ಬ್ರೇಕಿಂಗ್ ನ್ಯೂಸ್
04-09-21 01:23 pm Bangalore Correspondent ಕ್ರೈಂ
ಬೆಂಗಳೂರು, ಸೆ.4 : ತನ್ನ ಡ್ರಗ್ಸ್ ವಹಿವಾಟಿನ ಬಗ್ಗೆ ಅನುಮಾನ ಬಾರದಿರಲಿ ಎಂದು ಆತನೇ ಪೊಲೀಸರಿಗೆ ಮಾಹಿತಿದಾರನಾಗಿ ಗುರುತಿಸಿಕೊಂಡಿದ್ದ. ಪೊಲೀಸರಿಗೆ ಇತರ ಆರೋಪಿಗಳ ಬಗ್ಗೆ ಮಾಹಿತಿ ಕೊಟ್ಟು ಡ್ರಗ್ಸ್ ಜಾಲದಲ್ಲಿ ಸಿಲುಕಿಸುತ್ತಿದ್ದ. ಆದರೆ, ಈಗ ತಾನೇ ಡ್ರಗ್ಸ್ ಜಾಲದಲ್ಲಿ ಬಿದ್ದು ಕಾಮಾಕ್ಷಿಪಾಳ್ಯ ಪೊಲೀಸರ ಬಲೆಗೆ ಬಿದ್ದಿದ್ದಾನೆ.
ರತನ್ ಲಾಲ್ ಬಂಧಿತ ಆರೋಪಿಯಾಗಿದ್ದು, ಆತನಿಂದ ಏರ್ ಗನ್, 150 ಗ್ರಾಂ ಗಾಂಜಾ, 150 ಗ್ರಾಂ ಅಫೀಮು, ಒಂದಷ್ಟು ಸಿಂಥೆಟಿಕ್ ಡ್ರಗ್ ವಶಕ್ಕೆ ಪಡೆದುಕೊಳ್ಳಲಾಗಿದೆ. ಹಲವು ವರ್ಷಗಳಿಂದ ಡ್ರಗ್ಸ್ ದಂಧೆ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡುತ್ತಿದ್ದ. ಈತ ನೀಡಿದ ಸುಳಿವಿನ ಮೇರೆಗೆ ಜಯನಗರ, ಗಿರಿನಗರ, ಹಲಸೂರು ಗೇಟ್ ಪೊಲೀಸರು ಆರೋಪಿಗಳನ್ನು ಹಿಡಿದು ತರುತ್ತಿದ್ದರು.
ಮಾದಕ ವಸ್ತು ಜಾಲದಲ್ಲಿ ತೊಡಗಿರುವ ಮಾಹಿತಿ ಮೇರೆಗೆ ಮೊನ್ನೆ ಮಫ್ತಿಯಲ್ಲಿದ್ದ ಪೊಲೀಸರು ರತನ್ ಲಾಲ್ ನನ್ನು ಬಂಧಿಸಲು ಮುಂದಾಗಿದ್ದಾರೆ. ಆದರೆ ಇದರಿಂದ ಭೀತಿಗೊಳಗಾಗಿ ಪೊಲೀಸ್ ಕಂಟ್ರೋಲ್ ರೂಮ್ಗೆ ಕರೆ ಮಾಡಿ, ತನ್ನನ್ನು ಯಾರೋ ಕಿಡ್ಯಾಪ್ ಮಾಡುತ್ತಿರುವುದಾಗಿ ತಿಳಿಸಿದ್ದ. ಕರೆಯ ಬೆನ್ನಲ್ಲೇ ಕಾಮಾಕ್ಷಿಪಾಳ್ಯ ಪೊಲೀಸರು ಸ್ಥಳಕ್ಕೆ ತೆರಳಿದಾಗ ಮಫ್ತಿಯಲ್ಲಿ ಬಂದಿದ್ದು ನಿಜವಾದ ಪೊಲೀಸರೇ ಎನ್ನುವುದು ತಿಳಿದುಬಂದಿದೆ. ಬಳಿಕ ರತನ್ ಲಾಲ್ ಹಾಗೂ ಮತ್ತೋರ್ವನನ್ನು ವಶಕ್ಕೆ ಪಡೆದಿದ್ದು ವಿಚಾರಣೆ ನಡೆಸಿದಾಗ ಮಾದಕವಸ್ತು ಪತ್ತೆಯಾಗಿತ್ತು.
ಎಂಟು ವರ್ಷಗಳಿಂದ ಖುದ್ದು ದಂಧೆಕೋರರಿಂದ ಡ್ರಗ್ಸ್ ಖರೀದಿಸಿ ವಹಿವಾಟು ನಡೆಸುತ್ತಿದ್ದ. ತನ್ನ ಮೇಲೆ ಅನುಮಾನ ಬಾರದಿರಲಿ ಎಂದು ಪೊಲೀಸರಿಗೆ ಮಾಹಿತಿದಾರನಾಗಿಯೂ ಗುರುತಿಸಿಕೊಂಡಿದ್ದ. ಈಗಾಗಲೇ ಆರೋಪಿಯಿಂದ ಸಿಂಥೆಟಿಕ್ ಹಾಗೂ ನಾನ್ ಸಿಂಥೆಟಿಕ್ ಡ್ರಗ್ ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
27-10-25 10:52 pm
Bangalore Correspondent
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
ಡಿಕೆಶಿ ದಿಢೀರ್ ದೆಹಲಿಗೆ ದೌಡು ; ವಿಶೇಷ ಏನೂ ಇಲ್ಲ,...
26-10-25 07:33 pm
ಪ್ರೀತಿ ನೆಪದಲ್ಲಿ ಹಿಂದು ಯುವತಿಗೆ ಮೋಸ ; ಮದುವೆಯಾಗಲ...
25-10-25 09:33 pm
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
26-10-25 11:01 pm
HK News Desk
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
27-10-25 11:01 pm
Mangalore Correspondent
ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ...
27-10-25 10:25 pm
ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
RSS Leader Kalladka Prabhakar Bhat: ಕಲ್ಲಡ್ಕ ಪ...
27-10-25 07:24 pm
ಹೈಕಮಾಂಡ್ ತೀರ್ಮಾನ ಮಾಡಿದ್ರೆ ಐದು ವರ್ಷ ಸಿಎಂ ಆಗಿರು...
27-10-25 05:56 pm
27-10-25 05:29 pm
HK News Desk
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm