ಬ್ರೇಕಿಂಗ್ ನ್ಯೂಸ್
06-09-21 07:27 pm Headline Karnataka News Network ಕ್ರೈಂ
ನವದೆಹಲಿ, ಸೆ.6 : ಮಹಿಳೆಯ ಜೊತೆ ಅಫೇರ್ ಹೊಂದಿದ್ದ ಯುವಕನೊಬ್ಬ ಆಕೆಯನ್ನು ಮದುವೆಯಾಗದಿದ್ದರೆ, ತನ್ನ ಮೇಲೆ ರೇಪ್ ಕೇಸ್ ಕೊಡುತ್ತಾಳೆಂಬ ಭಯದಲ್ಲಿ ಮಹಿಳೆಯನ್ನೇ ಭೀಭತ್ಸವಾಗಿ ಕೊಲೆಗೈದು ಮುಖವನ್ನು ಗುರುತು ಸಿಗದಂತೆ ಜಜ್ಜಿಹಾಕಿದ ಕೃತ್ಯ ತಡವಾಗಿ ಬೆಳಕಿಗೆ ಬಂದಿದೆ.
ಪ್ರಕರಣ ಸಂಬಂಧಿಸಿ ಸೂರತ್ ಪೊಲೀಸರು 38 ವರ್ಷದ ವಿನಯ್ ರಾಯ್ ಎಂಬ ಬಿಹಾರ ಮೂಲದ ಯುವಕನನ್ನು ಬಂಧಿಸಿದ್ದಾರೆ. ಮಹಾರಾಷ್ಟ್ರದ ನಂದೂರ್ ಬಾರ್ ಜಿಲ್ಲೆಯಲ್ಲಿ ಘಟನೆ ನಡೆದಿತ್ತು. ಸಂಶಯದ ಮೇಲೆ ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕೃತ್ಯ ಬಯಲಾಗಿದೆ. ನಂದೂರ್ ಬಾರ್ ರೈಲು ಹಳಿಯ ಬಳಿ ಕುತ್ತಿಗೆ ಸೀಳಿ, ಮುಖದ ಚರ್ಮವನ್ನು ಸುಲಿದು ಗುರುತು ಸಿಗದಂತೆ ಮಾಡಿದ್ದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿತ್ತು.

ಮೂಲತಃ ಬಿಹಾರದವನಾಗಿರುವ ವಿನಯ್ ರಾಯ್, ಸೂರತ್ ನಲ್ಲಿ ಫ್ಯಾಕ್ಟರಿ ಒಂದರಲ್ಲಿ ಕೆಲಸ ಮಾಡುತ್ತಿದ್ದು, ಕಾರಜ್ ಎಂಬ ಗ್ರಾಮದಲ್ಲಿ ವಾಸವಿದ್ದ. ಆತನಿಗೆ ಮದುವೆಯಾಗಿದ್ದು ಎರಡು ಮಕ್ಕಳನ್ನು ಹೊಂದಿದ್ದ. ಈ ನಡುವೆ, ಬೇರೊಬ್ಬ ಮಹಿಳೆಯೊಂದಿಗೆ ಎರಡು ವರ್ಷಗಳಿಂದ ಸಂಬಂಧವನ್ನೂ ಇಟ್ಟುಕೊಂಡಿದ್ದ. ಇವರ ನಡುವೆ ಇತ್ತೀಚೆಗೆ ಜಟಾಪಟಿ ನಡೆದಿದ್ದು, ತನ್ನನ್ನು ಮದುವೆಯಾಗದಿದ್ದರೆ ಅತ್ಯಾಚಾರ ಕೇಸ್ ಹಾಕುವುದಾಗಿ ಬೆದರಿಸಿದ್ದಳು. ಆಕೆಗೆ ಈ ಹಿಂದೆಯೂ ಬೇರೊಬ್ಬನ ಜೊತೆ ಸಂಪರ್ಕ ಇದ್ದುದು ತಿಳಿದುಬಂದಿತ್ತು. ಅಲ್ಲದೆ, ಆ ಬಗ್ಗೆ ವ್ಯಕ್ತಿಯ ವಿರುದ್ಧ ಅತ್ಯಾಚಾರ ದೂರು ನೀಡಿ, ಜೈಲು ಪಾಲಾಗುವಂತೆ ಮಾಡಿದ್ದಳು. ಹಳೆ ವಿಚಾರವನ್ನು ಹೇಳುತ್ತಾ ತನ್ನನ್ನು ಮದುವೆಯಾಗದಿದ್ದರೆ, ನಿನ್ನ ವಿರುದ್ಧವೂ ಅತ್ಯಾಚಾರ ಕೇಸು ದಾಖಲಿಸುವುದಾಗಿ ಬೆದರಿಸಿದ್ದಳು. ಹಾಗಾಗಿ ಆಕೆಯನ್ನು ಮುಗಿಸಲು ಪ್ಲಾನ್ ಹಾಕಿ, ನಂದೂರ್ ಬಾರ್ ಗೆ ಕರೆದೊಯ್ದು ನಿರ್ಜನ ಪ್ರದೇಶದಲ್ಲಿ ಕೊಲೆ ಮಾಡಿದ್ದಾಗಿ ಒಪ್ಪಿಕೊಂಡಿದ್ದಾನೆ.

ನಂದೂರ್ ಬಾರ್ ರೈಲು ಹಳಿಯ ಬಳಿ ಮಹಿಳೆಯ ಶವ ಪತ್ತೆಯಾಗಿತ್ತು. ಅಲ್ಲಿನ ಪೊಲೀಸರು ತನಿಖೆ ನಡೆಸಿದಾಗ, ಮಹಿಳೆ ಮತ್ತು ಆಕೆಯನ್ನು ಕೊಲೆಗೈದ ಆರೋಪಿ ಇಬ್ಬರೂ ಸೂರತ್ ನವರು ಅನ್ನೋದು ಗೊತ್ತಾಗಿತ್ತು. ಸೂರತ್ ಪೊಲೀಸರು ಬೆನ್ನತ್ತಿದ್ದು, ಆರೋಪಿ ವಿನಯ್ ರಾಯ್ ಕೈವಾಡ ಕಂಡುಬಂದು ವಿಚಾರಣೆ ನಡೆಸಿದಾಗ ಮಹಿಳೆಯನ್ನು ವಿಕೃತವಾಗಿ ಕೊಂದು ಹಾಕಿರುವ ವಿಚಾರ ಬಯಲಾಗಿದೆ.
A 38-year-old man has allegedly murdered a woman with whom he was having an affair - afraid that she might lodge a complaint of rape against him if he did not marry her.
02-05-26 04:48 pm
HK News Staffer
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm