ್ ಖರೀದಿಸಿ ವಹಿವಾಟು ನಡೆಸುತ್ತಿದ್ದ. ತನ್ನ ಮೇಲೆ ಅನುಮಾನ ಬಾರದಿರಲಿ ಎಂದು ಪೊಲೀಸರಿಗೆ ಮಾಹಿತಿದಾರನಾಗಿಯೂ ಗುರುತಿಸಿಕೊಂಡಿದ್ದ. ಈಗಾಗಲೇ ಆರೋಪಿಯಿಂದ ಸಿಂಥೆಟಿಕ್ ಹಾಗೂ ನಾನ್ ಸಿಂಥೆಟಿಕ್ ಡ್ರಗ್ ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
27-03-26 04:49 pm
HK News Staffer
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
ಚಿಕ್ಕಮಗಳೂರಿನಲ್ಲಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಬ...
26-03-26 10:27 pm
ಕ್ಲಾಸ್ ರೂಮಿನಲ್ಲೇ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ...
26-03-26 09:21 pm
27-03-26 04:07 pm
HK News Staffer
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
ಹೊರ್ಮುಜ್ ಜಲಸಂಧಿ ನಿರ್ಬಂಧಿಸಿದ್ದ ಇರಾನ್ ನೌಕಾಪಡೆ ಮ...
26-03-26 09:00 pm
ಮಂಗಳೂರಿಗೆ ಮತ್ತೆರಡು ಬೃಹತ್ ತೈಲ ಟ್ಯಾಂಕರ್ ಹಡಗು ;...
26-03-26 09:31 am
27-03-26 03:38 pm
HK News Staffer
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಸಾಮಾಜಿಕ ಜಾಲತಾಣದಲ್...
25-03-26 08:44 pm
27-03-26 10:02 pm
HK News Staffer
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm
ಹೊಸ ಬಾವಿ ಕೊರೆಯುತ್ತಿದ್ದ ವೇಳೆ ದುರಂತ ; ಮೂವತ್ತು ಅ...
27-03-26 09:32 pm
ಪುಟ್ಟೇನಹಳ್ಳಿ ಠಾಣೆ ಇನ್ಸ್ಪೆಕ್ಟರ್ ತಿಂಗಳ ವಸೂಲಿ 2...
27-03-26 08:37 pm
Rowdy Sheeter Arif Hussain Murder, Mangalore:...
27-03-26 06:51 am