ಬ್ರೇಕಿಂಗ್ ನ್ಯೂಸ್
08-09-21 01:18 pm Mangaluru Correspondent ಕ್ರೈಂ
ಪುತ್ತೂರು, ಸೆ.8: ಕಬಕದಲ್ಲಿ ಸ್ವಾತಂತ್ರ್ಯ ರಥಯಾತ್ರೆಗೆ ತಡೆಯೊಡ್ಡಿದ ಪ್ರಕರಣದಲ್ಲಿ ಪುತ್ತೂರು ಪೊಲೀಸರು ಮತ್ತೆ ನಾಲ್ವರನ್ನು ಬಂಧಿಸಿದ್ದಾರೆ. ನಾಲ್ಕು ಮಂದಿ ಆರೋಪಿಗಳು ಬಂಧನ ತಪ್ಪಿಸಲು ಜಿಲ್ಲಾ ಕೋರ್ಟಿನಲ್ಲಿ ನಿರೀಕ್ಷಣಾ ಜಾಮೀನು ಸಲ್ಲಿಸಿದ್ದರು. ಆದರೆ, ಜಾಮೀನು ನಿರಾಕರಿಸಿದ ಹಿನ್ನೆಲೆಯಲ್ಲಿ ಪೊಲೀಸರು ನಾಲ್ಕು ಮಂದಿಯನ್ನು ಬಂಧಿಸಿದ್ದಾರೆ.
ಕಬಕ ನಿವಾಸಿಗಳಾದ ನೌಶಾದ್, ಮಹಮ್ಮದ್ ಹ್ಯಾರಿಸ್, ಮಹಮ್ಮದ್ ತೌಸಿಫ್, ಶಂಸುದ್ದೀನ್ ಬಂಧಿತರು. ಇವರು ಮಂಗಳೂರಿನ 5ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಕೋರ್ಟ್ ಜಾಮೀನು ಅರ್ಜಿಯನ್ನು ವಜಾ ಮಾಡಿತ್ತು.

ಪುತ್ತೂರು ನಗರ ಠಾಣೆ ಇನ್ ಸ್ಪೆಕ್ಟರ್ ಗೋಪ ನಾಯ್ಕ್ ಮತ್ತು ಸಬ್ ಇನ್ ಸ್ಪೆಕ್ಟರ್ ಸುತೇಶ್ ನೇತೃತ್ವದಲ್ಲಿ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ಆಗಸ್ಟ್ 15ರಂದು ಕಬಕ ಗ್ರಾಮ ಪಂಚಾಯತ್ ವತಿಯಿಂದ 75ನೇ ಸ್ವಾತಂತ್ರ್ಯೋತ್ಸವದ ಹಿನ್ನೆಲೆಯಲ್ಲಿ ಸ್ವಾತಂತ್ರ್ಯ ರಥಯಾತ್ರೆ ಹಮ್ಮಿಕೊಳ್ಳಲಾಗಿತ್ತು. ರಥಕ್ಕೆ ಚಾಲನೆ ನೀಡುತ್ತಿದ್ದಂತೆ ಎಸ್ ಡಿಪಿಐ ಕಾರ್ಯಕರ್ತರ ಗುಂಪು ರಥಕ್ಕೆ ತಡೆಯೊಡ್ಡಿ ಧಿಕ್ಕಾರ ಘೋಷಣೆ ಕೂಗಿತ್ತು. ಅಲ್ಲದೆ, ರಥದಲ್ಲಿದ್ದ ಸ್ವಾತಂತ್ರ್ಯ ಸೇನಾನಿ ವೀರ ಸಾವರ್ಕರ್ ಚಿತ್ರವನ್ನು ತೆಗೆದು ಟಿಪ್ಪು ಚಿತ್ರ ಹಾಕುವಂತೆ ಒತ್ತಡ ಹೇರಿತ್ತು. ಈ ಬಗ್ಗೆ ಕಡಬ ಗ್ರಾಮ ಪಂಚಾಯತ್ ಪಿಡಿಓ ದೂರಿನಂತೆ ಪೊಲೀಸರು ಪ್ರಕರಣ ದಾಖಲಿಸಿದ್ದರು.
Read: ಸ್ವಾತಂತ್ರ್ಯ ರಥಕ್ಕೆ ಎಸ್ಡಿಪಿಐ ತಡೆ ; ಮೂವರು ಆರೋಪಿಗಳ ಬಂಧಿಸಿದ ಪುತ್ತೂರು ಪೊಲೀಸರು
The police have arrested four more persons relating to the obstruction of the movement of the 'Grama Swarajya Ratha' that was taken around on the occasion of the celebration of 75 years of Indian independence within Kabaka gram panchayat limits.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm