ಬ್ರೇಕಿಂಗ್ ನ್ಯೂಸ್
08-09-21 12:20 pm Headline Karnataka News Network ಕ್ರೈಂ
ಚಿಕ್ಕಮಗಳೂರು, ಸೆ. 8: ಚಿಕ್ಕಮಗಳೂರು ಜಿಲ್ಲೆಯ ಗೋಣಿಬೀಡು ಪೊಲೀಸ್ ಠಾಣೆಯಲ್ಲಿ ದಲಿತ ಯುವಕನಿಗೆ ಠಾಣಾಧಿಕಾರಿ ಮೂತ್ರ ಕುಡಿಸಿದ ಪ್ರಕರಣ ಸಂಬಂಧ, ನ್ಯಾಯಾಂಗ ಬಂಧನದಲ್ಲಿರುವ ಆರೋಪಿ ಪಿಎಸ್ಐ ಅರ್ಜುನ್ ಸಲ್ಲಿಸಿದ್ದ ಮಧ್ಯಂತರ ಜಾಮೀನು ಅರ್ಜಿಯನ್ನು ವಜಾಗೊಳಿಸಿ ಚಿಕ್ಕಮಗಳೂರು 1ನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯದ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ.
ಕರ್ನಾಟಕ ಹೈಕೋರ್ಟ್ಲ್ಲಿ ಜಾಮೀನು ವಜಾ ಆಗುತ್ತಿದ್ದಂತೆ ತನಿಖೆ ನಡೆಸುತ್ತಿದ್ದ ಸಿಐಡಿ ಪೊಲೀಸರ ತಂಡ ಆರೋಪಿ ಅಅರ್ಜುನ್ರನ್ನು ಬೆಂಗಳೂರಿನಲ್ಲಿ ಬಂಧಿಸಿದ್ದರು. ಬಳಿಕ ಸಿಐಡಿ ಪೊಲೀಸರು ಆರೋಪಿಯನ್ನು ಚಿಕ್ಕಮಗಳೂರು ಜಿಲ್ಲಾ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು.

ಕರ್ನಾಟಕ ಹೈಕೋರ್ಟ್ಲ್ಲಿ ಜಾಮೀನು ವಜಾ ಆಗುತ್ತಿದ್ದಂತೆ ತನಿಖೆ ನಡೆಸುತ್ತಿದ್ದ ಸಿಐಡಿ ಪೊಲೀಸರ ತಂಡ ಆರೋಪಿ ಅಅರ್ಜುನ್ರನ್ನು ಬೆಂಗಳೂರಿನಲ್ಲಿ ಬಂಧಿಸಿದ್ದರು. ಬಳಿಕ ಸಿಐಡಿ ಪೊಲೀಸರು ಆರೋಪಿಯನ್ನು ಚಿಕ್ಕಮಗಳೂರು ಜಿಲ್ಲಾ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು.
ಮಂಗಳವಾರ ಆರೋಪಿ ಅರ್ಜುನ್ ಸಲ್ಲಿಸಿದ್ದ ಮಧ್ಯಂತರ ಜಾಮೀನು ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿ ತೀರ್ಪು ನೀಡಿದೆ. ಜಾಮೀನು ಅರ್ಜಿ ವಿಚಾರಣೆ ವೇಳೆ ಸಂತ್ರಸ್ತ ದಲಿತ ಯುವಕ ಪುನೀತ್ ಪರವಾಗಿ ಸರಕಾರಿ ಅಭಿಯೋಜಕಿ ಭಾವನಾ ಹಾಗೂ ಖಾಸಗಿ ವಕೀಲ ಪರಮೇಶ್ವರ್ ವಾದ ಮಂಡಿಸಿದ್ದರು.

ಮೂಡಿಗೆರೆ ತಾಲೂಕಿನ ಕಿರಗುಂದದಲ್ಲಿ ಮಹಿಳೆಯ ಮನೆಯಲ್ಲಿ ನಡೆದ ಗಲಾಟೆ ವಿಚಾರಕ್ಕೆ ಸಂಬಂಧಿಸಿದಂತೆ ಯುವಕ ಕೆ. ಎಲ್. ಪುನೀತ್ ಮೇಲೆ ಗೋಣಿಬೀಡು ಠಾಣೆಯಲ್ಲಿ ದೌರ್ಜನ್ಯ ಎಸಗಲಾಗಿತ್ತು.
ಆದರೆ ಮಹಿಳೆ ದೂರು ನೀಡದಿದ್ದರೂ ಪುನೀತ್ರನ್ನು ಠಾಣೆಗೆ ಕರೆತಂದಿದ್ದ ಪಿಎಸ್ಐ ಅರ್ಜುನ್ ದೌರ್ಜನ್ಯ ನಡೆಸಿದ್ದರು. ಠಾಣೆಯಲ್ಲಿ ತಲೆಕೆಳಗಾಗಿ ನೇತು ಹಾಕಿ ಪುನೀತ್ ಮೇಲೆ ಹಲ್ಲೆ ಮಾಡಲಾಗಿತ್ತು. ನೀರು ಕೇಳಿದಾಗ ಮೂತ್ರ ಕುಡಿಸಲು ಪ್ರಯತ್ನ ನಡೆಸಲಾಗಿತ್ತು. ನೆಲದಲ್ಲಿ ಬಿದ್ದಿದ್ದ ಮೂತ್ರ ನೆಕ್ಕುವಂತೆ ಒತ್ತಾಯಿಸಲಾಗಿತ್ತು.
ಈ ಕುರಿತು ಪುನೀತ್ ಪೊಲೀಸರಿಗೆ ದೂರು ನೀಡಿದ್ದರು. ಘಟನೆ ಬೆಳಕಿಗೆ ಬಂದ ಬಳಿಕ ಚಿಕ್ಕಮಗಳೂರು ಎಸ್ಪಿ ಸೇರಿದಂತೆ ಹಿರಿಯ ಅಧಿಕಾರಿಗಳು ಗೋಣಿಬೀಡು ಠಾಣೆಗೆ ಭೇಟಿ ನೀಡಿದ್ದರು. ಯುವಕ ಪುನೀತ್ ಭೇಟಿಯಾಗಿ ಆರೋಪದ ಬಗ್ಗೆ ಮಾತುಕತೆ ನಡೆಸಿದ್ದರು. ಅರ್ಜುನ್ ವಿರುದ್ಧ ದೂರು ಸಹ ದಾಖಲಾಗಿತ್ತು.
dalit youth drink urine case court dismisses psi arjun bail application
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm