ಬ್ರೇಕಿಂಗ್ ನ್ಯೂಸ್
04-09-21 01:23 pm Bangalore Correspondent ಕ್ರೈಂ
ಬೆಂಗಳೂರು, ಸೆ.4 : ತನ್ನ ಡ್ರಗ್ಸ್ ವಹಿವಾಟಿನ ಬಗ್ಗೆ ಅನುಮಾನ ಬಾರದಿರಲಿ ಎಂದು ಆತನೇ ಪೊಲೀಸರಿಗೆ ಮಾಹಿತಿದಾರನಾಗಿ ಗುರುತಿಸಿಕೊಂಡಿದ್ದ. ಪೊಲೀಸರಿಗೆ ಇತರ ಆರೋಪಿಗಳ ಬಗ್ಗೆ ಮಾಹಿತಿ ಕೊಟ್ಟು ಡ್ರಗ್ಸ್ ಜಾಲದಲ್ಲಿ ಸಿಲುಕಿಸುತ್ತಿದ್ದ. ಆದರೆ, ಈಗ ತಾನೇ ಡ್ರಗ್ಸ್ ಜಾಲದಲ್ಲಿ ಬಿದ್ದು ಕಾಮಾಕ್ಷಿಪಾಳ್ಯ ಪೊಲೀಸರ ಬಲೆಗೆ ಬಿದ್ದಿದ್ದಾನೆ.
ರತನ್ ಲಾಲ್ ಬಂಧಿತ ಆರೋಪಿಯಾಗಿದ್ದು, ಆತನಿಂದ ಏರ್ ಗನ್, 150 ಗ್ರಾಂ ಗಾಂಜಾ, 150 ಗ್ರಾಂ ಅಫೀಮು, ಒಂದಷ್ಟು ಸಿಂಥೆಟಿಕ್ ಡ್ರಗ್ ವಶಕ್ಕೆ ಪಡೆದುಕೊಳ್ಳಲಾಗಿದೆ. ಹಲವು ವರ್ಷಗಳಿಂದ ಡ್ರಗ್ಸ್ ದಂಧೆ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡುತ್ತಿದ್ದ. ಈತ ನೀಡಿದ ಸುಳಿವಿನ ಮೇರೆಗೆ ಜಯನಗರ, ಗಿರಿನಗರ, ಹಲಸೂರು ಗೇಟ್ ಪೊಲೀಸರು ಆರೋಪಿಗಳನ್ನು ಹಿಡಿದು ತರುತ್ತಿದ್ದರು.
ಮಾದಕ ವಸ್ತು ಜಾಲದಲ್ಲಿ ತೊಡಗಿರುವ ಮಾಹಿತಿ ಮೇರೆಗೆ ಮೊನ್ನೆ ಮಫ್ತಿಯಲ್ಲಿದ್ದ ಪೊಲೀಸರು ರತನ್ ಲಾಲ್ ನನ್ನು ಬಂಧಿಸಲು ಮುಂದಾಗಿದ್ದಾರೆ. ಆದರೆ ಇದರಿಂದ ಭೀತಿಗೊಳಗಾಗಿ ಪೊಲೀಸ್ ಕಂಟ್ರೋಲ್ ರೂಮ್ಗೆ ಕರೆ ಮಾಡಿ, ತನ್ನನ್ನು ಯಾರೋ ಕಿಡ್ಯಾಪ್ ಮಾಡುತ್ತಿರುವುದಾಗಿ ತಿಳಿಸಿದ್ದ. ಕರೆಯ ಬೆನ್ನಲ್ಲೇ ಕಾಮಾಕ್ಷಿಪಾಳ್ಯ ಪೊಲೀಸರು ಸ್ಥಳಕ್ಕೆ ತೆರಳಿದಾಗ ಮಫ್ತಿಯಲ್ಲಿ ಬಂದಿದ್ದು ನಿಜವಾದ ಪೊಲೀಸರೇ ಎನ್ನುವುದು ತಿಳಿದುಬಂದಿದೆ. ಬಳಿಕ ರತನ್ ಲಾಲ್ ಹಾಗೂ ಮತ್ತೋರ್ವನನ್ನು ವಶಕ್ಕೆ ಪಡೆದಿದ್ದು ವಿಚಾರಣೆ ನಡೆಸಿದಾಗ ಮಾದಕವಸ್ತು ಪತ್ತೆಯಾಗಿತ್ತು.
ಎಂಟು ವರ್ಷಗಳಿಂದ ಖುದ್ದು ದಂಧೆಕೋರರಿಂದ ಡ್ರಗ್ಸ್ ಖರೀದಿಸಿ ವಹಿವಾಟು ನಡೆಸುತ್ತಿದ್ದ. ತನ್ನ ಮೇಲೆ ಅನುಮಾನ ಬಾರದಿರಲಿ ಎಂದು ಪೊಲೀಸರಿಗೆ ಮಾಹಿತಿದಾರನಾಗಿಯೂ ಗುರುತಿಸಿಕೊಂಡಿದ್ದ. ಈಗಾಗಲೇ ಆರೋಪಿಯಿಂದ ಸಿಂಥೆಟಿಕ್ ಹಾಗೂ ನಾನ್ ಸಿಂಥೆಟಿಕ್ ಡ್ರಗ್ ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
06-02-26 10:56 pm
Mangalore Correspondent
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm