ಬ್ರೇಕಿಂಗ್ ನ್ಯೂಸ್
08-09-20 11:50 am Bangalore Correspondent ಕ್ರೈಂ
ಬೆಂಗಳೂರು, ಸೆಪ್ಟೆಂಬರ್ 8: ಮಾದಕ ಜಾಲಕ್ಕೆ ಸ್ಯಾಂಡಲ್ವುಡ್ ನಂಟಿದೆ ಎಂಬ ಆರೋಪ ಭಾರಿ ಸದ್ದು ಮಾಡುತ್ತಿರುವ ಹಿನ್ನೆಲೆಯಲ್ಲಿ ಬೆಳ್ಳಂ ಬೆಳಗ್ಗೆ ನಟಿ ಸಂಜನಾ ಗಲ್ರಾಣಿ ಮನೆಗೆ ದಾಳಿ ಮಾಡಿದ ಸಿಸಿಬಿ ಅಧಿಕಾರಿಗಳು ಮನೆ ಪರಿಶೀಲನೆ ನಡೆಸಿ, ಹೆಚ್ಚಿನ ವಿಚಾರಣೆಗೆ ಸಂಜನಾ ಅವರನ್ನು ವಶಕ್ಕೆ ಪಡೆದುಕೊಂಡಿದ್ದರು. ಇದೀಗ ಸಂಜನಾರನ್ನು ಬಂಧಿಸಿ ಅಧಿಕಾರಿಗಳು ಕಚೇರಿಗೆ ಕರೆದೊಯ್ದಿದ್ದಾರೆ.
ಮಂಗಳವಾರ ಬೆಳ್ಳಂಬೆಳಗ್ಗೆಯೇ ಇಂದಿರಾ ನಗರದಲ್ಲಿರುವ ನಟಿ ಸಂಜನಾ ಅವರ ನಿವಾಸದ ಮೇಲೆ ಸಿಸಿಬಿ ಇನ್ಸ್ಪೆಕ್ಟರ್ ಅಂಜುಮಾಲ, ಪೂರ್ಣಿಮಾ ನೇತೃತ್ವದ ತಂಡದಿಂದ ದಾಳಿ ನಡೆದಿತ್ತು. ಮನೆಯಲ್ಲಿ ಸುದೀರ್ಘ ಪರೀಶಿಲನೆ ನಡೆಸಿದ ಅಧಿಕಾರಿಗಳು ಸಾಕಷ್ಟು ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ.
ಸಂಜನಾ ಪರ್ಸನಲ್ ಮೊಬೈಲ್ನಲ್ಲಿ ಅಧಿಕಾರಿಗಳು ಕಾಂಟ್ಯಾಕ್ಟ್ ಡೀಟೈಲ್ಸ್ ಕಲೆಹಾಕಿದ್ದು, ವಾಟ್ಸ್ಆ್ಯಪ್ ಚಾಟ್ ಹಾಗೂ ಮೆಸೇಂಜರ್ನಲ್ಲಿರುವ ಮೆಸೇಜಸ್ಗಳನ್ನು ಕಲೆಹಾಕಿದ್ದಾರೆ. ಸಂಜನಾ ಎರಡು ಮೊಬೈಲ್ ಬಳಸುತ್ತಿದ್ದರು ಎಂದು ತಿಳಿದುಬಂದಿದ್ದು, ಸ್ನೇಹಿತರಿಗೆಂದೇ ಒಂದು ಹಾಗೂ ಸಿನಿಮಾ ಇಂಡ್ರಸ್ಟ್ರಿಗೆ ಒಂದು ಪೋನ್ ಇಟ್ಟುಕೊಂಡಿದ್ದರು ಎಂದು ತಿಳಿದುಬಂದಿದೆ.
ಸಾಮಾಜಿಕ ಜಾಲತಾಣಗಳಾದ ಇನ್ಸ್ಟಾಗ್ರಾಂ, ಫೇಸ್ ಬುಕ್, ವಾಟ್ಸ್ಆ್ಯಪ್ನಲ್ಲಿ ಎಷ್ಟು ಅಕೌಂಟ್ಗಳಿವೆ ಎಂದು ಪ್ರಶ್ನಿಸಿದ್ದಾರೆ. ದಾಳಿ ವೇಳೆ ಪೆನ್ಡ್ರೈವ್, ಟ್ಯಾಬ್, ಲ್ಯಾಪ್ಟಾಪ್ ಸೇರಿ ಕೆಲ ಫೈಲ್ಗಳನ್ನು ವಶಕ್ಕೆ ಪಡೆದಿದ್ದಾರೆ. ಹೆಚ್ಚಿನ ವಿಚಾರಣೆಗಾಗಿ ನಟಿ ಸಂಜನಾರನ್ನು ಬಂಧಿಸಿ ಚಾಮರಾಜಪೇಟೆಯ ಸಿಸಿಬಿ ಕಚೇರಿಗೆ ಕರೆದೊಯ್ದಿದ್ದಾರೆ.
08-11-25 12:38 pm
HK News Desk
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
08-11-25 04:08 pm
Mangaluru Staff
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm